ರಾಜ್ಯ ಸರ್ಕಾರ ಹಠಕ್ಕೆ ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ: ಸಿದ್ದರಾಮಯ್ಯ ಆಕ್ರೋಶ
ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಮಾತನ್ನು ರಾಜ್ಯ ಸರ್ಕಾರ ಕೇಳುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, ಜನವರಿ. 27: ರಾಜ್ಯ ಸರ್ಕಾರ ಹಠಕ್ಕೆ ಬಿದ್ದು ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟ ನಡೆಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜಧಾನಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಕೇಳದೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
"ಮುಷ್ಕರ ನಿರತ ರಾಜ್ಯ ಅಂಗನವಾಡಿ ಕಾರ್ಯಕರ್ತರನ್ನು ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು. ಅತ್ಯಂತ ಖಂಡನೀಯ. ಮುಖ್ಯಮಂತ್ರಿಗಳು ತಕ್ಷಣ ಅಂಗನವಾಡಿ ಕಾರ್ಯಕರ್ತರನ್ನು ಕರೆದು ಅವರ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಬೇಕು" ಎಂದು ಒತ್ತಾಯಿಸಿದ್ದಾರೆ.

"ಅಂಗನವಾಡಿ ಕಾರ್ಯಕರ್ತರು ಮಳೆ - ಚಳಿ - ಗಾಳಿ ಎನ್ನದೆ ಬೀದಿಯಲ್ಲಿ ಠಿಕಾಣಿ ಹೂಡಿ ಮುಷ್ಕರದಲ್ಲಿ ತೊಡಗಿದ್ದಾರೆ. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇದಾದ ನಂತರವೂ ರಾಜ್ಯ ಸರ್ಕಾರ ಹಠಕ್ಕೆ ಬಿದ್ದು ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟ ನಡೆಸುತ್ತಿರುವುದು ವಿಷಾದನೀಯ" ಎಂದು ಕಿಡಿಕಾರಿದ್ದಾರೆ.
ಸೇವೆ ಕಾಯಂ, ವೇತನ ಹೆಚ್ಚಳ ಮತ್ತು ಮತ್ತು ನಿವೃತ್ತಿ ಸೌಲಭ್ಯವೂ ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿದ್ದಾರೆ. ರಾಜ್ಯ @BJP4Karnataka ಸರ್ಕಾರ ಮನಸ್ಸು ಮಾಡಿದರೆ ಮಾತುಕತೆಯ ಮೂಲಕ ಮುಷ್ಕರ ನಿರತರ ಬೇಡಿಕೆ ಈಡೇರಿಸಲು ಸಾಧ್ಯವಿತ್ತು. ಸರ್ಕಾರ ಉದ್ಧಟತನದಿಂದ ಸಂಘರ್ಷದ ಹಾದಿ ಆಯ್ದುಕೊಂಡಿದೆ.
— Siddaramaiah (@siddaramaiah) January 27, 2023
3/4
ಸೇವೆ ಕಾಯಂ, ವೇತನ ಹೆಚ್ಚಳ ಮತ್ತು ಮತ್ತು ನಿವೃತ್ತಿ ಸೌಲಭ್ಯವೂ ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿದ್ದಾರೆ. ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಮಾತುಕತೆಯ ಮೂಲಕ ಮುಷ್ಕರ ನಿರತರ ಬೇಡಿಕೆ ಈಡೇರಿಸಲು ಸಾಧ್ಯವಿತ್ತು. ಸರ್ಕಾರ ಉದ್ಧಟತನದಿಂದ ಸಂಘರ್ಷದ ಹಾದಿ ಆಯ್ದುಕೊಂಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮ ಸರ್ಕಾರದ ಕಾಲದ ಐದು ವರ್ಷಗಳ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತರ ಗೌರವಧನವನ್ನು ರೂ.5,000 ಗಳಿಂದ ರೂ. 8000ಕ್ಕೆ ಮತ್ತು ಸಹಾಯಕಿಯರ ವೇತನವನ್ನು ರೂ.2500 ರಿಂದ ರೂ.4000ಕ್ಕೆ ಹೆಚ್ಚಿಸಿದ್ದೆವು. ಆದರೆ ರಾಜ್ಯದ ಬಿಜೆಪಿ ಸರ್ಕಾರ ಅಂಗನವಾಡಿ ಕಾರ್ಯಕರ್ತರ ಮುಷ್ಕರವನ್ನು ತಡೆಯುವ ಹತಾಶ ಪ್ರಯತ್ನ ಮಾಡುತ್ತಿದ್ದು ಇದು ಪ್ರಜಾತಂತ್ರ ವಿರೋಧಿ ಪ್ರಯತ್ನ ಎಂದು ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆಯನ್ನು ಕಂಡು ಕಾಣದಂತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ವಿರುದ್ಧ ಅನೇಕ ಸಮಾಝಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದು ಅಹೋರಾತ್ರಿ ಧರಣಿ ನಡೆಸುತ್ತಿರುವವರ ಬೇಡಿಕೆಗಳನ್ನು ಕೇಳದಷ್ಟು ಸರ್ಕಾರ ಕುರುಡು ಮತ್ತು ಕಿವುದಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications