ಬಾದಾಮಿ, ಐಹೊಳೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಸೂಚನೆ
Recommended Video
ಬೆಂಗಳೂರು, ಜು.7: ಐತಿಹಾಸಿಕ ಪ್ರವಾಸಿ ತಾಣಗಳಾದ ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಸಿದ್ಧಪಡಿಸಲು ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಅವರು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಾದಾಮಿ, ಐಹೊಳೆ, ಪಟ್ಟದಕಲ್ಲು ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾಗಿದೆ. ದಿನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ, ಆದರೆ ಅಲ್ಲಿನ ಮೂಲಭೂತ ಸೌಕರ್ಯ ಕೊರತೆ ಎದ್ದು ಕಾಣುತ್ತಿದೆ. ಹಾಗಿ ಇಂತಹ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಕುರಿತು ಯೋಜನೆ ರೂಪಿಸಬೇಕಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ನವಿಲು ತೀರ್ಥದಿಂದ ಬಾದಾಮಿಗೆ ನೀರು ಕೇಳಿದ ಸಿದ್ದರಾಮಯ್ಯ
ರಸ್ತೆ ಸಂಪರ್ಕ ಸೇರಿದಂತೆ ಪ್ರವಾಸಿಗರಿಗೆ ಸೂಕ್ತ ಸೌಲಭ್ಯ ಒದಗಿಸಲು ಯೋಜನೆ ಸಿದ್ಧಪಡಿಸುವಂತೆಯೂ ತಿಳಿಸಿದ್ದಾರೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ.
ಸ್ಷಕ್ಷೇತ್ರ ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಗೆ ದೇಶ, ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಅವರಿಗೆ ಮೂಲಭೂತ ಸೌಕರ್ಯ ಒದಗಿಸುವ ಅಗತ್ಯವಿದೆ. ಮೂರೂ ಸ್ಥಳಗಳಿಗೆ ರಸ್ತೆ ಸಂಪರ್ಕ, ಮಾಹಿತಿ ಕೇಂದ್ರಗಳ ಸ್ಥಾಪನೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒಳಗೊಂಡಂತೆ ಯೋಜನೆ ರೂಪಿಸಲು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.