ಬಿಜೆಪಿ ಪ್ರಚಾರಕ್ಕೆ ನಾವೂ ಅಡ್ಡಿ ಉಂಟು ಮಾಡಬೇಕಾಗುತ್ತದೆ!
ಬೆಂಗಳೂರು, ಅ. 28: ರಾಜಾರಾಜೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆಯನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಸೋಲಿನ ಭೀತಿಯಿಂದಾಗಿ ಹರಾಶಗೊಂಡಿರುವ ಬಿಜೆಪಿ ಈ ರೀತಿ ವರ್ತಿಸುತ್ತಿದೆ. ಪ್ರಚಾರಕ್ಕೆ ಅಡ್ಡಪಡಿಸಿ ಗೂಂಡಾ ವರ್ತನೆ ತೋರಿದ ಬಿಜೆಪಿಯ ಬಿಬಿಎಂಪಿ ಮಾಜಿ ಸದಸ್ಯ ಜಿ.ಕೆ. ವೆಂಕಟೇಶ್ ಮತ್ತವರ ಬೆಂಬಲಿಗರನ್ನು ಕೂಡಲೇ ಬಂಧಿಸುವಂತೆ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ವೆಂಕಟೇಶ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಯಶವಂತಪುರ ಪೊಲೀಸ್ ಠಾಣೆ ಮುಂಭಾಗ ಧರಣಿ ನಡೆಸಿದ್ದಾರೆ.

ಯಶವಂತಪುರ ವಾರ್ಡ್ ನ ಬಿ.ಕೆ. ನಗರದಲ್ಲಿ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿದ್ದಾಗ ಅಲ್ಲಿಗೆ ಬಂದ ವೆಂಕಟೇಶ್ ಮತ್ತವರ ಬೆಂಬಲಿಗರು ಪ್ರಚಾರಕ್ಕೆ ಅಡ್ಡಿಯುಂಟು ಮಾಡಿದರು. ಪ್ರಚಾರದ ವಾಹನ ಮುಂದಕ್ಕೆ ಹೋಗದಂತೆ ತಡೆದರು. ಹಿಂದಕ್ಕೆ ಹೋಗಲು ಒಪ್ಪದ ಸಿದ್ದರಾಮಯ್ಯ ಅವರು, ಬೆಂಗಳೂರು ಪೊಲೀಸ್ ಕಮೀಷನರ್ ಅವರಿಗೆ ಕರೆ ಮಾಡಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಚದುರಿಸಿದರು.

Recommended Video
ಬಿಜೆಪಿಯ ಇಂಥ ಗೂಂಡಾ ವರ್ತನೆಗೆ ಕಾಂಗ್ರೆಸ್ ಬಗ್ಗುವುದಿಲ್ಲ. ಇಂಥ ಘಟನೆ ಮರುಕಳಿಸಿದರೆ ಬಿಜೆಪಿಯವರ ಪ್ರಚಾರ ಸಭೆಗಳಿಗೆ ನಾವೂ ಅಡ್ಡಿ ಉಂಟು ಮಾಡಬೇಕಾಗುತ್ತದೆ. ಚುನಾವಣೆ ನ್ಯಾಯಸಮ್ಮತವಾಗಿ ನಡೆಯಬೇಕು. ಮುನಿರತ್ನ ಅವರ ಗೂಂಡಾಗಿರಿಗೆ ಮತದಾರರು ಪಾಠ ಕಲಿಸಬೇಕು ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications