ನವಿಲು ತೀರ್ಥದಿಂದ ಬಾದಾಮಿಗೆ ನೀರು ಕೇಳಿದ ಸಿದ್ದರಾಮಯ್ಯ
Recommended Video
ಬೆಂಗಳೂರು, ಜು.7: ಬಾದಾಮಿ ವಿಧಾನಸಭೆ ಕ್ಷೇತ್ರದ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಿರುವುದರಿಂದ ಬೆಳಗಾವಿಯ ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಮುಂಗಾರು ಆರಂಭವಾಗಿ ಒಂದು ತಿಂಗಳು ಕಳೆದಿದೆ, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ, ಆದರೆ ಕಲಬುರಗಿ, ಬಾಗಲಕೋಟೆ ಈ ಭಾಗದಲ್ಲಿ ಮಳೆಯಾಗದೆ, ರೈತರು ಕಂಗಾಲಾಗಿದ್ದಾರೆ, ಹಾಗಾಗಿ ಬಾದಾಮಿ ಕ್ಷೇತ್ರದ ಜನರಿಗೆ ನೀರು ಒದಗಿಸುವಂತೆ ಸಿದ್ದರಾಮಯ್ಯ ಹೇಳಿದ್ದಾರೆ.
ಉ.ಕರ್ನಾಟಕಕ್ಕೆ ನ್ಯಾಯ ಕೊಡಿಸುವಂತೆ ಸಿದ್ದರಾಮಯ್ಯಗೆ ಎಚ್.ಕೆ.ಪಾಟೀಲ್ ಪತ್ರ
ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಮೇಘಣ್ಣನವರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ಮಲಪ್ರಭಾ ಅಚ್ಚುಕಟ್ಟು ಭಾಗದ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ಹೋಗಾಗಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದರು.
ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡುವುದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ರೈತರ ಬೆಳೆಗಳಿಗೂ ನೀರು ದೊರೆಯುತ್ತದೆ ಎಂದರು. ನೀರು ಬಿಡುಗಡೆಗೆ ತಕ್ಷಣ ಕ್ರಮ ಜರುಗಿಸುವುದಾಗಿ ಪಾದೇಶಿಕ ಆಯುಕ್ತರು ತಿಳಿಸಿದ್ದಾರೆ.