Breaking: 40% ಕಮಿಷನ್ ಹಗರಣ ನ್ಯಾಯಾಂಗ ತನಿಖೆಗೆ ನೀಡಿ-ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 24: "40% ಕಮಿಷನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ, ಬಿಜೆಪಿ ನಾಯಕರು ತಮ್ಮ ಮೇಲಿರುವ ಆರೋಪದಿಂದ ಮುಕ್ತಿ ಹೊಂದಲಿ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸವಾಲು ಹಾಕಿದ್ದಾರೆ.
"ಬಿಜೆಪಿ ಸರಕಾರದ ಅವಧಿಯಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಭ್ರಷ್ಟಾಚಾರವೇ ನಡೆದಿಲ್ಲ ಎಂದು ಬೊಬ್ಬಿರಿಯುವ ಕರ್ನಾಟಕ ಬಿಜೆಪಿ ನಾಯಕರಿಗೆ ತಮ್ಮ ಪ್ರಾಮಾಣಿಕತೆ ಬಗ್ಗೆ ಅಷ್ಟೊಂದು ವಿಶ್ವಾಸವಿದ್ದರೆ 40% ಕಮಿಷನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ, ತಮ್ಮ ಮೇಲಿರುವ ಆರೋಪದಿಂದ ಮುಕ್ತಿ ಹೊಂದಲಿ" ಎಂದಿದ್ದಾರೆ.
"ಬಿಜೆಪಿಯವರು ತಾವು ಭ್ರಷ್ಟಾಚಾರವನ್ನೇ ಮಾಡಿಲ್ಲ, ತಮ್ಮಂತಹ ಪ್ರಾಮಾಣಿಕರು, ಸತ್ಯವಂತರು ಯಾರಿಲ್ಲ ಎನ್ನುತ್ತಿದ್ದಾರೆ. ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡುತ್ತೇವೆ, ಒಂದು ವೇಳೆ ನಮ್ಮಿಂದ ಸಾಬೀತು ಮಾಡಲು ಆಗಿಲ್ಲ ಎಂದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ, ನಾವದನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದಾರೆ. ತಪ್ಪು ಮಾಡಿಲ್ಲ ಎಂದಾದರೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಇರುವ ಸಮಸ್ಯೆಯೇನು? ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೂ ಈ ಸವಾಲನ್ನು ಸ್ವೀಕರಿಸಲಿ" ಎಂದು ಸವಾಲು ಹಾಕಿದ್ದಾರೆ.

ಪ್ರಧಾನಿಗಳಿಗೆ ಪತ್ರ ಬರೆದರು ಕ್ರಮವಿಲ್ಲ!
"ನಾನು ವಿರೋಧ ಪಕ್ಷದ ನಾಯಕನಾದ ನಂತರ ಮೊದಲ ಬಾರಿಗೆ ಇಂದು ಕೆಂಪಣ್ಣನವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಅವರು ಪ್ರಧಾನಿಗಳಿಗೆ ಬರೆದ ಪತ್ರವನ್ನು ನೋಡಿದ್ದೆ, ಒಮ್ಮೆ ರಾಜ್ಯ ಗುತ್ತಿಗೆದಾರರ ಸಂಘದ 20-25 ಜನ ಪದಾಧಿಕಾರಿಗಳು ಬಂದು ನನ್ನನ್ನು ಭೇಟಿಯಾಗಿ ಮನವಿ ಪತ್ರ ನೀಡಿದ್ದರು. ಅದಾದ ನಂತರ ಅರಣ್ಯ ಗುತ್ತಿಗೆದಾರರ ಸಂಘದವರು ಬಂದು ಮನವಿ ಪತ್ರ ನೀಡಿದ್ದರು. ಸರ್ಕಾರ ಕಳೆದ ಏಪ್ರಿಲ್ ತಿಂಗಳಿನಲ್ಲಿ ನಮ್ಮನ್ನು ಮಾತುಕತೆಗೆ ಕರೆದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದು ಬಿಟ್ಟರೆ ಯಾವ ಕ್ರಮ ಕೈಗೊಂಡಿಲ್ಲ. ಈ ವಿಚಾರವನ್ನು ತಾವು ವಿಧಾನಸಭೆಯಲ್ಲಿ ಒತ್ತಾಯ ಮಾಡಬೇಕು ಎಂದು ನನಗೆ ಮನವಿ ಮಾಡಿದ್ದರು" ಎಂದಿದ್ದಾರೆ.
ಟೆಂಡರ್ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ!
"ಟೆಂಡರ್ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ ಕೊಡಬೇಕಾಗಿದೆ. ಪ್ರಧಾನಿಗಳಿಗೆ ಪತ್ರ ಬರೆದು ಒಂದು ವರ್ಷ ಆದರೂ ಅವರೂ ಯಾವ ಕ್ರಮ ಕೈಗೊಂಡಿಲ್ಲ. ನಾವು ನ್ಯಾಯಾಂಗ ತನಿಖೆ ನಡೆಸುವುದಾದರೆ ದಾಖಲಾತಿ ಕೊಡಲು ತಯಾರಾಗಿದ್ದೇವೆ, ಒಂದು ವೇಳೆ ನಮ್ಮಿಂದ ಇದನ್ನು ಸಾಬೀತು ಮಾಡಲು ಆಗದೆ ಹೋದರೆ ಯಾವುದೇ ರೀತಿಯ ಕಾನೂನು ಕ್ರಮ ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳಿದ್ದಾರೆ. ನಾನು ಕೂಡ ಹೈಕೋರ್ಟ್ನ ಹಾಲಿ ನ್ಯಾಯಾಧೀಶ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯ ಮಾಡಿದ್ದೆ" ಎಂದು ಮಾಹಿತಿ ನೀಡಿದ್ದಾರೆ.

ಪ್ರಧಾನಿಗಳಿಗೆ ಪತ್ರ
"ಟೆಂಡರ್ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ ಕೊಡಬೇಕಾಗಿದೆ. ಪ್ರಧಾನಿಗಳಿಗೆ ಪತ್ರ ಬರೆದು ಒಂದು ವರ್ಷ ಆದರೂ ಅವರೂ ಯಾವ ಕ್ರಮ ಕೈಗೊಂಡಿಲ್ಲ. ನಾವು ನ್ಯಾಯಾಂಗ ತನಿಖೆ ನಡೆಸುವುದಾದರೆ ದಾಖಲಾತಿ ಕೊಡಲು ತಯಾರಾಗಿದ್ದೇವೆ, ಒಂದು ವೇಳೆ ನಮ್ಮಿಂದ ಇದನ್ನು ಸಾಬೀತು ಮಾಡಲು ಆಗದೆ ಹೋದರೆ ಯಾವುದೇ ರೀತಿಯ ಕಾನೂನು ಕ್ರಮ ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳಿದ್ದಾರೆ. ನಾನು ಕೂಡ ಹೈಕೋರ್ಟ್ನ ಹಾಲಿ ನ್ಯಾಯಾಧೀಶ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯ ಮಾಡಿದ್ದೆ" ಎಂದು ಮಾಹಿತಿ ನೀಡಿದ್ದಾರೆ.

22,000 ಕೋಟಿಗೂ ಅಧಿಕ ಬಿಲ್ ಹಣ ಬಾಕಿಯಿದೆ!
"ಭ್ರಷ್ಟಾಚಾರ ಎಲ್ಲಾ ಕಾಲದಲ್ಲೂ ಆಮೆ ವೇಗದಲ್ಲಿ ಇತ್ತು, ಈಗ ಶರವೇಗದಲ್ಲಿ ಸಾಗುತ್ತಿದೆ ಎಂದು ಗುತ್ತಿಗೆದಾರರು ಈ ಸರ್ಕಾರದ ಭ್ರಷ್ಟಾಚಾರವನ್ನು ತೆರೆದಿಟ್ಟಿದ್ದಾರೆ. ಗುತ್ತಿಗೆದಾರರಿಗೆ ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಬಿಬಿಎಂಪಿ ಇಂದ ಸುಮಾರು 22,000 ಕೋಟಿಗೂ ಅಧಿಕ ಬಿಲ್ ಹಣ ಬಿಡುಗಡೆಯಾಗಬೇಕಿದೆಯಂತೆ. ಈ ಬೃಹತ್ ಬಾಕಿ ಮೊತ್ತವನ್ನು ಆದ್ಯತೆ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಇದರ ಜೊತೆಗೆ ಅನುದಾನ ಮೀಸಲಿಡದೆ ಟೆಂಡರ್ ಕರೆಯುತ್ತಾರೆ, ಇದರಿಂದ ಕಾಮಗಾರಿ ಹಣ ಬಿಡುಗಡೆ ಆಗುವುದು ಹೇಗೆ? ಎಂಬುದು ಅವರ ಪ್ರಶ್ನೆಯಾಗಿದೆ" ಎಂದಿದ್ದಾರೆ.
ಒಟ್ಟಾರೆ ಗುತ್ತಿಗೆದಾರರು ಬಿಜೆಪಿ ಆಡಳಿತದಲ್ಲಿ ಸಾಕಷ್ಟು ಬೇಸರಗೊಂಡಿದ್ದಾರೆ. ಇಂಥಾ ಭ್ರಷ್ಟ ಸರ್ಕಾರ ಯಾವ ಕಾಲದಲ್ಲೂ ಇರಲಿಲ್ಲ ಎಂಬುದು ಅವರ ಅಳಲು. ನ್ಯಾಯಾಂಗ ತನಿಖೆಗೆ ನಡೆಸಿದರೆ ತನಿಖೆ ವೇಳೆ ಸೂಕ್ತ ದಾಖಲೆ ನೀಡುವುದಾಗಿ ಹೇಳಿದ್ದಾರೆ. ಪ್ರಧಾನಿಗೆ ಮತ್ತೊಮ್ಮೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆ ಏನಿರಬಹುದು ಎಂದು ಕಾದು ನೋಡಬೇಕು.

ನ್ಯಾಯಯುತ ತನಿಖೆ ಆಗಬೇಕೋ ಬೇಡವೋ?
"ನಾವು ಸರ್ಕಾರದ ಮೇಲೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಡ ಹಾಕುತ್ತೇವೆ. ಒಂದು ವೇಳೆ ಸರ್ಕಾರ ನಮ್ಮ ಆಗ್ರಹಕ್ಕೆ ಬೆಲೆ ಕೊಡದೆ ಹೋದರೆ ಈ ವಿಚಾರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ. ನರೇಂದ್ರ ಮೋದಿ ಅವರು ಚುನಾವಣಾ ಭಾಷಣದಲ್ಲಿ ತಮ್ಮ ಸ್ಥಾನಕ್ಕಿರುವ ಘನತೆ, ಗೌರವ ಮರೆತು 'ಸಿದ್ದರಾಮಯ್ಯ ಅವರ ಸರ್ಕಾರ 10% ಕಮಿಷನ್ ಸರ್ಕಾರ' ಎಂದು ಆಧಾರ ರಹಿತ ಆರೋಪ ಮಾಡಿದಾಗ ಎಲ್ಲರೂ ಅದಕ್ಕೆ ಪ್ರಚಾರ ನೀಡಿದರು, ಯಾರು ಅವರ ಬಳಿ ದಾಖಲೆ ಕೇಳಿಲ್ಲ. ಈಗ ಗುತ್ತಿಗೆದಾರರ ಸಂಘದವರು ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡಲು ಸಿದ್ಧರಿದ್ದಾರೆ. ಹೀಗಿದ್ದಾಗ ನ್ಯಾಯಯುತ ತನಿಖೆ ಆಗಬೇಕೋ ಬೇಡವೋ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇಂದು ಸರ್ಕಾರಿ ಯೋಜನೆಗಳಲ್ಲಿ 40% ಕಮಿಷನ್ ವಿಚಾರವಾಗಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ನೇತೃತ್ವದ ನಿಯೋಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ











Click it and Unblock the Notifications