Get Updates
Get notified of breaking news, exclusive insights, and must-see stories!

'ಬಿಜೆಪಿ ತನ್ನ ಸಣ್ಣ ಬುದ್ಧಿ ಬದಲಾಯಿಸಲಿ, ಕ್ಯಾಂಟೀನ್ ಹೆಸರನಲ್ಲ'

ಬೆಂಗಳೂರು, ಡಿಸೆಂಬರ್ 17: 'ಇಂದಿರಾ ಕ್ಯಾಂಟೀನ್‌' ನ ಹೆಸರು ಬದಲಾಯಿಸಿ 'ಮಹರ್ಷಿ ವಾಲ್ಮೀಕಿ ಅನ್ನ ಕುಟೀರ' ಎಂದು ಬದಲಾಯಿಸಲು ಹೊರಟಿರುವ ಬಿಜೆಪಿ ಸರ್ಕಾರದ ಕ್ರಮದ ಬಗ್ಗೆ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

'ಇಂದಿರಾ ಕ್ಯಾಂಟೀನ್ ಗಳ ಹೆಸರನ್ನು ಬದಲಾಯಿಸಲು ಹೊರಟಿರುವ ರಾಜ್ಯದ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸುತ್ತೇನೆ ಮತ್ತು ಇಂತಹ ಕ್ಷುಲಕ ರಾಜಕಾರಣವನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಪಡಿಸುತ್ತೇನೆ' ಎಂದು ಅವರು ಹೇಳಿದ್ದಾರೆ.

'ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಗರೀಬಿ ಹಟಾವೋ ಘೋಷಣೆಯ ಮೂಲಕ ಬಡತನದ ವಿರುದ್ಧ ಯುದ್ದ ಸಾರಿ ಗೆದ್ದವರು. ಅವರು ಕೇವಲ ಕಾಂಗ್ರೆಸ್ ಪಕ್ಷದ ನಾಯಕಿಯಾಗಿರಲಿಲ್ಲ, ದೇಶದ ನಾಯಕಿಯಾಗಿದ್ದರು, ಬಡವರ ಪಾಲಿನ ಆಪತ್ಪಾಂಧವಗಾಗಿದ್ದರು. ಈ ಕಾರಣಕ್ಕಾಗಿ ಇಂದಿರಾ ಕ್ಯಾಂಟೀನ್ ಎಂದು ನಾಮಕರಣ ಮಾಡಲಾಗಿತ್ತು' ಎಂದಿದ್ದಾರೆ.

Siddaramaiah Oppose Government Decision Of Changing Indira Canteen Name

'ಈ ಕ್ಯಾಂಟೀನ್ ಗಳಿಗೆ ನಮ್ಮೆಲ್ಲರ ಹೆಮ್ಮೆಯ ಕವಿ ಮಹರ್ಷಿ ವಾಲ್ಮೀಕಿಯವರ ಹೆಸರು ಇಡುವ ಯೋಚನೆ ಇದೆಯಂತೆ. ಮಹರ್ಷಿ ವಾಲ್ಮೀಕಿಯವರ ಬಗ್ಗೆ ನಮಗೆಲ್ಲ ಅಪಾರವಾದ ಗೌರವ ಇದೆ. ಅವರ ಹೆಸರನ್ನು ಬಿಜೆಪಿ ತನ್ನಕ್ಷುಲಕ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಮಹಾಕವಿಗೆ ಅವಮಾನ ಮಾಡಲಾಗುತ್ತಿದೆ' ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

'ಮಹರ್ಷಿ ವಾಲ್ಮೀಕಿಯವರು ಒಬ್ಬ ಮಹಾಕವಿ, ಅವರ ಸಾಧನೆಗೆ ಹೊಂದುವಂತಹ ಯೋಜನೆಯನ್ನು ಬಿಜೆಪಿ ಸರ್ಕಾರ ಪ್ರಾರಂಭಿಸಲಿ, ಒಬ್ಬರಿಗೆ ಅಗೌರವ ಸಲ್ಲಿಸುವ ಮೂಲಕ ಇನ್ನೊಬ್ಬರಿಗೆ ಗೌರವ ಸಲ್ಲಿಸುವುದು ಇಬ್ಬರಿಗೂ ಮಾಡುವ ಅವಮಾನವಾಗಿದೆ' ಎಂದಿದ್ದಾರೆ.

'ರಾಜ್ಯ ಬಿಜೆಪಿ ಬದಲಾಯಿಸಬೇಕಾಗಿರುವುದು ಇಂದಿರಾ ಕ್ಯಾಂಟೀನ್ ಹೆಸರಲ್ಲ, ತನ್ನೊಳಗಿನ ಸಣ್ಣ ಬುದ್ದಿಯನ್ನು ಬದಲಾಯಿಸಬೇಕು. ನಮ್ಮ ಸರ್ಕಾರ ಜಾರಿಗೆ ತಂದಿರುವ ಪ್ರತಿಯೊಂದು ಬಡವರ ಪರ ಯೋಜನೆಗಳನ್ನು ರದ್ದುಮಾಡಲು ಹೊರಟಿರುವ ರಾಜ್ಯದ ಬಿಜೆಪಿ ಸರ್ಕಾರ ಜನಾಕ್ರೋಶಕ್ಕೆ ಹೆದರಿ ಯೋಜನೆಗಳ ಹೆಸರು ಬದಲಾಯಿಸಲು ಹೊರಟಿದೆ. ಬಡವರ ಪರವಾದ ಹೊಸ ಯೋಜನೆಗಳನ್ನು ರೂಪಿಸುವ ಶಕ್ತಿಯೂ ಇಲ್ಲ, ಮನಸ್ಸೂ ಇಲ್ಲ' ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+