ಜನಾರ್ದನ ರೆಡ್ಡಿ ಪಾಪಕ್ಕೆ ಮಕ್ಕಳಿಗೆ ಶಿಕ್ಷೆ ಆಗದಿರಲಿ: ಸಿದ್ದರಾಮಯ್ಯ ಟ್ವೀಟ್

Recommended Video

      ಸಿದ್ದರಾಮಯ್ಯ ತಮ್ಮ ಮಗನ ಸಾವಿನ ಬಗ್ಗೆ ಜನಾರ್ಧನ ರೆಡ್ಡಿ ಕೊಟ್ಟ ಹೇಳಿಕೆಗೆ ಹೇಳಿದ್ದು ಹೀಗೆ | Oneindia Kannada

      ಬೆಂಗಳೂರು, ಅಕ್ಟೋಬರ್ 30: ಮಾಜಿ ಸಚಿವ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ವಯಕ್ತಿಕ ವಾಗ್ದಾಳಿ ತಾರಕಕ್ಕೇರಿದ್ದು, ಪರಸ್ಪರ ವಯಕ್ತಿಕ ದೋಷಾರೋಪಣೆ ನಂತರ ಇದೀಗ ಸಿದ್ದರಾಮಯ್ಯ ತಮ್ಮ ಪುತ್ರನ ಸಾವಿನ ಬಗೆಗೆ ನೀಡಿದ್ದ ಹೇಳಿಕೆ ಕುರಿತಂತೆ ಜನಾರ್ದನ ರೆಡ್ಡಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

      ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ನನ್ನ ಮಗನ ಸಾವಿನ ಬಗ್ಗೆ ಜನಾರ್ದನ ರೆಡ್ಡಿ ಮಾತನಾಡಿದ್ದಾರೆ, ನಾನು ಮಾಡಿದ ಪಾಪದಿಂದಲೇ ನನ್ನ ಮಗನ ಸಾವಾಯಿತು ಎಂದಿದ್ದಾರೆ, ಆದರೆ ಜನಾರ್ದನ ರೆಡ್ಡಿ ಪಾಪಗಳಿಗೆ ದೇವರು ಅವರ ಮಕ್ಕಳಿಗೆ ಶಿಕ್ಷೆ ನೀಡದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುವ ಮೂಲಕ ಜನಾರ್ದನ ರೆಡ್ಡಿ ಅವರಿಗೆ ಪ್ರತ್ಯುತ್ತರ ನೀಡಿದ್ದಾರೆ.

      ಕಳೆದ ಮೂರು ದಿನಗಳಿಂದ ಸಿದ್ದರಾಮಯ್ಯ ಹಾಅಗೂ ಜನಾರ್ದನ ರೆಡ್ಡಿ ನಡುವೆ ಪರಸ್ಪರ ವಾದ-ಪ್ರತಿವಾದ ನಡೆದಿದ್ದು ಮಂಗಳವಾರ ಬೆಳಗ್ಗೆಯಷ್ಟೇ ಚಿತ್ರದುರ್ಗ ಜಿಲ್ಲೆಯಲ್ಲಿ ಜನಾರ್ದನ ರೆಡ್ಡಿ ಹೇಳಿಕೆ ನೀಡಿ ಜನಾರ್ದನ ರೆಡ್ಡಿಯವರು ಸಿದ್ದರಾಮಯ್ಯ ಮಾಡಿದ ಪಾಪಕೃತ್ಯಗಳಿಂದಲೇ ಅವರ ಪುತ್ರನ ಸಾವು ಸಂಭವಿಸಿತ್ತು ಎಂದು ಅವರು ಟೀಕಿಸಿದ್ದರು.

      Siddaramaiah prays God dont punish Reddys child for his sins

      ಹೀಗಾಗಿ ಅದಕ್ಕೆ ಉತ್ತರ ನೀಡಿರುವ ಸಿದ್ದರಾಮಯ್ಯ, ಜನಾರ್ದನ ರೆಡ್ಡಿ ಮಾಡಿರುವ ಪಾಪಗಳಿಗೆ ಮಕ್ಕಳಿಗೆ ಶಿಕ್ಷೆಯಾಗದಿರಲಿ ಎಂದು ಪ್ರಾರ್ಥಿಸುವ ಮೂಲಕ ಪ್ರಬುದ್ಧತೆ ಪ್ರದರ್ಶಿಸಿದ್ದಾರೆ ಆದರೆ ಇದಕ್ಕೆ ಜನಾರ್ದನ ರೆಡ್ಡಿ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂದು ಕಾದು ನೋಡಬೇಕಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+