ಒತ್ತುವರಿ ತೆರವು, ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ: ಸಿಎಂ
ಬೆಂಗಳೂರು, ಸೆ. 15: ರಾಜ ಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಮನೆ, ಆಸ್ಪತ್ರೆ, ಅಪಾರ್ಟ್ ಮೆಂಟ್ ಕಟ್ಟಿಸಿಕೊಂಡಿರುವವರು ಯಾರೇ ಆಗಲಿ ಯೋಚನೆ ಮಾಡಬೇಡಿ, ಯಾರ ಮುಲಾಜೂ ಇಲ್ಲದೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ರಾಜರಾಜೇಶ್ವರಿ ನಗರ ವಲಯದ ಐಡಿಯಲ್ಸ್ ಹೋಮ್ಸ್ ಬಡಾವಣೆಯಲ್ಲಿರುವ ನಟ ದರ್ಶನ್ ತೂಗುದೀಪ ಮನೆ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಆಸ್ಪತ್ರೆ ಒತ್ತುವರಿ ತೆರವಿಗೆ ಸಿದ್ಧವಾಗಿದೆ. ದರ್ಶನ್ ಮನೆಯಿಂದ 2 ಎನ್ ಎಸ್ ಆಸ್ಪತ್ರೆಯಿಂದ 22 ಗುಂಟೆ ರಾಜಕಾಲುವೆ ಒತ್ತುವರಿಯಾಗಿದೆ ಎಂದು ವರದಿ ಬಂದಿದೆ. ಈ ಬಗ್ಗೆ ಬಿಬಿಎಂಪಿ ಏನು ಕ್ರಮ ಜರುಗಿಸಲಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ನೀಡಿದ ಉತ್ತರ ಹೀಗಿದೆ:[ರಾಜಕಾಲುವೆ ಜಾಗದಲ್ಲೇ ದರ್ಶನ್ ತೂಗುದೀಪ ಅವರ ಮನೆ!]

ಮನೆ ಕಳೆದು ಕೊಂಡ ಅರ್ಹ ಬಡವರಿಗೆ ಮನೆ !
ಒತ್ತುವರಿ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡ ಅತ್ಯಂತ ಅರ್ಹ ಬಡವರಿಗೆ ಮಾನವೀಯತೆಯ ಆಧಾರದ ಮೇರೆಗೆ ಸರ್ಕಾರಿ ಸ್ವಾಮ್ಯದ ವಸತಿ ಸಮುಚ್ಛಯಗಳಲ್ಲಿ ಮನೆ ಒದಗಿಸಲು ಪರಿಶೀಲಿಸಲಾಗುತ್ತಿದೆ ಎಂಬ ಅಂಶವನ್ನು ಮುಖ್ಯಮಂತ್ರಿ ಬಹಿರಂಗಪಡಿಸಿದರು.












Click it and Unblock the Notifications