ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿದ ಸಿದ್ಧರಾಮಯ್ಯ
ಬೆಂಗಳೂರು, ಜೂನ್ 13: ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಇದನ್ನು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವಿರೋಧಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.
''ಕೇಂದ್ರ ಸರ್ಕಾರ ಸತತ ಏಳನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿದೆ. ಏಳು ದಿನಗಳಲ್ಲಿ ಪೆಟ್ರೋಲ್ ಬೆಲೆ ರೂ. 4.70 ಮತ್ತು ಡೀಸೆಲ್ ಬೆಲೆ ರೂ. 3.40 ಏರಿಕೆಯಾಗಿದೆ.'' ಎಂದಿರುವ ಅವರು ಪೆಟ್ರೋಲ್, ಡೀಸೆಲ್ ಬೆಲೆಗೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೋಲಿಕೆ ಮಾಡಿದ್ದಾರೆ.
ಕೇಂದ್ರ ಸರ್ಕಾರ ಸತತ ಏಳನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿದೆ.
— Siddaramaiah (@siddaramaiah) June 13, 2020
ಏಳು ದಿನಗಳಲ್ಲಿ ಪೆಟ್ರೋಲ್ ಬೆಲೆ ರೂ. 4.70 ಮತ್ತು ಡೀಸೆಲ್ ಬೆಲೆ ರೂ. 3.40 ಏರಿಕೆಯಾಗಿದೆ.
ಆ ಕಡೆ ಕೊರೊನಾ ಸೋಂಕಿತರ ಸಂಖ್ಯೆ,
ಈ ಕಡೆ ಪೆಟ್ರೋಲ್-ಡೀಸೆಲ್ ಬೆಲೆ ಎರಡೂ ಅನಿಯಂತ್ರಿತವಾಗಿ ಏರುತ್ತಿದೆ.
1/2 pic.twitter.com/q0w4nPFCgX
''ಆ ಕಡೆ ಕೊರೊನಾ ಸೋಂಕಿತರ ಸಂಖ್ಯೆ, ಈ ಕಡೆ ಪೆಟ್ರೋಲ್-ಡೀಸೆಲ್ ಬೆಲೆ ಎರಡೂ ಅನಿಯಂತ್ರಿತವಾಗಿ ಏರುತ್ತಿದೆ.'' ಎಂದು ಸಿದ್ಧರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ.

ಜೂನ್ 7 ರಂದು ಪೆಟ್ರೋಲ್ ಬೆಲೆ 71.86 ಇದ್ದೂ, ಇಂದು 75.16 ಆಗಿದೆ. ಕೇವಲ 6 ದಿನಗಳಲ್ಲಿ 4 ರೂಪಾಯಿ ಹೆಚ್ಚಾಗಿದೆ. ಇನ್ನು ಜೂನ್ 7 ರಂದು ಡೀಸೆಲ್ ದರ 69.99 ಇದ್ದೂ, ಇಂದಿಗೆ 73.39 ಆಗಿದೆ. ಡೀಸೆಲ್ ಸಹ 4 ರೂಪಾಯಿ ಹೆಚ್ಚಾಗಿದೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಪ್ರತಿಕ್ರಿಯೆ ನೀಡಿದ್ದಾರೆ. ''ಪೆಟ್ರೋಲ್, ಡೀಸೆಲ್ ದರ ಹೆಚ್ಚು ಮಾಡುವ ಮೂಲಕ ಸರ್ಕಾರ ಲೂಟಿ ಮಾಡಲು ಮುಂದಾಗಿದೆ. ಇದು ಆತಂಕಕಾರಿ ಬೆಳವಣಿಗೆ. ಹೀಗೆ ಜನರನ್ನು ಕಿತ್ತು ತಿನ್ನುವ ಪ್ರವೃತ್ತಿಯನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು.'' ಎಂದಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
MT Aqua Titan: ಮಂಗಳೂರು ಕರಾವಳಿಗೆ ಆಗಮಿಸಿದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?












Click it and Unblock the Notifications