Get Updates
Get notified of breaking news, exclusive insights, and must-see stories!

ಕಾಂಗ್ರೆಸ್ ಶಾಸಕರಿಂದಲೇ 5 ಗ್ಯಾರೆಂಟಿಗಳ ಪುನರ್‌ ಪರಿಶೀಲನೆಗೆ ಒತ್ತಡ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು, ಜೂನ್ 06: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಮರ ಅಂತ್ಯ ಕಂಡಿದೆ. ರಾಜಕೀಯ ಪಕ್ಷಗಳು ಸೋಲು-ಗೆಲುವಿನ ವಿಮರ್ಶೆಗಳಲ್ಲಿ ಮುಳುಗಿವೆ. ಈ ನಡುವೆ ರಾಜ್ಯ ಕಾಂಗ್ರೆಸ್‌ ಶಾಸಕರಿಗೆ ಕಡಿಮೆ ಸೀಟು ಗೆದ್ದಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರೆಂಟಿಗಳನ್ನು ಮರು ಪರಿಶೀಲಿಸುವಂತೆ ಒತ್ತಡ ತರುತ್ತಿದ್ದಾರೆ ಎನ್ನಲಾಗಿದೆ. ಹಾಗಾದರೆ ಶಾಸಕರ ವಾದವೇನು?, ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಬಗ್ಗೆ ಮಾಹಿತಿ ಇಲ್ಲಿದೆ.

ಚುನಾವಣೆ ವೇಳೆ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದರು. ಇತ್ತ ಶಾಸಕರು ಕನಿಷ್ಠ ಅರ್ಧದಷ್ಟು ಸೀಟುಗಳು (14) ಗೆಲ್ಲುತ್ತೇವೆ. ನಮಗೆ ಗ್ಯಾರೆಂಟಿ ಯೋಜನೆಗಳು ಕೈ ಹಿಡಿಯುತ್ತವೆ ಎಂದುಕೊಂಡಿದ್ದರು. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ಕೇವಲ 09 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಇದು ನಮಗೆ ಸಮಾಧಾನ ತಂದಿಲ್ಲ.

Siddaramaiah Faces Pressure from MLAs Review 5 Guarantees After Lok Sabha Election Disappointment

ಗ್ಯಾರೆಂಟಿ ಯೋಜನೆಗಳು ಜಾರಿಯಾದ ಬಳಿಕ ರಾಜ್ಯದ ಬಹುತೇಕ ಮಹಿಳೆಯರು ಕಾಂಗ್ರೆಸ್ ಪರ ಇದ್ದಾರೆ ಎಂದು ಭಾವಿಸಿದ್ದೆವು. ನಮ್ಮ ನಿರೀಕ್ಷೆ ಹುಸಿಯಾಗಿದೆ. ಆದ್ದರಿಂದ ಈ ಐದು ಗ್ಯಾರೆಂಟಿಗಳನ್ನು ರಾಜ್ಯ ಸರ್ಕಾರ ಪುನರ್‌ ಪರಿಶೀಲಿಸುವಂತೆ ಒತ್ತಡ ತರಲು ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತ ರಾಜ್ಯದಲ್ಲಿ ಬಿಜೆಪಿ ನಾಯಕರು ಸೇರಿದಂತೆ ಹಲವರು ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಗ್ಯಾರೆಂಟಿಗಳು ನಿಲ್ಲುತ್ತವೆ ಅಂತಲೂ ವದಂತಿಗಳ ಬಗ್ಗೆ ಮಾತನಾಡಿದ್ದರು.

ಶಾಸಕರು ಹೇಳುವುದೇನು?

ರಾಜ್ಯ ಸರ್ಕಾರವು ಎಲ್ಲಿ ಸಂಪನ್ಮೂಲಗಳನ್ನು ಐದು ಪ್ರಮುಖ ಗ್ಯಾರೆಂಟಿ ಯೋಜನೆಗಳನ್ನು ಮುನ್ನಡೆಸಲು ಬಳಕೆ ಆಗುತ್ತಿದೆ. ಹೀಗಾಗಿ ನಿರೀಕ್ಷೆ ಹೆಚ್ಚಾಗಿತ್ತು. ಆದರೆ ನಿರೀಕ್ಷಿತ ಫಲಿತಾಂಶ ಬರಲಿಲ್ಲ.

Siddaramaiah Faces Pressure from MLAs Review 5 Guarantees After Lok Sabha Election Disappointment

ಇನ್ನೂ ಗ್ಯಾರೆಂಟಿ ಯೋಜನೆಗಳಿಗೆ ಶಾಸಕರ ಅನುದಾನಕ್ಕೆ ಕತ್ತರಿ ಬಿದ್ದಿದೆ, ತಡೆ ಹಿಡಿಯಲಾಗಿದೆ. ಇದರಿಂದ ಬೇರೆ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಅಭಿವೃದ್ಧಿಯನ್ನು ಹತೋಟಿಗೆ ತರಲಾಗಿದೆ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ಮಹಿಳೆಯರಿಗೆ ನೀಡಲಾದ ಯೋಜನೆಗಳಿಂದ ಅವರ ಕಾಂಗ್ರೆಸ್ ಪರ ಇದ್ದಾರೆ. ಹೀಗಾಗಿ ಅರ್ಧದಷ್ಟು ಸೀಟು ಗೆಲ್ಲುವ ಉತ್ಸಾಹ ನಮ್ಮಲ್ಲಿತ್ತು. ಆದರೆ ಅದೆಲ್ಲವು ತಲೆಕೆಳಗಾಗಿವೆ. ಹೀಗಾಗಿ ಈ ಯೋಜನೆಗಳನ್ನು ಪುನರ್‌ ಪರಿಶೀಲಿಸುವಂತೆ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಹೇಳಿದ್ದೇನು?

ಲೋಕಸಭಾ ಚುನಾವಣೆ ಫಲಿತಾಂಶ ನೋಡಿ ಬಹುತೇಕ ಶಾಸಕರು ಈ ಐದು ಗ್ಯಾರೆಂಟಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಅನೌಪಚಾರಿಕವಾಗಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಫಲಿತಾಂಶ ಅಸಮಾಧಾನಕರ ಆದ್ದರಿಂದ ಸರ್ಕಾರದ ಗ್ಯಾರೆಂಟಿಗಳನ್ನು ಪುನರ್ ಪರಿಶೀಲಿಸುವಂತೆ ಅವರು ಮನವಿ ಮಾಡಿದ್ದಾರೆ.

ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ನ ಐದು ಭರವಸೆಗಳು ಮುಂದುವರಿಯುತ್ತವೆ. ಯಾವುದೇ ಕಾರಣಕ್ಕೂ ಗ್ಯಾರೆಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯಕ್ಕೆ ಈ ಚುನಾವಣೆ ಫಲಿತಾಂಶದ ಮೇಲಿನ ಚರ್ಚೆ ನಿಲ್ಲುವಂತೆ ಕಾಣುತ್ತಿಲ್ಲ. ಶಾಸಕರು ಸರ್ಕಾರ ಹಾಗೂ ಸಿದ್ದರಾಮಯ್ಯ ಮೇಲೆ ನಿರಂತರ ಒತ್ತಡ ಹೇರಲು ಮುಂದಾಗಬಹುದು ಅಂತಲೂ ಹೇಳಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+