Get Updates
Get notified of breaking news, exclusive insights, and must-see stories!

'ಇದು ಮೋದಿ ಕುರುಡುತನದ ಆಲೋಚನೆ': ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು, ಮೇ 31: ಆನ್‌ಲೈನ್ ತರಗತಿಗಳ ಮೂಲಕ ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಮಾಡುವ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

Recommended Video

      ದತ್ತಾತ್ರೇಯ ರೇವೂರ ತಕ್ಷಣ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದ ಸಿದ್ದರಾಮಯ್ಯ| Siddaramaiah | Oneindia kannada

      ''ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್‌ಲೈನ್ ತರಗತಿಗಳ ಮೂಲಕ ನೀಡುವ ಪ್ರಧಾನಿ ಮೋದಿ ಪ್ರಸ್ತಾವ, ದೇಶದ ಸಾಮಾಜಿಕ ವಾಸ್ತವದ ಅರಿವಿಲ್ಲದವರ ಕುರುಡುತನದ ಆಲೋಚನೆ! ಇದರಿಂದ ಸಮಾಜದ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಲಿದೆ.'' ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

      Siddaramaiah Opposed Online Classes For Degree And Professional Courses

      ಕೊರೊನಾ ಲಾಕ್‌ಡೌನ್‌ ನಂತರ ಸರ್ಕಾರ ಆನ್ ಲೈನ್ ಶಿಕ್ಷಣಕ್ಕೆ ಒತ್ತು ನೀಡಿದೆ. ಆದರೆ, ಆನ್ ಲೈನ್ ಶಿಕ್ಷಣ ನಗರ ಪ್ರದೇಶದಲ್ಲಿ ನೀಡಬಹುದು. ಹಳ್ಳಿಗಳಲ್ಲಿ ಆನ್ ಲೈನ್ ಶಿಕ್ಷಣಕ್ಕೆ ಸಮಸ್ಯೆಗಳು ಹೆಚ್ಚು. ನೆಟ್‌ವರ್ಕ್ ಸಮಸ್ಯೆ, ವಿದ್ಯುತ್ ಸಮಸ್ಯೆ ಹೀಗೆ ಆನ್ ಲೈನ್‌ ತರಗತಿಗೆ ಅಡ್ಡಿಗಳು ಹೆಚ್ಚಿವೆ.

      ಹೀಗಾಗಿ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ಧರಾಮಯ್ಯ ಆನ್ ಲೈನ್ ಮೂಲಕ ಪದವಿ ಮತ್ತು ವೃತ್ತಿಪರ ಶಿಕ್ಷಣ ತರಗತಿ ಮಾಡಿದರೆ, ಸಮಾಜದ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಲಿದೆ ಎಂದಿದ್ದಾರೆ. ಹಳ್ಳಿ ವಿದ್ಯಾರ್ಥಿಗಳು ಆನ್ ಲೈನ್‌ ಶಿಕ್ಷಣ ಪಡೆದುಕೊಳ್ಳುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.

      ''ಭಾರತದ ಅಸ್ತಿತ್ವ ಇರುವುದು ಹಳ್ಳಿಗಳಲ್ಲಿ. ಅಲ್ಲೆಲ್ಲ ಕಂಪ್ಯೂಟರ್-ಲ್ಯಾಪ್ ಟಾಪ್ -ಸ್ಮಾರ್ಟ್ ಪೋನ್‌ಗಳೆಲ್ಲಿಂದ ಬರಬೇಕು? ಪೋನ್ ಇದ್ದರೂ ನೆಟ್‌ವರ್ಕ್ ಎಲ್ಲಿದೆ? ಆನ್ ಲೈನ್ ಶಿಕ್ಷಣದಲ್ಲಿ ಹಳ್ಳಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಹೇಗೆ? ದೇಶ ಆಳುವ ನಾಯಕರಿಗೆ ಈ ಪ್ರಾಥಮಿಕ ಜ್ಞಾನ ಬೇಡವೇ?'' ಎಂದು ಸಿದ್ಧರಾಮಯ್ಯ ಟ್ವಿಟ್ಟರ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+