ಯುರೋಪ್ ಪ್ರವಾಸಕ್ಕೆ ಹೊರಟ ಸಿದ್ದರಾಮಯ್ಯಗೆ ಬೆಂಬಲಿಗರ ಉಘೇ!
Recommended Video
ಬೆಂಗಳೂರು, ಸೆಪ್ಟೆಂಬರ್ 3: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹತ್ತು ದಿನಗಳ ಯುರೋಪ್ ಪ್ರವಾಸಕ್ಕೆ ತೆರಳಿದರು. ಸಿದ್ದರಾಮಯ್ಯ ಜತೆ ಪುತ್ರ ಯತೀಂದ್ರ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಸೇರಿದಂತೆ ಕುಟುಂಬದ ಸದಸ್ಯರು ಯುರೋಪ್ ರಾಷ್ಟ್ರಗಳ ಪ್ರವಾಸಕ್ಕೆ ತೆರಳುತ್ತಿದ್ದಾರೆ.
ಸಿದ್ದರಾಮಯ್ಯ ವಿದೇಶ ಪ್ರವಾಸದ ಹಿನ್ನೆಲೆಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ತೀವ್ರ ಗೊಂದಲ ಉಂಟಾಗಿತ್ತು, ಸಿದ್ದರಾಮಯ್ಯ ವಿದೇಶಕ್ಕೆ ತೆರಳಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿತ್ತು.
ಸಿದ್ದರಾಮಯ್ಯ ವಿರುದ್ಧ ದೇವೇಗೌಡರ ಈ ಕಾರ್ಯತಂತ್ರ ಕೈಗೂಡುವುದೆ?
ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಸಿದ್ದರಾಮಯ್ಯ ವಿದೇಶಕ್ಕೆ ತೆರಳುವ ವೇಳೆ ಹಾಲಿ ಹಾಗೂ ಮಾಜಿ ಸಚಿವರು, ಶಾಸಕರು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅವರ ನಿವಾಸದ ಎದುರು ನೆರೆದಿದ್ದರು.
ಸಚಿವ ಜಮೀರ್ ಅಹಮದ್ ಸೇರಿದಂತೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸಂಪುಟದ ಹಲವು ಸಂಪುಟದ ಸದಸ್ಯರು ಸಿದ್ದರಾಮಯ್ಯ ತೆರಳುವ ವೇಳೆ ನಿವಾಸದ ಬಳಿ ಕಾಣಿಸಿಕೊಂಡರು. ಅಲ್ಲದೇ ಮೈಸೂರು ಜಿಲ್ಲೆಯ ಅಪಾರ ಅಭಿಮಾನಿಗಳು ಕೂಡ ಈ ವೇಳೆ ಹಾಜರಿದ್ದರು.
ಇಂದಿನಿಂದ ಹತ್ತು ದಿನಗಳ ಕಾಲ ಯುರೋಪ್ ರಾಷ್ಟ್ರ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯ ಅವರ ಪ್ರವಾಸದ ಹಿಂದೆ ಕೆಲವು ರಾಜಕೀಯ ಊಹಾಪೋಹಗಳು ಕೇಳಿಬಂದಿವೆ.
ಇದನ್ನು ಸ್ವತಃ ಸಿದ್ದರಾಮಯ್ಯ ಅಲ್ಲಗಳೆದಿದ್ದರೂ ಕೂಡ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ವಿದೇಶ ಪ್ರವಾಸ ಸಹಜ ಅಲ್ಲ ಎನ್ನಲಾಗುತ್ತಿದೆ. ಈ ಎಲ್ಲಾ ಊಹಾಪೋಹಗಳಿಗೆ ಮುಂದಿನ ಹತ್ತು ದಿನಗಳಲ್ಲಿ ಉತ್ತರ ದೊರಕಲಿದೆ ಎಂದು ನಿರೀಕ್ಷಿಸಲಾಗಿದೆ.