Siddaramaiah: ಮುಡಾ ಪ್ರಕರಣದ ಹೈಕೋರ್ಟ್ ಆದೇಶಕ್ಕೆ ಜಿ.ಪರಮೇಶ್ವರ ರಿಯಾಕ್ಷನ್: Muda Case Update
ಬೆಂಗಳೂರು, ಫೆಬ್ರವರಿ 07: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಸಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆ ನಡೆಯುತ್ತಿದೆ. ಈ ತನಿಖೆ ವಿಚಾರವಾಗಿ ಹೈಕೋರ್ಟ್ಗೆ ಸಲ್ಲಿಕೆಯಾದ ಅರ್ಜಿ ವಜಾಗೊಳಿಸುವ ಮೂಲಕ ನ್ಯಾಯಪೀಠ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಕೊಟ್ಟಿದೆ. ಈ ಆದೇಶ ಕುರಿತು ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರು ಪ್ರತಿಕ್ರಿಯಿಸಿದ್ದಾರೆ.
ಹೈಕೋರ್ಟ್ ತೀರ್ಪಿನ ಬಳಿಕ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆ ಮೇಲೆ ವಿಶ್ವಾಸವಿಟ್ಟು ಹೈಕೋರ್ಟ್ ಈ ಆದೇಶ ನೀಡದಂತೆ ಕಾಣುತ್ತಿದೆ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಸರಿಯಾಗಿದೆ ಎಂಬ ದೃಷ್ಟಿಯಲ್ಲಿ ಕೋರ್ಟ್ ಆದೇಶ ನೀಡಿದೆ ಎಂದು ಡಾ.ಜಿ. ಪರಮೇಶ್ವರ ಅವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬಕ್ಕೆ ಸಂಬಂಧಿಸಿದ ಮುಡಾ ಪ್ರಕರಣವನ್ನು ಸಿಬಿಐಗೆ ನೀಡುವಂತಹ ಅಂಶಗಳು ಇರಲಿಲ್ಲ. ಲೋಕಾಯುಕ್ತ ಸಂಸ್ಥೆಯ ಮೇಲೆ ಹೈಕೋರ್ಟ್ ವಿಶ್ವಾಸವಿಟ್ಟು ಈ ರೀತಿಯ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು.
ಲೋಕಾಯುಕ್ತ ತನಿಖೆ ಸರಿಯಾಗಿ ನಡೆದಿದೆ ಎಂಬ ದೃಷ್ಟಿಯಲ್ಲಿ ಕೋರ್ಟ್ ಆದೇಶ ಬಂದಿದೆ. ಲೋಕಾಯುಕ್ತ ವರದಿ ಸರಿ ಇಲ್ಲ ಎಂದು ಹೇಳಲು ಆಗುವುದಿಲ್ಲ ಎನ್ನುವ ಅರ್ಥದಲ್ಲಿ ಕೋರ್ಟ್ ತೀರ್ಪು ನೀಡಿದೆ. ಇದು ಒಳ್ಳೆಯ ತೀರ್ಮಾನ. ಲೋಕಾಯುಕ್ತ ಸಂಸ್ಥೆಯ ತನಿಖೆಯ ಮೇಲೆ ನಂಬಿಕೆ ಇಡಬೇಕು. ಇಂತಹ ಸಂದರ್ಭದಲ್ಲಿ ಸಂಸ್ಥೆ ತನಿಖೆ ಮಾಡಿದ ಮೇಲೆ ವಿಶ್ವಾಸ ಬೇಕಲ್ಲವೇ ಎಂದರು.
ಸಿಎಂ ವಿರುದ್ಧ ದೂರು ನೀಡಿರುವ ದೂರುದಾರರು ಬೇಕಾದರೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಬೇಕಾದರೆ ಸುಪ್ರೀಂಕೋರ್ಟ್ಗೆ ಹೋಗಲಿ. ನಮ್ಮ ಕಾನೂನು ತಂಡ ಪರಿಶೀಲಿಸಿ ಅದಕ್ಕೆ ಉತ್ತರ ನೀಡುತ್ತಾರೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳು ಸ್ವಾಭಾವಿಕವಾಗಿ ನ್ಯಾಯಯುತವಾಗಿ ಇರುತ್ತವೆ ಎಂಬುದಕ್ಕೆ ಇದೊಂದು ತಾಜಾ ಉದಾಹರಣೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.
ಪ್ರಕರಣದ ಸಂಕ್ಷಿಪ್ತ ಹಿನ್ನೆಲೆ, ಇಂದಿನ ತೀರ್ಪು ಕುರಿತು..
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಪಾರ್ವತಿ ಹೆಸರಿನಲ್ಲಿ 14 ಸೈಟುಗಳನ್ನು ಪಡೆದಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಅಕ್ರಮವೆಸಗಿ ನಿವೇಶನ ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದರು. ರಾಜ್ಯಪಾಲರಿಗೆ ದೂರು ನೀಡಿದ್ದರು. ಅದು ಕೊನೆಗೆ ನ್ಯಾಯಾಲಯದ ಮೇಟ್ಟಿಲೇರಿ ಮೈಸೂರು ಲೋಕಾಯುಕ್ತ ಪೊಲೀಸರು ಸಿಎಂ ವಿರುದ್ಧ ಮುಡಾ ಅಕ್ರಮ ತನಿಖೆಗೆ ಆದೇಶಿಸಿತ್ತು.
ಈ ಲೋಕಾಯುಕ್ತ ಪೊಲೀಸರ ತನಿಖೆ ಪಾರದರ್ಶಕವಾಗಿ ನಡೆಯುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ದೂರುದಾರರು ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ತೀರ್ಪು ಇಂದು ಶುಕ್ರವಾರ ಫೆಬ್ರವರಿ 07ರಂದು ನೀಡಿದ್ದು, ಅರ್ಜಿ ವಜಾಗೊಳಿಸಿದ ಹೈಕೋರ್ಟ್ ನ್ಯಾಯಪೀಠವು ಹಾಲಿ ತನಿಖೆ ಮುಂದುವರೆಸಲು ಗ್ನೀನ್ ಸೀಗ್ನಲ್ ನೀಡಿದೆ. ಇದು ಸಿಎಂ ಮತ್ತು ರಾಜ್ಯ ಕಾಂಗ್ರೆಸ್ ನಾಯಕರ ಹರ್ಷಕ್ಕೆ ಕಾರಣವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications