ಕಾಂಗ್ರೆಸ್ ಶಾಸಕರಿಂದಲೇ 5 ಗ್ಯಾರೆಂಟಿಗಳ ಪುನರ್ ಪರಿಶೀಲನೆಗೆ ಒತ್ತಡ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಜೂನ್ 06: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಮರ ಅಂತ್ಯ ಕಂಡಿದೆ. ರಾಜಕೀಯ ಪಕ್ಷಗಳು ಸೋಲು-ಗೆಲುವಿನ ವಿಮರ್ಶೆಗಳಲ್ಲಿ ಮುಳುಗಿವೆ. ಈ ನಡುವೆ ರಾಜ್ಯ ಕಾಂಗ್ರೆಸ್ ಶಾಸಕರಿಗೆ ಕಡಿಮೆ ಸೀಟು ಗೆದ್ದಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರೆಂಟಿಗಳನ್ನು ಮರು ಪರಿಶೀಲಿಸುವಂತೆ ಒತ್ತಡ ತರುತ್ತಿದ್ದಾರೆ ಎನ್ನಲಾಗಿದೆ. ಹಾಗಾದರೆ ಶಾಸಕರ ವಾದವೇನು?, ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಬಗ್ಗೆ ಮಾಹಿತಿ ಇಲ್ಲಿದೆ.
ಚುನಾವಣೆ ವೇಳೆ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದರು. ಇತ್ತ ಶಾಸಕರು ಕನಿಷ್ಠ ಅರ್ಧದಷ್ಟು ಸೀಟುಗಳು (14) ಗೆಲ್ಲುತ್ತೇವೆ. ನಮಗೆ ಗ್ಯಾರೆಂಟಿ ಯೋಜನೆಗಳು ಕೈ ಹಿಡಿಯುತ್ತವೆ ಎಂದುಕೊಂಡಿದ್ದರು. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ಕೇವಲ 09 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಇದು ನಮಗೆ ಸಮಾಧಾನ ತಂದಿಲ್ಲ.

ಗ್ಯಾರೆಂಟಿ ಯೋಜನೆಗಳು ಜಾರಿಯಾದ ಬಳಿಕ ರಾಜ್ಯದ ಬಹುತೇಕ ಮಹಿಳೆಯರು ಕಾಂಗ್ರೆಸ್ ಪರ ಇದ್ದಾರೆ ಎಂದು ಭಾವಿಸಿದ್ದೆವು. ನಮ್ಮ ನಿರೀಕ್ಷೆ ಹುಸಿಯಾಗಿದೆ. ಆದ್ದರಿಂದ ಈ ಐದು ಗ್ಯಾರೆಂಟಿಗಳನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲಿಸುವಂತೆ ಒತ್ತಡ ತರಲು ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತ ರಾಜ್ಯದಲ್ಲಿ ಬಿಜೆಪಿ ನಾಯಕರು ಸೇರಿದಂತೆ ಹಲವರು ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಗ್ಯಾರೆಂಟಿಗಳು ನಿಲ್ಲುತ್ತವೆ ಅಂತಲೂ ವದಂತಿಗಳ ಬಗ್ಗೆ ಮಾತನಾಡಿದ್ದರು.
ಶಾಸಕರು ಹೇಳುವುದೇನು?
ರಾಜ್ಯ ಸರ್ಕಾರವು ಎಲ್ಲಿ ಸಂಪನ್ಮೂಲಗಳನ್ನು ಐದು ಪ್ರಮುಖ ಗ್ಯಾರೆಂಟಿ ಯೋಜನೆಗಳನ್ನು ಮುನ್ನಡೆಸಲು ಬಳಕೆ ಆಗುತ್ತಿದೆ. ಹೀಗಾಗಿ ನಿರೀಕ್ಷೆ ಹೆಚ್ಚಾಗಿತ್ತು. ಆದರೆ ನಿರೀಕ್ಷಿತ ಫಲಿತಾಂಶ ಬರಲಿಲ್ಲ.

ಇನ್ನೂ ಗ್ಯಾರೆಂಟಿ ಯೋಜನೆಗಳಿಗೆ ಶಾಸಕರ ಅನುದಾನಕ್ಕೆ ಕತ್ತರಿ ಬಿದ್ದಿದೆ, ತಡೆ ಹಿಡಿಯಲಾಗಿದೆ. ಇದರಿಂದ ಬೇರೆ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಅಭಿವೃದ್ಧಿಯನ್ನು ಹತೋಟಿಗೆ ತರಲಾಗಿದೆ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.
ಮಹಿಳೆಯರಿಗೆ ನೀಡಲಾದ ಯೋಜನೆಗಳಿಂದ ಅವರ ಕಾಂಗ್ರೆಸ್ ಪರ ಇದ್ದಾರೆ. ಹೀಗಾಗಿ ಅರ್ಧದಷ್ಟು ಸೀಟು ಗೆಲ್ಲುವ ಉತ್ಸಾಹ ನಮ್ಮಲ್ಲಿತ್ತು. ಆದರೆ ಅದೆಲ್ಲವು ತಲೆಕೆಳಗಾಗಿವೆ. ಹೀಗಾಗಿ ಈ ಯೋಜನೆಗಳನ್ನು ಪುನರ್ ಪರಿಶೀಲಿಸುವಂತೆ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಹೇಳಿದ್ದೇನು?
ಲೋಕಸಭಾ ಚುನಾವಣೆ ಫಲಿತಾಂಶ ನೋಡಿ ಬಹುತೇಕ ಶಾಸಕರು ಈ ಐದು ಗ್ಯಾರೆಂಟಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಅನೌಪಚಾರಿಕವಾಗಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಫಲಿತಾಂಶ ಅಸಮಾಧಾನಕರ ಆದ್ದರಿಂದ ಸರ್ಕಾರದ ಗ್ಯಾರೆಂಟಿಗಳನ್ನು ಪುನರ್ ಪರಿಶೀಲಿಸುವಂತೆ ಅವರು ಮನವಿ ಮಾಡಿದ್ದಾರೆ.
ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಕಾಂಗ್ರೆಸ್ನ ಐದು ಭರವಸೆಗಳು ಮುಂದುವರಿಯುತ್ತವೆ. ಯಾವುದೇ ಕಾರಣಕ್ಕೂ ಗ್ಯಾರೆಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸದ್ಯಕ್ಕೆ ಈ ಚುನಾವಣೆ ಫಲಿತಾಂಶದ ಮೇಲಿನ ಚರ್ಚೆ ನಿಲ್ಲುವಂತೆ ಕಾಣುತ್ತಿಲ್ಲ. ಶಾಸಕರು ಸರ್ಕಾರ ಹಾಗೂ ಸಿದ್ದರಾಮಯ್ಯ ಮೇಲೆ ನಿರಂತರ ಒತ್ತಡ ಹೇರಲು ಮುಂದಾಗಬಹುದು ಅಂತಲೂ ಹೇಳಲಾಗುತ್ತಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications