ಕೋಮು ಗಲಭೆ: ಸೌಹಾರ್ದತೆ ಕಾಪಾಡಲು ಸಿದ್ದರಾಮಯ್ಯ ಮನವಿ
ಬೆಂಗಳೂರು, ಡಿಸೆಂಬರ್ 14 : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಯಲ್ಲಿ ಬಹಿರಂಗವಾಗಿ ಮನವಿ ಮಾಡಿದ್ದು ಕೋಮು ಸೌಹಾರ್ದತೆ ಕಾಯ್ದುಕೊಳ್ಳುವಂತೆ ರಾಜ್ಯದ ಜನತೆಯಲ್ಲಿ ಕೋರಿದ್ದಾರೆ.
ಜಗತ್ತಿನ ಯಾವ ಧರ್ಮವೂ ಮತ್ತೊಂದು ಧರ್ಮವನ್ನು ದ್ವೇಶಿಸುವುದಿಲ್ಲ, ಕೊಲ್ಲುವುದಿಲ್ಲ, ಕತ್ತರಿಸುವ, ಒಡೆಯುವ, ಮುರಿಯುವ, ಬೆಂಕಿ ಹಚ್ಚುವ ಭಾಷೆ ಮಾತನಾಡುವುದಿಲ್ಲ.ಧರ್ಮದ ಭಾಷೆ ಪ್ರೀತಿಯೇ ಹೊರತು ದ್ವೇಷ ಅಲ್ಲ. ಧರ್ಮ ಬೆಳೆಯಬೇಕಾಗಿರುವುದು ಆತ್ಮಾವಲೋಕನದ ಮೂಲಕ. ಒಂದು ಧರ್ಮವನ್ನು ಇನ್ನೊಂದು ಧರ್ಮದ ವಿರುದ್ಧ ಎತ್ತಿ ಕಟ್ಟುವ ಮೂಲಕ ಅಲ್ಲ ಎಂದು ರಾಜ್ಯದ ಜನತೆಗೆ ತಿಳಿ ಹೇಳಿದ್ದಾರೆ.

ನಮ್ಮದು ಸೌಹಾರ್ದ ಕರ್ನಾಟಕ, ಇಲ್ಲಿ ಹಲವಾರು ಜಾತಿ, ಧರ್ಮ, ಭಾಷೆ, ಸಂಸ್ಕೃತಿಗಳಿವೆ. ಪ್ರಾದೇಶಿಕ ಭಿನ್ನತೆಗಳಿದೆ. ಈ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಪಾಡಿಕೊಂಡು ಹೋಗುವ ವಿಶಾಲ ಮನಸ್ಸು ನಮ್ಮ ಮಣ್ಣಿನಲ್ಲಿದೆ.
ಈ ಸೌಹಾರ್ದತೆಯ ನಾಡನ್ನು ನಾವು ಕಟ್ಟಿದವರಲ್ಲ. ಇದು ನಮಗೆ ಹಿರಿಯರಿಂದ ಬಂದ ಬಳುವಳಿ. ಇದನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಉಡುಗೊರೆಯಾಗಿ ನೀಡುವ ಜವಾಬ್ದಾರಿ ನಮ್ಮದು.
ರಾಜ್ಯದ ಸೌಹಾರ್ದ ನೆಲೆಗೆ ಭಂಗ ತರುವ, ಜನರ ನಡುವೆ ದ್ವೇಶ ಬಿತ್ತಿ, ಹಿಂಸೆಗೆ ಪ್ರಚೋದಿಸುವ ಹುನ್ನಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ.
ಸುಳ್ಳು ಸುದ್ದಿಗಳನ್ನು ಹರಡಿ, ಶಾಂತಿ ಕದಡುವ ಶಕ್ತಿಗಳ ಮೇಲೆ ನಿಗಾ ಇಡಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಪ್ರಚೋದನಕಾರಿ ಸುಳ್ಳು ಸುದ್ದಿಗಳಿಗೆ ಜನರು ಕಿವಿಗೊಡಬಾರದು.
ಯಾವುದೇ ರೀತಿಯ ಪ್ರಚೋದನಕಾರಿ ಸುದ್ದಿಗಳು ಮ್ತತು ಸಂದೇಶಗಳನ್ನು ಹರಡುವ ಕೆಲಸದಲ್ಲಿ ತೊಡಗಿಸಿಕೊಳ್ಳಬಾರದು. ನಾಡಿನ ಸೌಹಾರ್ದ ಪರಂಪರೆಗೆ ಧಕ್ಕೆ ತರುವ ಯಾವುದೇ ವ್ಯಕ್ತಿ, ಯಾವುದೇ ಶಕ್ತಿಯನ್ನು ಸರ್ಕಾರದ ಹಾಗೂ ನಾಡಿನ ಜನತೆ ಸಹಿಸುವುದಿಲ್ಲ ಎಂದಿದ್ದಾರೆ.
-
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್












Click it and Unblock the Notifications