'ಜೆ.ಪಿ.ನಗರವೋ ಮತ್ತೊಂದು ನಗರವೋ ಒತ್ತುವರಿ ತೆರವು ಖಚಿತ'
ಬೆಂಗಳೂರು, ಆಗಸ್ಟ್ 20 : 'ರಾಜ ಕಾಲುವೆ ಮತ್ತು ಕೆರೆಗಳನ್ನು ಒತ್ತುವರಿ ಮಾಡಿಕೊಂಡವರು ಯಾರೇ ಆಗಿರಲಿ, ಅವರು ಎಷ್ಟೇ ಪ್ರಭಾವಿಗಳಾಗಿರಲಿ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಂಜೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಪ್ರಭಾವಿಗಳು ಕಟ್ಟಿರುವ ಮನೆಗಳನ್ನು ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕೈ ಬಿಡಲಾಗಿದೆ ಎಂಬುದು ಸುಳ್ಳು. ಅದು ಮಾಧ್ಯಮಗಳ ಸೃಷ್ಟಿ' ಎಂದು ಹೇಳಿದರು.[ಒತ್ತುವರಿ ತೆರವಿಗೆ ತೊಂದರೆ ಇಲ್ಲ ಎಂದ ದರ್ಶನ್]

'ಒತ್ತುವರಿ ತೆರವು ವಿಚಾರದಲ್ಲಿ ಯಾರಿಗೂ ಸಹಾಯ ಮಾಡುವ ಪ್ರಶ್ನೆಯೇ ಇಲ್ಲ. ಸಹಾಯ ಕೇಳಿ ನಮ್ಮ ಬಳಿಗೆ ಯಾರೂ ಬರುವ ಮಾತೂ ಇಲ್ಲ. ದೊಡ್ಡವರಾಗಲಿ, ಚಿಕ್ಕವರಾಗಲಿ. ಅದು ಜೆ.ಪಿ. ನಗರವಾಗಲಿ, ಮತ್ತೊಂದು ನಗರವೇ ಆಗಿರಲಿ. ಒತ್ತುವರಿ ಆಗಿದ್ದರೆ ತೆರವು ಮಾಡಲೇಬೇಕಾಗುತ್ತದೆ' ಎಂದು ತಿಳಿಸಿದರು.[ರಾಜಕಾಲುವೆ ಒತ್ತುವರಿ ವಿವರ ಈಗ ವೆಬ್ ಸೈಟ್ ನಲ್ಲಿ ಲಭ್ಯ]
'ರಾಜ ಕಾಲುವೆಗಳಲ್ಲಿ ನೀರು ಹರಿದು ಹೋಗಲು ಎಲ್ಲೆಲ್ಲಿ ಅಡಚಣೆ ಆಗಿದೆಯೋ, ಎಲ್ಲೆಲ್ಲಿ ಅದರಿಂದ ಸಾರ್ವಜನಿಕರಿಗೆ ತೊಂದರೆ ಆಗಿದೆಯೋ ಅಲ್ಲಿ ಕಾರ್ಯಾಚರಣೆ ನಡೆಯುತ್ತದೆ. ಕೆರೆಗಳಲ್ಲಿ ಬಿಡಿಎ ವತಿಯಿಂದಲೇ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಮೂಲ ಸ್ವರೂಪ ಕಳೆದುಕೊಂಡು ನಿರುಪಯುಕ್ತವಾಗಿರುವ ಕೆರೆಗಳಲ್ಲಿ ನಿವೇಶನಗಳನ್ನು ಅಭಿವೃದ್ಧಿಪಡಿಸಿ ಹಂಚಿಕೆ ಮಾಡಲಾಗಿದೆ' ಎಂದು ಸಮರ್ಥಿಸಿಸಿಕೊಂಡರು.[ಒತ್ತುವರಿ ತೆರವು ಕಾರ್ಯಾಚರಣೆ, ಪರಿಹಾರ ಸಿಗುತ್ತಾ?]
'ಕೆಂಪಾಬುದಿ ಕೆರೆಯಲ್ಲಿ ಬಸ್ ನಿಲ್ದಾಣ ತಲೆ ಎತ್ತಿದೆ. ಮಿಲ್ಲರ್ ಕೆರೆಯಲ್ಲಿ ಕಾಂಗ್ರೆಸ್ ಕಚೇರಿ ಮತ್ತಿತರ ಕಟ್ಟಡಗಳಿವೆ. ಒಂದು ವೇಳೆ ಕಾರ್ಯಾಚರಣೆ ಕೈಗೊಂಡರೆ ಅಕ್ರಮವಾಗಿ ನಿರ್ಮಿಸಿರುವ 1 ಲಕ್ಷ ಕಟ್ಟಡಗಳನ್ನು ತೆರವು ಮಾಡಬೇಕಾಗುತ್ತದೆ. ಆ ರೀತಿ ಮಾಡಲು ಆಗುವುದಿಲ್ಲ' ಎಂದು ಮುಖ್ಯಮಂತ್ರಿಗಳು ಹೇಳಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications