ಸಿದ್ದರಾಮಯ್ಯ ಬೆಂಗಳೂರು ಪ್ರದಕ್ಷಿಣೆ ಮುಖ್ಯಾಂಶಗಳು
ಬೆಂಗಳೂರು, ಜೂ.15 : ಬೆಂಗಳೂರಿನ ಅಭಿವೃದ್ಧಿ ಕೆಲಸಗಳ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ನಗರ ಪ್ರದಕ್ಷಿಣೆ ನಡೆಸಿದರು. ಆನೆಪಾಳ್ಯ, ಶಾಂತಿನಗರ, ವಿವೇಕನಗರ, ದೊಮ್ಮಲೂರು ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದರು.
ಸಿದ್ದರಾಮಯ್ಯ ಅವರು ಪ್ರತಿ ಶನಿವಾರ ನಗರ ಪ್ರದಕ್ಷಿಣೆ ನಡೆಸುತ್ತಿದ್ದರು. ಆದರೆ, ಜೂನ್ 13ರಂದು ಬೇರೆ-ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿ ಇದ್ದಿದ್ದರಿಂದ ಸೋಮವಾರ ನಗರ ಪ್ರದಕ್ಷಿಣೆ ನಡೆಸಿದರು. ಪ್ರದಕ್ಷಿಣೆ ವೇಳೆ ಅವರಿಗೆ ಲೋಬಿಪಿ ಉಂಟಾಗಿದ್ದರಿಂದ ಬಾಣಸವಾಡಿ, ಕೆಜಿ ಹಳ್ಳಿ ಪ್ರವಾಸ ಮೊಟಕುಗೊಳಿಸಿ ಗೃಹ ಕಚೇರಿ ಕೃಷ್ಣಾಗೆ ವಾಪಸ್ ಬಂದರು.

ಬೆಂಗಳೂರು ಪ್ರದಕ್ಷಿಣೆಯ ಮುಖ್ಯಾಂಶಗಳು
* ಮೊದಲು ಆನೆಪಾಳ್ಯಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಿಸಿದರು. ನಂತರ ಶಾಂತಿನಗರಕ್ಕೆ ಬಂದ ಸಿಎಂ ಬಳಿ ನಂದನ್ ಬಡಾವಣೆ ಜನರು ಮೂಲಸೌಕರ್ಯ ಒದಗಿಸುವಂತೆ ಮನವಿ ಮಾಡಿದರು. [ಮೇ 15ರ ಬೆಂಗಳೂರು ಪ್ರದಕ್ಷಿಣೆಯಲ್ಲಿ ಏನಾಯ್ತು?]
* ಈಜಿಪುರಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಮನೆ ಕಳೆದುಕೊಂಡವರು ಮನೆ ನೀಡುವಂತೆ ಮನವಿ ಮಾಡಿದರು. ಸರ್ಕಾರ ಸಂತ್ರಸ್ತರಿಗೆ ನೀಡಿ ಭರವಸೆಯನ್ನು ಉಳಿಸಿಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. [ಬೆಂಗಳೂರು ರೌಂಡ್ಸ್ : ಪೀಣ್ಯ ಅಭಿವೃದ್ಧಿಗೆ 100 ಕೋಟಿ ನೆರವು]
* ದೊಮ್ಮಲೂರಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಬಯೋಗ್ಯಾಸ್ ಘಟಕದ ಕಾಮಗಾರಿಯನ್ನು ವೀಕ್ಷಿಸಿದರು. ಹಲಸೂರಿನಲ್ಲಿ ಬಿಬಿಎಂಪಿ ಆಸ್ಪತ್ರೆಗೆ ಭೇಟಿ ನೀಡಿದರು.
ನಗರ ಪ್ರದಕ್ಷಿಣೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು, 'ಜಾನ್ಸನ್ ಮಾರುಕಟ್ಟೆ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿತ್ತು. ಆದರೆ, ಯಾರೂ ಟೆಂಡರ್ಗೆ ಬಂದಿಲ್ಲ ಆದ್ದರಿಂದ ಮತ್ತೊಮ್ಮೆ ಟೆಂಡರ್ ಕರೆಯಲು ಸೂಚನೆ ನೀಡಿದ್ದೇನೆ' ಎಂದು ಹೇಳಿದರು.
'ಬೆಂಗಳೂರು ನಗರದಲ್ಲಿ ಸೇನೆಗೆ ಸೇರಿದ ಜಮೀನು ಸಾಕಷ್ಟು ಕಡೆ ಇದೆ. ಈ ಜಮೀನಿನಲ್ಲಿ ಬಡವರು ವಾಸ ಮಾಡುತ್ತಿದ್ದಾರೆ. ಈ ಮನೆಗಳನ್ನು ತೆರವುಗೊಳಿಸುವಂತೆ. ನೋಟಿಸ್ ನೀಡಲಾಗಿದೆ. ಈ ಕುರಿತು ರಕ್ಷಣಾ ಸಚಿವರ ಜೊತೆ ಮಾತುಕತೆ ನಡೆಸುತ್ತೇನೆ' ಎಂದು ಸಿದ್ದರಾಮಯ್ಯ ತಿಳಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications