ಟಿಪ್ಪು ಧರ್ಮಾತೀತ, ಮಹಾಪುರುಷ: ಸಿದ್ದರಾಮಯ್ಯ
ಟಿಪ್ಪು ಸುಲ್ತಾನ್ ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಟಿಪ್ಪು ಎಲ್ಲ ಜಾತಿ, ಧರ್ಮಗಳ ನಾಯಕ, ಮಹಾಪುರುಷರ ಜಯಂತಿ ಆಚರಣೆಯ ಸಂಪ್ರದಾಯ ನಡೆದುಕೊಂಡು ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು, ನ.10: ಟಿಪ್ಪು ಸುಲ್ತಾನ್ ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಟಿಪ್ಪು ಎಲ್ಲ ಜಾತಿ, ಧರ್ಮಗಳ ನಾಯಕ, ಮಹಾಪುರುಷರ ಜಯಂತಿ ಆಚರಣೆಯ ಸಂಪ್ರದಾಯ ನಡೆದುಕೊಂಡು ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇದೇ ಮೊದಲ ಬಾರಿಗೆ ಕಾರ್ಯಕ್ರಮದ ಆಯೋಜನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬದಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಹಿಸಿಕೊಂಡಿತ್ತು.
ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಟಿಪ್ಪು ಜಯಂತಿ ಆಚರಣಾ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಅವರು ಮಾತನಾಡಿದರು.
ಟಿಪ್ಪು ಸುಲ್ತಾನ್ ಜಯಂತಿ ಸಮಾರಂಭದಲ್ಲಿ ಟಿಪ್ಪು ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪವೃಷ್ಠಿ ಮೂಲಕ ನಮನ ಸಲ್ಲಿಸಿದರು. ವಿಧಾನಸಭಾಧ್ಯಕ್ಷರಾದ ಕೆ.ಬಿ.ಕೋಳಿವಾಡ, ಸಚಿವರಾದ ರೋಷನ್ ಬೇಗ್, ಕೆ.ಜೆ.ಜಾರ್ಜ್ ಹಾಗೂ ಉಮಾಶ್ರೀ ಅವರು ಉಪಸ್ಥಿತರಿದ್ದರು.

ಸಿಎಂ ಸಿದ್ದರಾಮಯ್ಯ ಹೇಳಿಕೆ
ಟಿಪ್ಪು ಸುಲ್ತಾನ ಜಯಂತಿ ಆಚರಣೆ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡ್ತಿದೆಯೋ ಅಥವಾ ಕಾಂಗ್ರೆಸ್ ರಾಜಕೀಯ ಮಾಡ್ತಿದೆಯೋ ಜನ ತೀರ್ಮಾನ ಮಾಡಲಿ. 1857 ರಿಂದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಆರಂಭ ಆಯ್ತು ಅಂತ ಹೇಳಲಾಗುತ್ತೆ. ಆದ್ರೆ ನಿಜವಾದ ಸ್ವಾತಂತ್ರ್ಯ ಹೋರಾಟ ಆಂಗ್ಲೋ ಮೈಸೂರ್ ಯುದ್ಧದಿಂದಲೇ ಪ್ರಾರಂಭವಾಗಿತ್ತು ಅಂತಾ ನನಗೆ ಅನಿಸುತ್ತದೆ ಎಂದು ಸಿದ್ದರಾಮಯ್ಯ ತಮ್ಮ್ಮ ಇತಿಹಾಸ ಜ್ಞಾನ ಪ್ರದರ್ಶಿಸಿದರು.

ಬಿಜೆಪಿ ನಾಯಕರ ದ್ವಂದ್ವ ನಿಲುವು
ಬಿಜೆಪಿ ನಾಯಕರು ಟಿಪ್ಪು ಟೋಪು ಹಾಕಿಕೊಂಡು ಅಂದು ಟಿಪ್ಪು ಬಗ್ಗೆ ಹಾಡಿ ಹೊಗಳಿದ್ದ ಬಿಜೆಪಿ ನಾಯಕರು ಈಗ ರಾಜಕೀಯ ಸ್ವಾರ್ಥಕ್ಕೋಸ್ಕರ ಟಿಪ್ಪು ಮತಾಂದ ಅಂತಿದ್ದಾರೆ.. ಟಿಪ್ಪು ಮತಾಂಧನಲ್ಲ.. ಆದ್ರೆ ಈ ಬಿಜೆಪಿಯವರು ಮತಾಂಧರು

ಕನ್ನಡ ನಾಡಿನ ಹೆಮ್ಮೆಯ ವ್ಯಕ್ತಿ
ಟಿಪ್ಪು ಸುಲ್ತಾನ್ ಎಲ್ಲ ಜಾತಿ, ಧರ್ಮಗಳ ನಾಯಕ. ಆತ ಕನ್ನಡ ನಾಡಿನ ಹೆಮ್ಮೆಯ ವ್ಯಕ್ತಿ. ಹೀಗಾಗಿ ರಾಜ್ಯ ಸರಕಾರವು ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ಹೇಳಿದರು.

ನಿಡುಮಾಮಿಡಿ ಶ್ರೀ ಗಳು ಹೇಳಿಕೆ
ಸಾವಿರ ಸುಳ್ಳುಗಳನ್ನ ಹೇಳುವ ಮುಖಾಂತರ ಇತಿಹಾಸ ತಿರುಚುವ ಕಾರ್ಯವನ್ನ ಕೆಲವರು ಮಾಡ್ತಿದ್ದಾರೆ. ಸಮಾಜದಲ್ಲಿ ಕೋಮುವಾದವನ್ನ ಬಿತ್ತುವ ಕೆಲಸ ನಡೆಯುತ್ತಿದೆ. ಟಿಪ್ಪು ಜಯಂತಿ ಆಚರಣೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ನಿಡುಮಾಮಿಡಿ ಶ್ರೀಗಳು ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications