ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡಗೆ ಸಿದ್ದರಾಮಯ್ಯ ಅವರಿಂದ ಬೆದರಿಕೆ: ಎಚ್ಡಿಕೆ
ಬೆಂಗಳೂರು, ಡಿಸೆಂಬರ್ 19 : ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಜಿ.ಟಿ. ದೇವೇಗೌಡ ಅವರನ್ನು ಕೆ.ಎಚ್.ಬಿ. ಹಗರಣದ ನೆಪದಲ್ಲಿ ಬೆದರಿಸಲು ಹೊರಟಿದ್ದಾರೆ. ಅಧಿಕಾರ ಶಾಶ್ವತ ಅಲ್ಲ ಎಂಬುದನ್ನು ಮರೆಯಬಾರದು ಎಂದು ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಅಧಿಕಾರ ದುರ್ಬಳಗೆ ಮಾಡಿಕೊಂಡು ವಿರೋಧಿಗಳನ್ನು ಭಯಭೀತಿಗೊಳಿಸುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರ ಮೇಲೆ ದಾಳಿ ಮಾಡಿಸಿತ್ತು. ಆದರೆ ರಾಜ್ಯ ಸರ್ಕಾರ ಕೇಂದ್ರಕ್ಕಿಂತ ಯಾವುದರಲ್ಲೂ ಕಡಿಮೆ ಇಲ್ಲ ಎಂದರು.

ಶಿಕ್ಷಣ ಇಲಾಖೆಯಲ್ಲಿ ಲ್ಯಾಪ್ ಟಾಪ್ ಖರೀದಿಯಲ್ಲಿ ಹಗರಣ ಆಗಿದೆ ಎಂದು ಅಧಿಕಾರಿಯೇ ಪತ್ರ ಬರೆಯುತ್ತಾರೆ. ಆದರೆ ಸರ್ಕಾರ ಏನು ಕ್ರಮ ಕೈಗೊಂಡಿದೆ. ಈಗ ಜೆಡಿಎಸ್ನ ಅಭ್ಯರ್ಥಿಯನ್ನು ಹೆದರಿಸಿಸುವ ಕೆಲಸ ಮಾಡುತ್ತಿದೆ. ಅಧಿಕಾರಿಗಳು ಕಾನೂನು ಬದ್ಧವಾಗಿ ತನಿಖೆ ನಡೆಸಲಿ. ಕೆಂಪಯ್ಯ ಅವರ ಸೂಚನೆಯಂತೆ ತನಿಖೆ ಮಾಡುವುದಲ್ಲ. 4 ತಿಂಗಳು ಕಳೆದ ಮೇಲೆ ಅಧಿಕಾರಿಗಳು ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಾಗುತ್ತದೆ. ೨೦೧೧ರಲ್ಲೇ ಗೃಹ ಮಂಡಳಿಯಲ್ಲಿ ಅಕ್ರಮ ನಡೆದಿಲ್ಲ ಎಂದು ವರದಿ ಕೊಟ್ಟಿದ್ದರು. ಆದಾಗ್ಯೂ ಈ ಪ್ರಕರಣವನ್ನು ಕೆದಕಿದ್ದಾರೆ ಎಂದರು.
ಎರಡು ಸಾವಿರ ಕೋಟಿ ಹಗರಣ ಬಯಲು ಮಾಡುತ್ತೀನಿ ಎನ್ನುವುದು ಹಿಟ್ ಆಂಡ್ ರನ್ ಅಲ್ಲ. ಎಲ್ಲಾ ದಾಖಲೆಗಳನ್ನು ತೋ












Click it and Unblock the Notifications