'ಬಿಜೆಪಿ ತನ್ನ ಸಣ್ಣ ಬುದ್ಧಿ ಬದಲಾಯಿಸಲಿ, ಕ್ಯಾಂಟೀನ್ ಹೆಸರನಲ್ಲ'
ಬೆಂಗಳೂರು, ಡಿಸೆಂಬರ್ 17: 'ಇಂದಿರಾ ಕ್ಯಾಂಟೀನ್' ನ ಹೆಸರು ಬದಲಾಯಿಸಿ 'ಮಹರ್ಷಿ ವಾಲ್ಮೀಕಿ ಅನ್ನ ಕುಟೀರ' ಎಂದು ಬದಲಾಯಿಸಲು ಹೊರಟಿರುವ ಬಿಜೆಪಿ ಸರ್ಕಾರದ ಕ್ರಮದ ಬಗ್ಗೆ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
'ಇಂದಿರಾ ಕ್ಯಾಂಟೀನ್ ಗಳ ಹೆಸರನ್ನು ಬದಲಾಯಿಸಲು ಹೊರಟಿರುವ ರಾಜ್ಯದ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸುತ್ತೇನೆ ಮತ್ತು ಇಂತಹ ಕ್ಷುಲಕ ರಾಜಕಾರಣವನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಪಡಿಸುತ್ತೇನೆ' ಎಂದು ಅವರು ಹೇಳಿದ್ದಾರೆ.
'ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಗರೀಬಿ ಹಟಾವೋ ಘೋಷಣೆಯ ಮೂಲಕ ಬಡತನದ ವಿರುದ್ಧ ಯುದ್ದ ಸಾರಿ ಗೆದ್ದವರು. ಅವರು ಕೇವಲ ಕಾಂಗ್ರೆಸ್ ಪಕ್ಷದ ನಾಯಕಿಯಾಗಿರಲಿಲ್ಲ, ದೇಶದ ನಾಯಕಿಯಾಗಿದ್ದರು, ಬಡವರ ಪಾಲಿನ ಆಪತ್ಪಾಂಧವಗಾಗಿದ್ದರು. ಈ ಕಾರಣಕ್ಕಾಗಿ ಇಂದಿರಾ ಕ್ಯಾಂಟೀನ್ ಎಂದು ನಾಮಕರಣ ಮಾಡಲಾಗಿತ್ತು' ಎಂದಿದ್ದಾರೆ.

'ಈ ಕ್ಯಾಂಟೀನ್ ಗಳಿಗೆ ನಮ್ಮೆಲ್ಲರ ಹೆಮ್ಮೆಯ ಕವಿ ಮಹರ್ಷಿ ವಾಲ್ಮೀಕಿಯವರ ಹೆಸರು ಇಡುವ ಯೋಚನೆ ಇದೆಯಂತೆ. ಮಹರ್ಷಿ ವಾಲ್ಮೀಕಿಯವರ ಬಗ್ಗೆ ನಮಗೆಲ್ಲ ಅಪಾರವಾದ ಗೌರವ ಇದೆ. ಅವರ ಹೆಸರನ್ನು ಬಿಜೆಪಿ ತನ್ನಕ್ಷುಲಕ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಮಹಾಕವಿಗೆ ಅವಮಾನ ಮಾಡಲಾಗುತ್ತಿದೆ' ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
'ಮಹರ್ಷಿ ವಾಲ್ಮೀಕಿಯವರು ಒಬ್ಬ ಮಹಾಕವಿ, ಅವರ ಸಾಧನೆಗೆ ಹೊಂದುವಂತಹ ಯೋಜನೆಯನ್ನು ಬಿಜೆಪಿ ಸರ್ಕಾರ ಪ್ರಾರಂಭಿಸಲಿ, ಒಬ್ಬರಿಗೆ ಅಗೌರವ ಸಲ್ಲಿಸುವ ಮೂಲಕ ಇನ್ನೊಬ್ಬರಿಗೆ ಗೌರವ ಸಲ್ಲಿಸುವುದು ಇಬ್ಬರಿಗೂ ಮಾಡುವ ಅವಮಾನವಾಗಿದೆ' ಎಂದಿದ್ದಾರೆ.
'ರಾಜ್ಯ ಬಿಜೆಪಿ ಬದಲಾಯಿಸಬೇಕಾಗಿರುವುದು ಇಂದಿರಾ ಕ್ಯಾಂಟೀನ್ ಹೆಸರಲ್ಲ, ತನ್ನೊಳಗಿನ ಸಣ್ಣ ಬುದ್ದಿಯನ್ನು ಬದಲಾಯಿಸಬೇಕು. ನಮ್ಮ ಸರ್ಕಾರ ಜಾರಿಗೆ ತಂದಿರುವ ಪ್ರತಿಯೊಂದು ಬಡವರ ಪರ ಯೋಜನೆಗಳನ್ನು ರದ್ದುಮಾಡಲು ಹೊರಟಿರುವ ರಾಜ್ಯದ ಬಿಜೆಪಿ ಸರ್ಕಾರ ಜನಾಕ್ರೋಶಕ್ಕೆ ಹೆದರಿ ಯೋಜನೆಗಳ ಹೆಸರು ಬದಲಾಯಿಸಲು ಹೊರಟಿದೆ. ಬಡವರ ಪರವಾದ ಹೊಸ ಯೋಜನೆಗಳನ್ನು ರೂಪಿಸುವ ಶಕ್ತಿಯೂ ಇಲ್ಲ, ಮನಸ್ಸೂ ಇಲ್ಲ' ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications