ಸಿದ್ದರಾಮಯ್ಯ ಬೆಂಗಳೂರು ಪ್ರದಕ್ಷಿಣೆ ಮುಖ್ಯಾಂಶಗಳು
ಬೆಂಗಳೂರು, ಜೂ.15 : ಬೆಂಗಳೂರಿನ ಅಭಿವೃದ್ಧಿ ಕೆಲಸಗಳ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ನಗರ ಪ್ರದಕ್ಷಿಣೆ ನಡೆಸಿದರು. ಆನೆಪಾಳ್ಯ, ಶಾಂತಿನಗರ, ವಿವೇಕನಗರ, ದೊಮ್ಮಲೂರು ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದರು.
ಸಿದ್ದರಾಮಯ್ಯ ಅವರು ಪ್ರತಿ ಶನಿವಾರ ನಗರ ಪ್ರದಕ್ಷಿಣೆ ನಡೆಸುತ್ತಿದ್ದರು. ಆದರೆ, ಜೂನ್ 13ರಂದು ಬೇರೆ-ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿ ಇದ್ದಿದ್ದರಿಂದ ಸೋಮವಾರ ನಗರ ಪ್ರದಕ್ಷಿಣೆ ನಡೆಸಿದರು. ಪ್ರದಕ್ಷಿಣೆ ವೇಳೆ ಅವರಿಗೆ ಲೋಬಿಪಿ ಉಂಟಾಗಿದ್ದರಿಂದ ಬಾಣಸವಾಡಿ, ಕೆಜಿ ಹಳ್ಳಿ ಪ್ರವಾಸ ಮೊಟಕುಗೊಳಿಸಿ ಗೃಹ ಕಚೇರಿ ಕೃಷ್ಣಾಗೆ ವಾಪಸ್ ಬಂದರು.

ಬೆಂಗಳೂರು ಪ್ರದಕ್ಷಿಣೆಯ ಮುಖ್ಯಾಂಶಗಳು
* ಮೊದಲು ಆನೆಪಾಳ್ಯಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಿಸಿದರು. ನಂತರ ಶಾಂತಿನಗರಕ್ಕೆ ಬಂದ ಸಿಎಂ ಬಳಿ ನಂದನ್ ಬಡಾವಣೆ ಜನರು ಮೂಲಸೌಕರ್ಯ ಒದಗಿಸುವಂತೆ ಮನವಿ ಮಾಡಿದರು. [ಮೇ 15ರ ಬೆಂಗಳೂರು ಪ್ರದಕ್ಷಿಣೆಯಲ್ಲಿ ಏನಾಯ್ತು?]
* ಈಜಿಪುರಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಮನೆ ಕಳೆದುಕೊಂಡವರು ಮನೆ ನೀಡುವಂತೆ ಮನವಿ ಮಾಡಿದರು. ಸರ್ಕಾರ ಸಂತ್ರಸ್ತರಿಗೆ ನೀಡಿ ಭರವಸೆಯನ್ನು ಉಳಿಸಿಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. [ಬೆಂಗಳೂರು ರೌಂಡ್ಸ್ : ಪೀಣ್ಯ ಅಭಿವೃದ್ಧಿಗೆ 100 ಕೋಟಿ ನೆರವು]
* ದೊಮ್ಮಲೂರಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಬಯೋಗ್ಯಾಸ್ ಘಟಕದ ಕಾಮಗಾರಿಯನ್ನು ವೀಕ್ಷಿಸಿದರು. ಹಲಸೂರಿನಲ್ಲಿ ಬಿಬಿಎಂಪಿ ಆಸ್ಪತ್ರೆಗೆ ಭೇಟಿ ನೀಡಿದರು.
ನಗರ ಪ್ರದಕ್ಷಿಣೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು, 'ಜಾನ್ಸನ್ ಮಾರುಕಟ್ಟೆ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿತ್ತು. ಆದರೆ, ಯಾರೂ ಟೆಂಡರ್ಗೆ ಬಂದಿಲ್ಲ ಆದ್ದರಿಂದ ಮತ್ತೊಮ್ಮೆ ಟೆಂಡರ್ ಕರೆಯಲು ಸೂಚನೆ ನೀಡಿದ್ದೇನೆ' ಎಂದು ಹೇಳಿದರು.
'ಬೆಂಗಳೂರು ನಗರದಲ್ಲಿ ಸೇನೆಗೆ ಸೇರಿದ ಜಮೀನು ಸಾಕಷ್ಟು ಕಡೆ ಇದೆ. ಈ ಜಮೀನಿನಲ್ಲಿ ಬಡವರು ವಾಸ ಮಾಡುತ್ತಿದ್ದಾರೆ. ಈ ಮನೆಗಳನ್ನು ತೆರವುಗೊಳಿಸುವಂತೆ. ನೋಟಿಸ್ ನೀಡಲಾಗಿದೆ. ಈ ಕುರಿತು ರಕ್ಷಣಾ ಸಚಿವರ ಜೊತೆ ಮಾತುಕತೆ ನಡೆಸುತ್ತೇನೆ' ಎಂದು ಸಿದ್ದರಾಮಯ್ಯ ತಿಳಿಸಿದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ











Click it and Unblock the Notifications