ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ವಿರುದ್ಧ ಫೆ.7ರಂದು ಬಿಜೆಪಿ ಯುವಮೋರ್ಚಾ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 6 : ಕರ್ನಾಟಕ ಬಿಜೆಪಿ ಯುವ ಮೋರ್ಚಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಫೆ.7ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ.

ಬಿಜೆಪಿ ಯುವಮೋರ್ಚಾ ಬೆಂಗಳೂರು ಘಟಕ ವತಿಯಿಂದ ಬುಧವಾರ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ನಮ್ಮ ರಾಜ್ಯವೇ ಬೆಸ್ಟ್-ಫಸ್ಟ್ : ಮೋದಿಗೆ ಸಿದ್ದರಾಮಯ್ಯ ತಿರುಗೇಟು!ನಮ್ಮ ರಾಜ್ಯವೇ ಬೆಸ್ಟ್-ಫಸ್ಟ್ : ಮೋದಿಗೆ ಸಿದ್ದರಾಮಯ್ಯ ತಿರುಗೇಟು!

ಈ ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಬೆಂಗಳೂರು ನಗರ ಯುವಮೋರ್ಚಾ ಅಧ್ಯಕ್ಷರಾದ ಸಪ್ತಗಿರಿಗೌಡ, ನಗರ ಜಿಲ್ಲೆಯ ಯುವಮೋರ್ಚಾ ಅಧ್ಯಕ್ಷ ನವೀನ್ ರೆಡ್ಡಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

siddaramaiah

ಹೂಗೂಚ್ಛ ನೀಡಿ ಸ್ವಾಗತ : ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದಿಂದ ಬೆಂಗಳೂರು ರಾಜ್ಯ ಬಿಜೆಪಿ ಕಾರ್ಯಾಲಯದ ತನಕ ಸ್ವಚ್ಛ ಭಾರತ ಅಭಿಯಾನದ ಜಾಗೃತಿ ಓಟ ನಡೆಸಲಾಗಿದೆ.

ಪರ್ಸೆಂಟೇಜ್ ಸರ್ಕಾರದ ವಿರುದ್ಧ ಮೋದಿ ಟೀಕೆಗೆ ಜನತೆ ಒಪ್ಪಿಗೆಪರ್ಸೆಂಟೇಜ್ ಸರ್ಕಾರದ ವಿರುದ್ಧ ಮೋದಿ ಟೀಕೆಗೆ ಜನತೆ ಒಪ್ಪಿಗೆ

ಓಟದಲ್ಲಿ ಭಾಗಿಯಾಗಿದ್ದ ರಮೇಶ್ ಜಿರಾಳ ಅವರನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಇಂದು ಹೂಗುಚ್ಛ ನೀಡಿ ಸ್ವಾಗತಿಸಿದರು.

Siddaramaiah comment on Modi : BJP yuva morcha calls for protest

ಈ ಸಂದರ್ಭದಲ್ಲಿ ಬೆಂಗಳೂರು ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಶಾರದಾ ನಾಯ್ಕ, ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾ ಶೇಖರಪ್ಪ ತಳವಾರ, ಅಪ್ಪಾಜಿ ಗೌಡ್, ಸಂಗಮೇಶ ಹತ್ತಿಗುಡ್ಡ, ಶರಣಪ್ಪ ಮುಂತಾದವರು ಹಾಜರಿದ್ದರು.
English summary
Karnataka Bharatiya Janata Party (BJP) yuva morcha has called for a protest on February 7, 2018 against Chief Minister Siddaramaiah for his comment on Prime Minister of India Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X