ಸಂಪುಟ ವಿಸ್ತರಣೆ ಬಿಸಿಯಲ್ಲಿದ್ದ ಸಿದ್ದುಜೀಗೆ ಬಿಬಿಎಂಪಿ ನೆನಪಿಲ್ಲ!
ಬೆಂಗಳೂರು, ಆಗಸ್ಟ್ 28: ಬಿಬಿಎಂಪಿ ಚುನಾವಣೆ 2015ರ ನಿರಾಶಾದಾಯಕ ಫಲಿತಾಂಶದ ನಂತರ ಸೊಲೊಪ್ಪಿಕೊಂಡ ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಬಗ್ಗೆ ಮರೆತು ತಮ್ಮ ಸಂಪುಟ ವಿಸ್ತರಣೆ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಮನೆಯಲ್ಲಿ ಹಬ್ಬದೂಟ ಮರೆತು ರೆಸಾರ್ಟ್ ನಲ್ಲಿ 'ಮೈತ್ರಿ' ಮಾತುಕತೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡರ ಬಗ್ಗೆ ಪ್ರಶ್ನಿಸಿದರೆ, 'ನನಗೇನು ಗೊತ್ತಿಲ್ಲ' ಎಂದು ಉತ್ತರಿಸಿದ್ದಾರೆ.
ಬೆಂಗಳೂರಿನ ಐವರು ಸಚಿವರುಗಳು ಹೇಗಾದರೂ ಬಿಬಿಎಂಪಿಯಲ್ಲಿ ತಮ್ಮ ಪ್ರಭಾವ ಬೀರಲು ಹೆಣಗಾಡುತ್ತಿದ್ದಾರೆ. ಇದರಿಂದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಇನ್ನಷ್ಟು ಮುಂದಕ್ಕೆ ಹೋಗುವ ಪರಿಸ್ಥಿತಿ ಉಂಟಾಗಿದೆ. ಸಿದ್ದರಾಮಯ್ಯ ಅವರಿಗೂ ಈ ಪರಿಸ್ಥಿತಿ ಖುಷಿ ತಂದುಕೊಟ್ಟಿದೆ. ಸಚಿವ ಸ್ಥಾನ ಬಯಸುವವರು, ಅತೃಪ್ತರು, ಬಂಡಾಯಗಾರರು ಸಿದ್ದರಾಮಯ್ಯ ಅವರ ತಲೆ ತಿನ್ನುವುದು ತಪ್ಪಿದೆ.
ವಿಸ್ತರಣೆ ಅಷ್ಟೇ: ಕರ್ನಾಟಕಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬಂದ ಮೇಲೆ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಸಂಪುಟ ಪುನರ್ ರಚನೆ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.[ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೂಡಿದ ಬಿಜೆಪಿ]

ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವುದು ಸಂಪುಟ ಪುನಾರಚನೆ ಪ್ರಕ್ರಿಯೆ ಹಿಂದಕ್ಕೆ ತಳ್ಳಿದ್ದು, ಸೆಪ್ಟೆಂಬರ್ ಎರಡನೇ ವಾರದಲ್ಲಿ ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನದ ಬಳಿಕ ವಿಸ್ತರಣೆ ಪ್ರಕ್ರಿಯೆಗೆ ಚಾಲನೆ ಸಿಗುವ ಸಾಧ್ಯತೆ ಇದೆ. [ಸಮೀಕ್ಷೆ: ಮಾಧ್ಯಮಗಳ ಭವಿಷ್ಯ ಸುಳ್ಳಾಗಿದ್ದೇಕೆ?]
ಸದ್ಯಕ್ಕೆ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ಜಾತಿ, ಪ್ರದೇಶ ಹಾಗೂ ಹಿರಿತನದ ಆಧಾರದ ಮೇಲೆ 20ಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದಾರೆ.
ರಾಮಲಿಂಗಾರೆಡ್ಡಿ, ಕೆಜೆ ಜಾರ್ಜ್, ಕೃಷ್ಣಭೈರೇ ಗೌಡ, ದಿನೇಶ್ ಗುಂಡೂರಾವ್, ರೋಷನ್ ಬೇಗ್ ಅವರು ಬಿಬಿಎಂಪಿಯಲ್ಲಿ ತಮ್ಮ ಛಾಪು ಮೂಡಿಸಿ ರಿಪೋರ್ಟ್ ಕಾರ್ಡನ್ನು ರಾಹುಲ್ ಮುಂದೆ ಹಿಡಿಯಲು ಅನ್ಯಮಾರ್ಗ ಅನುಸರಿಸುತ್ತಿದ್ದಾರೆ. ಅದೂ ಕೂಡಾ ನೇರವಾಗಿ ಮಾತುಕತೆಗೆ ಇಳಿಯದೆ ಎಂದು ಸುದ್ದಿ ಬಂದಿದೆ.
ಜೆಡಿಎಸ್ ನ ಚೆಲುವನಾರಾಯಣ ಸ್ವಾಮಿ, ಜಮೀರ್ ಅಹಮದ್, ಶರವಣ ಅವರೊಟ್ಟಿಗೆ ಮಾತುಕತೆ ನಡೆಸುತ್ತಿರುವ ಕಾಂಗ್ರೆಸ್ ಸಚಿವರುಗಳು ಯಾರು ಎಂಬುದು ಸ್ಪಷ್ಟವಾಗಿಲ್ಲ. ಬಿಬಿಎಂಪಿ ಮೇಯರ್ ಅಥವಾ ಉಪ ಮೇಯರ್ ಸ್ಥಾನ ಪಡೆಯುವುದು ಬಿಡುವುದು ಬೆಂಗಳೂರಿನ ಸಚಿವರುಗಳಿಗೆ ಬೇಕೇ ಹೊರತೂ 'ಸಿಎಂ' ಸಿದ್ದರಾಮಯ್ಯಗೆ ಆ ತಲೆಬಿಸಿ ಬೇಕಿಲ್ಲ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications