ದೆಹಲಿ ಪೊಲೀಸರ ನಡೆ 'ಬೇಲಿಯೇ ಎದ್ದು ಹೊಲ ಮೇಯ್ದಂತೆ': ಸಿದ್ದರಾಮಯ್ಯ
Recommended Video
ಬೆಂಗಳೂರು, ಡಿಸೆಂಬರ್ 16: ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಯುನಿವರ್ಸಿಟಿ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೌರ್ಯ' ಬೇಲಿಯೇ ಎದ್ದು ಹೊಲ ಮೇಯ್ದಂತೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸರ ವಿರುದ್ಧವೇ ಅನುಮಾನ
ವಿಶ್ವವಿದ್ಯಾಲಯ ಕ್ಯಾಂಪಸ್ಗೆ ಪೊಲೀಸರೇ ನುಗ್ಗಿ ನಡೆಸಿರುವ ದಾಂಧಲೆ ನಡೆಸಿ ವಿದ್ಯಾರ್ಥಿಗಳ ಮೇಲೆ ನಡೆಸಿರುವ ದೌರ್ಜನ್ಯದ ಬಗ್ಗೆ ಕೇಂದ್ರ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ದೆಹಲಿಯಲ್ಲಿ ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಅವರ ಮೇಲೆ ಲಾಠಿ ಪ್ರಹಾರ ನಡೆಸಿ ಗುಂಡಿನ ದಾಳಿ ನಡೆಸಿರುವ ಹಾಗೂ ಕ್ಯಾಂಪಸ್ ಒಳಗೆ ನುಗ್ಗಿ ದಾಂಧಲೆ ಮಾಡಿರುವ ವೀಡಿಯೋ ವೈರಲ್ ಆಗಿದೆ.
ಕಳೆದ ರಾತ್ರಿ ದೆಹಲಿಯಲ್ಲಿ 'ಬೇಲಿಯೇ ಎದ್ದು ಹೊಲಮೇದಂತೆ' ಪೊಲೀಸರೇ ಕ್ಯಾಂಪಸ್ ಗೆ ನುಗ್ಗಿ ನಡೆಸಿರುವ ದಾಂದಲೆ ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಕೇಂದ್ರ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು.#JamiaProtestsCAB #JamiaProtest
— Siddaramaiah (@siddaramaiah) December 16, 2019
ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿ ಸಮೂಹ ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸರ್ವಾಧಿಕಾರಿ ಧಿಮಾಕಿನಿಂದ ಹತ್ತಿಕ್ಕಲು ಹೊರಟಿರುವ ನರೇಂದ್ರ ಮೋದಿ ಸರ್ಕಾರದ ನಡೆ ಖಂಡನೀಯ ಎಂದು ಸಿದ್ದರಾಮಯ್ಯ ನುಡಿದಿದ್ದಾರೆ.