ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ V/S ಡಿವಿ ಸದಾನಂದ ಗೌಡ ಟ್ವಿಟ್ಟರ್ ವಾರ್

|
Google Oneindia Kannada News

Recommended Video

ಸಿದ್ದರಾಮಯ್ಯ ಹಾಗು ಸದಾನಂದ ಗೌಡ ನಡುವೆ ಟ್ವಿಟ್ಟರ್ ಯುದ್ಧ ಶುರುವಾಯ್ತು | Oneindia Kannada

ಬೆಂಗಳೂರು, ನವೆಂಬರ್ 17: ಇಬ್ಬರು ಮಾಜಿ ಮುಖ್ಯಮಂತ್ರಿಗಳು ಮತ್ತೆ ಟ್ವಿಟ್ಟರ್ ವಾರ್ ಆರಂಭಿಸಿದ್ದಾರೆ, ಸಿದ್ದರಾಮಯ್ಯ ಹಾಗೂ ಡಿವಿ ಸದಾನಂದ ಗೌಡರು ಸರ್ಕಾರ ರಚನೆ ಹಾಗೂ ಲೋಕಸಭಾ ಚುನಾವಣೆ ಕುರಿತು ಮತ್ತೊಮ್ಮೆ ಅಕಾಡಕ್ಕಿಳಿದಿದ್ದಾರೆ.

ಮೇಯರ್ ಚುನಾವಣೆ ಆಯ್ಕೆ ಪ್ರಕ್ರಿಯೆಯಿಂದ ಸಿದ್ದರಾಮಯ್ಯ ಹಿಂದೆ ಸರಿದರೇ? ಮೇಯರ್ ಚುನಾವಣೆ ಆಯ್ಕೆ ಪ್ರಕ್ರಿಯೆಯಿಂದ ಸಿದ್ದರಾಮಯ್ಯ ಹಿಂದೆ ಸರಿದರೇ?

ನವೆಂಬರ್ 16ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ. ಅಮಿತ್ ಶಾ ಮತ್ತು ನರೇಂದ್ರ ಮೋದಿ ಕರ್ನಾಟಕದಲ್ಲಿಯೇ ಬಂದು ಮನೆ ಮಾಡಿದ್ರೂ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದ ಜನರು ಬೆಂಬಲ ನೀಡುವುದಿಲ್ಲ ಎಂದು ಟ್ವೀಟ್ ಮಾಡಿದ್ದರು.

ಕರಾವಳಿ ಕೋಮುವಾದದ ಪ್ರಯೋಗಶಾಲೆಯಾಗಿದೆ

ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ, ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ.

ಮೈಸೂರು ಮೇಯರ್ ಸ್ಥಾನ: ಕುಮಾರಸ್ವಾಮಿ vs ಸಿದ್ದರಾಮಯ್ಯ ಮೈಸೂರು ಮೇಯರ್ ಸ್ಥಾನ: ಕುಮಾರಸ್ವಾಮಿ vs ಸಿದ್ದರಾಮಯ್ಯ

ಹಳೆಯ ಕಂಠಪಾಠವನ್ನೇ ಹೇಳಿದರೆ ಜನರು ಒಪ್ಪಲ್ಲ

ಅದಕ್ಕೆ ತಿರುಗೇಟು ನೀಡುವಂತೆ ಮಾಜಿ ಮುಖ್ಯಮಂತ್ರಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡರು ಮತ್ತೊಂದು ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ಅವರೇ ಅದೇ ರೆಕಾರ್ಡ್ ಕಂಠ ಪಾಠ ಮಾಡಿಕೊಂಡು ಎಷ್ಟು ದಿನ ಸುತ್ತಬೇಕು ಎಂದುಕೊಂಡಿದ್ದೀರಾ ಚಾಮುಂಡೇಶ್ವರಿಯ ಮತಾರರೇ ನಿಮ್ಮನ್ನು ನಂಬಲಿಲ್ಲ. ಇನ್ನು ಕರಾವಳಿ ಜನ ನಿಮ್ಮ ಕಂಠಪಾಠವನ್ನು ಒಪ್ಪುತ್ತಾರಾ, ಕರಾವಳಿ ಯಾಕೆ ಇಡೀ ಕರ್ನಾಟಕದ ಜನರಿಗೆ ತಮ್ಮ ಆಯ್ಕೆ ಗೊತ್ತಿದೆ ಇನ್ನು ಅಧಿಕಾರ ಹೊಂದಾಣಿಕೆ ನಿಮ್ಮ ಬಹುಮತಕ್ಕೆ ಬಂದದ್ದಲ್ಲ ನೆನಪಿರಲಿ ಎಂದು ಖಾರವಾಗಿಯೇ ಬರೆದುಕೊಂಡಿದ್ದಾರೆ.

ಲೋಕಸಭೆ ಚುನಾವಣೆ ನಾಯಕತ್ವ ಸಿದ್ದರಾಮಯ್ಯ ಕೈತಪ್ಪಿಸಲು ಮಸಲತ್ತು ಲೋಕಸಭೆ ಚುನಾವಣೆ ನಾಯಕತ್ವ ಸಿದ್ದರಾಮಯ್ಯ ಕೈತಪ್ಪಿಸಲು ಮಸಲತ್ತು

ಜೆಡಿಎಸ್ ಜೊತೆ ಸರ್ಕಾರ ರಚಿಸಿದ್ದಾಗ ನಿಮಗೆ ಬಹುಮತ ಇತ್ತೇ?

ಇದಕ್ಕೆ ಸಿದ್ದರಾಮಯ್ಯ ಮತ್ತೆ ಪ್ರತಿಕ್ರಿಯೆ ನೀಡಿದ್ದು, ಕರಾವಳಿ ಯಾಕೆ ಇಡೀ ಕರ್ನಾಟಕದ ಜನರಿಗೆ ತಮ್ಮ ಆಯ್ಕೆ ಗೊತ್ತಿದೆ. ಎಂದು ಸರಿಯಾಗಿ ಹೇಳಿದ್ದೀರಿ, ನೀವು ಉಡುಪಿ-ಪುತ್ತೂರು ಬಿಟ್ಟು ಬೆಂಗಳೂರಿಗೆ ಬಂದು ಸೇರಿಕೊಂಡಿದ್ದು ಕರಾವಳಿಯವರಿಗೆ ಖಂಡಿತ ಗೊತ್ತಿದೆ. ಜೆಡಿಎಸ್ ಜೊತೆ ಸೇರಿಕೊಂಡು ಸರ್ಕಾರ ರಚನೆ ಮಾಡಿದಾಗ ನಿಮ್ಮ ಪಕ್ಷಕ್ಕೆ ಬಹುಮತ ಇತ್ತಾ ಗೌಡ್ರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಹೀಗೆಯೇ ಟ್ವೀಟ್ ಮುಂದುವರೆದಿದೆ.

ಟ್ವಿಟ್ಟಿಗರ ಪ್ರತಿಕ್ರಿಯೆ

ಹಾಗಾದ್ರೆ,ಜೆ ಡಿ ಎಸ್ ಜೊತೆ ಸೇರೋದು ತಪ್ಪು ಅಂತಾ ಪರೋಕ್ಷವಾಗಿ ಹೇಳ್ತಿದೀರಿ.ಒಳ್ಳೆಯದು.!! ಕುಮಾರಸ್ವಾಮಿ ಅವರ ಅಪ್ಪನಾಣೆಗೂ ಮುಖ್ಯ ಮಂತ್ರಿ ಆಗಲ್ಲ ಅಂತಿದ್ದೋರು ಅದೇ ಅಪ್ಪನ ಮನೆಗೆ ಹೋಗಿ ಸಿ ಎಂ ಆಗಿ ಅಂತಾ ಹೇಳಿದ ಮಹಾನುಭಾವರು ಯಾರು ಸರ್ ?ಜೆ ಡಿ ಎಸ್ ಅಂದ್ರೆ ಸಂಘ ಪರಿವಾರ ಅಂದಿದ್ದು ಕೂಡಾ ನೀವೇ ಸರ್..ಎಂದು ರಾಜ್ ಅವರು ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದಾರೆ.

English summary
Former chief minister DV Sadananda gowda and siddaramaiah are fiting in twitter over election loss anf government formation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X