ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

|
Google Oneindia Kannada News

ಬೆಂಗಳೂರು, ಆಗಸ್ಟ್ 04: ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಂಯ್ಯ ಅವರು ನಿನ್ನೆ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

Recommended Video

Ayodhya Rambhoomi ಪೂಜೆಗೆ Karnatakaದ 8 ಮಂದಿಗೆ ಆಹ್ವಾನ | Oneindia Kannada

ಮೂತ್ರಕೋಶದ ಸೋಂಕಿನಿಂದ ಜ್ವರ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ವೈದ್ಯರ ಸಲಹೆ ಮೆರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

'ಯಡಿಯೂರಪ್ಪ ಬೇಗ ಗುಣಮುಖರಾಗಿ': ಎಚ್‌ಡಿಕೆ, ಸಿದ್ದರಾಮಯ್ಯ ಟ್ವೀಟ್'ಯಡಿಯೂರಪ್ಪ ಬೇಗ ಗುಣಮುಖರಾಗಿ': ಎಚ್‌ಡಿಕೆ, ಸಿದ್ದರಾಮಯ್ಯ ಟ್ವೀಟ್

ಸ್ವತಃ ಸಿದ್ದರಾಮಯ್ಯ ಅವರು ಪುತ್ರ ಡಾ ಯತೀಂದ್ರ ಅವರೇ ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುನ್ನೆಚ್ಚರಿಕೆಯಿಂದ ಸಿದ್ದರಾಮಯ್ಯ ಅವರಿಗೂ ಕೊರೊನಾ ಪರೀಕ್ಷೆ ಮಾಡುವ ಸಾಧ್ಯತೆ ಇದೆ.

Siddaramaiah hospitalized at Bangalore yesterday night

ಇನ್ನು ಭಾನುವಾರವಷ್ಟೆ ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ, ಮಾಜಿ ಸಿಎಂ ಸಿದ್ದರಾಮಯ್ಯ ಸಹ ಅದೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಸಿದ್ದರಾಮಯ್ಯ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ, ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ, ರಾಜಸ್ಥಾನ ರಾಜಕೀಯ ಬಿಕ್ಕಟ್ಟು ವಿರೋಧಿಸಿ ಪ್ರತಿಭಟನೆ, ವೈದ್ಯಕೀಯ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಖಂಡಿಸಿ ಪ್ರತಿಭಟನೆ ಹಾಗೂ ಸತತ ಸುದ್ದಿಗೋಷ್ಠಿಗಳನ್ನು ನಡೆಸಿದ್ದರು.

English summary
Congress senior Leader Siddaramaiah was admitted to manipal hospital at yesterday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X