ವಾಸ್ತು ಧಿಕ್ಕರಿಸಿದ ಸಿದ್ದರಾಮಯ್ಯ: ಮೆಚ್ಚುಗೆ ವ್ಯಕ್ತಪಡಿಸಿದ 'ಮೇಷ್ಟ್ರು' ವಾಸ್ತು ಬಗ್ಗೆ ಹೇಳಿದ್ದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನೇರ ನಡೆ ನುಡಿಗೆ ಮೊದಲಿನಿಂದಲೂ ಹೆಸರಾದವರು, ದೇವರನ್ನು ನಂಬುವ ಅವರು, ಮೊದಲಿನಿಂದಲೂ ದೇವರ ಹೆಸರಿನಲ್ಲಿ ನಡೆಯುವ ಮೌಢ್ಯಗಳನ್ನು ವಿರೋಧಿಸುತ್ತಾ ಬಂದವರು. ಇದು ಹಲವರ ಅಸಮಾಧಾನಕ್ಕೆ ಕಾರಣವಾಗಿದ್ದರೂ, ಸಿದ್ದರಾಮಯ್ಯ ಅವರು ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಅನಿಸಿದ್ದನ್ನು ಮಾಡುವವರು, ನುಡಿಯುವಂತೆ ನಡೆದು ಹಲವು ಬಾರಿ ಮೆಚ್ಚುಗೆಗೆ ಪಾತ್ರರಾದವರು.
ಮೂಢನಂಬಿಕೆಯ ಕಾರಣ ಹಲವು ವರ್ಷಗಳಿಂದ ಮುಚ್ಚಿದ್ದ ಸಿಎಂ ಕಚೇರಿಯ ಬಾಗಿಲನ್ನು ತೆರೆಸುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಸಿಎಂ ಕಚೇರಿಯಲ್ಲಿ ಹಲವು ವರ್ಷಗಳಿಂದ ವಾಸ್ತು ದೋಷದ ಕಾರಣ ನೀಡಿ ದಕ್ಷಿಣ ದಿಕ್ಕಿನ ಬಾಗಿಲನ್ನು ಮುಚ್ಚಲಾಗಿತ್ತು.

ಶನಿವಾರ ಇದನ್ನು ಗಮನಿಸಿದ ಸಿದ್ದರಾಮಯ್ಯ ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದಾಗ ವಾಸ್ತು ಸರಿಯಿಲ್ಲದ ಕಾರಣ ಬಾಗಿಲು ಮುಚ್ಚಿರುವುದಾಗಿ ತಿಳಿಸಿದರು. ಆದರೆ ಸಿದ್ದರಾಮಯ್ಯ ತಕ್ಷಣ ಆ ಬಾಗಿಲು ತೆರೆಯುವಂತೆ ಸೂಚನೆ ನೀಡಿದರು. ತಕ್ಷಣ ಸಿಬ್ಬಂದಿ ಒಳಗಿನಿಂದ ಬಂದು ಬಾಗಿಲು ತೆರೆದರು, ಸಿದ್ದರಾಮಯ್ಯ ಅದೇ ಬಾಗಿಲ ಮೂಲಕ ಕಚೇರಿ ಒಳಗೆ ಪ್ರವೇಶಿದಿರು.
"ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು " ಎಂದು ಅಧಿಕಾರಿಗಳ ಜತೆ ತಮ್ಮ ನಿಲುವನ್ನು ಸಿಎಂ ಸಿದ್ದರಾಮಯ್ಯ ಹಂಚಿಕೊಂಡರು. ಸಿದ್ದರಾಮಯ್ಯ ಅವರ ಈ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಮೌಢ್ಯವನ್ನು ಬಿಟ್ಟು ಜನಪರ ಕೆಲಸ ಮಾಡಿದರೆ ಸಾಕು ಎಂದು ಹಲವರು ಅನಿಸಿಕೆ ಹಂಚಿಕೊಂಡಿದ್ದಾರೆ.
ಇದೊಂದು ಸಣ್ಣಘಟನೆ ಎಂದು ಪರಿಗಣಿಸಬಾರದು.ಜನ ತಮ್ಮ ಖಾಸಗಿ ನಂಬಿಕೆಗಳನ್ನು ಅವರ ಮನೆಯೊಳಗೆ ಹೇಗಾದರೂ ಆಚರಿಸಿಕೊಳ್ಳಲಿ.ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ವಾಸ್ತು ವಿರೋಧಿ ನಡೆ ಅವರೆಲ್ಲ ಮಂತ್ರಿಗಳಿಗೂ ಅಧಿಕಾರಿಗಳಿಗೂ & ಸರ್ಕಾರೀ ಕಛೇರಿಗಳಿಗೂ ಮಾದರಿಯಾಗಲಿ. ಒಳ್ಳೆಯ ಗಾಳಿ,ಬೆಳಕು & ಹೃದಯ ನಿಜವಾದ ವಾಸ್ತು. ವಿಜ್ಞಾನದ ಎಲ್ಲ ಬಾಗಿಲುಗಳೂ ತೆರೆಯಲಿ.
— Nagathihalli Chandrashekara (@NomadChandru) June 25, 2023
ನಾಗತಿಹಳ್ಳಿ ಚಂದ್ರಶೇಖರ ಮೆಚ್ಚುಗೆ
ಇನ್ನು ಸಿದ್ದರಾಮಯ್ಯ ಅವರ ಈ ನಡೆಗೆ ಸಾಹಿತಿ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಮಾದರಿಯಾಗಲಿ ಎಂದು ಹೇಳಿದ್ದಾರೆ. ಟ್ವೀಟ್ ಮಾಡಿರುವ ಅವರು, "ಇದೊಂದು ಸಣ್ಣಘಟನೆ ಎಂದು ಪರಿಗಣಿಸಬಾರದು. ಜನ ತಮ್ಮ ಖಾಸಗಿ ನಂಬಿಕೆಗಳನ್ನು ಅವರ ಮನೆಯೊಳಗೆ ಹೇಗಾದರೂ ಆಚರಿಸಿಕೊಳ್ಳಲಿ. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ವಾಸ್ತು ವಿರೋಧಿ ನಡೆ ಅವರೆಲ್ಲ ಮಂತ್ರಿಗಳಿಗೂ ಅಧಿಕಾರಿಗಳಿಗೂ ಮತ್ತು ಸರ್ಕಾರೀ ಕಛೇರಿಗಳಿಗೂ ಮಾದರಿಯಾಗಲಿ. ಒಳ್ಳೆಯ ಗಾಳಿ, ಬೆಳಕು ಮತ್ತು ಹೃದಯ ನಿಜವಾದ ವಾಸ್ತು. ವಿಜ್ಞಾನದ ಎಲ್ಲ ಬಾಗಿಲುಗಳೂ ತೆರೆಯಲಿ." ಎಂದು ಹೇಳಿದ್ದಾರೆ.
ನಡೆ-ನುಡಿ ಶುದ್ಧವಾಗಿರಲಿ
ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿದ್ದು, "ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ. ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ, ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ. ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ. ನಡೆ - ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ. ಜನತೆಯ ಆಶೀರ್ವಾದ ಇರಲಿ." ಎಂದು ಹೇಳಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications