'ಇದು ಮೋದಿ ಕುರುಡುತನದ ಆಲೋಚನೆ': ಸಿದ್ದರಾಮಯ್ಯ ಅಸಮಾಧಾನ
ಬೆಂಗಳೂರು, ಮೇ 31: ಆನ್ಲೈನ್ ತರಗತಿಗಳ ಮೂಲಕ ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಮಾಡುವ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
Recommended Video
''ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್ಲೈನ್ ತರಗತಿಗಳ ಮೂಲಕ ನೀಡುವ ಪ್ರಧಾನಿ ಮೋದಿ ಪ್ರಸ್ತಾವ, ದೇಶದ ಸಾಮಾಜಿಕ ವಾಸ್ತವದ ಅರಿವಿಲ್ಲದವರ ಕುರುಡುತನದ ಆಲೋಚನೆ! ಇದರಿಂದ ಸಮಾಜದ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಲಿದೆ.'' ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೊರೊನಾ ಲಾಕ್ಡೌನ್ ನಂತರ ಸರ್ಕಾರ ಆನ್ ಲೈನ್ ಶಿಕ್ಷಣಕ್ಕೆ ಒತ್ತು ನೀಡಿದೆ. ಆದರೆ, ಆನ್ ಲೈನ್ ಶಿಕ್ಷಣ ನಗರ ಪ್ರದೇಶದಲ್ಲಿ ನೀಡಬಹುದು. ಹಳ್ಳಿಗಳಲ್ಲಿ ಆನ್ ಲೈನ್ ಶಿಕ್ಷಣಕ್ಕೆ ಸಮಸ್ಯೆಗಳು ಹೆಚ್ಚು. ನೆಟ್ವರ್ಕ್ ಸಮಸ್ಯೆ, ವಿದ್ಯುತ್ ಸಮಸ್ಯೆ ಹೀಗೆ ಆನ್ ಲೈನ್ ತರಗತಿಗೆ ಅಡ್ಡಿಗಳು ಹೆಚ್ಚಿವೆ.
ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್ಲೈನ್ ತರಗತಿಗಳ ಮೂಲಕ ನೀಡುವ @PMOIndia ಪ್ರಸ್ತಾವ,
— Siddaramaiah (@siddaramaiah) May 31, 2020
ದೇಶದ ಸಾಮಾಜಿಕ ವಾಸ್ತವದ ಅರಿವಿಲ್ಲದವರ ಕುರುಡುತನದ ಆಲೋಚನೆ!
ಇದರಿಂದ ಸಮಾಜದ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಲಿದೆ.#onlinelearning
1/2
ಹೀಗಾಗಿ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ಧರಾಮಯ್ಯ ಆನ್ ಲೈನ್ ಮೂಲಕ ಪದವಿ ಮತ್ತು ವೃತ್ತಿಪರ ಶಿಕ್ಷಣ ತರಗತಿ ಮಾಡಿದರೆ, ಸಮಾಜದ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಲಿದೆ ಎಂದಿದ್ದಾರೆ. ಹಳ್ಳಿ ವಿದ್ಯಾರ್ಥಿಗಳು ಆನ್ ಲೈನ್ ಶಿಕ್ಷಣ ಪಡೆದುಕೊಳ್ಳುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.
ಭಾರತದ ಅಸ್ತಿತ್ವ ಇರುವುದು ಹಳ್ಳಿಗಳಲ್ಲಿ.
— Siddaramaiah (@siddaramaiah) May 31, 2020
ಅಲ್ಲೆಲ್ಲ ಕಂಪ್ಯೂಟರ್-ಲ್ಯಾಪ್ ಟಾಪ್ -ಸ್ಮಾರ್ಟ್ ಪೋನ್ಗಳೆಲ್ಲಿಂದ ಬರಬೇಕು?
ಪೋನ್ ಇದ್ದರೂ ನೆಟ್ವರ್ಕ್ ಎಲ್ಲಿದೆ?
ಆನ್ ಲೈನ್ ಶಿಕ್ಷಣದಲ್ಲಿ ಹಳ್ಳಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಹೇಗೆ?
ದೇಶ ಆಳುವ ನಾಯಕರಿಗೆ ಈ ಪ್ರಾಥಮಿಕ ಜ್ಞಾನ ಬೇಡವೇ?#onlinelearning
2/2
''ಭಾರತದ ಅಸ್ತಿತ್ವ ಇರುವುದು ಹಳ್ಳಿಗಳಲ್ಲಿ. ಅಲ್ಲೆಲ್ಲ ಕಂಪ್ಯೂಟರ್-ಲ್ಯಾಪ್ ಟಾಪ್ -ಸ್ಮಾರ್ಟ್ ಪೋನ್ಗಳೆಲ್ಲಿಂದ ಬರಬೇಕು? ಪೋನ್ ಇದ್ದರೂ ನೆಟ್ವರ್ಕ್ ಎಲ್ಲಿದೆ? ಆನ್ ಲೈನ್ ಶಿಕ್ಷಣದಲ್ಲಿ ಹಳ್ಳಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಹೇಗೆ? ದೇಶ ಆಳುವ ನಾಯಕರಿಗೆ ಈ ಪ್ರಾಥಮಿಕ ಜ್ಞಾನ ಬೇಡವೇ?'' ಎಂದು ಸಿದ್ಧರಾಮಯ್ಯ ಟ್ವಿಟ್ಟರ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications