Get Updates
Get notified of breaking news, exclusive insights, and must-see stories!

ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೆ ಒಳಪಡಿಸಿ: ಸಿದ್ದರಾಮಯ್ಯ

ಬೆಂಗಳೂರು, ಏ. 20: ಪಾದರಾಯನಪುರ ಘಟನೆಯಲ್ಲಿ ಭಾಗವಹಿಸಿದ್ದವರನ್ನು ಗುರುತಿಸಿ ಕಠಿಣ ಶಿಕ್ಷಗೆ ಒಳಪಡಿಸಬೇಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಪಾದರಾಯನಪುರದಲ್ಲಿ ನಡೆದ ಗಲಭೆ ಅತ್ಯಂತ ದುರದೃಷ್ಟಕರ. ‌ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕಾದರೆ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದಿದ್ದಾರೆ.

ಘಟನೆ ಕುರಿತು ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ಪಾದರಾಯನಪುರ ಘಟನೆ ಖಂಡನೀಯ. ಇದಕ್ಕೆ ಕಾರಣರಾದವರನ್ನು ಶಿಕ್ಷೆಗೆ ಗುರಿ ಮಾಡಬೇಕು.

Siddaramaiah urged to recognize those who involved in the Padarayanapura incident and punish them

ಕೊರೊನಾ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಸಹಮತವಿದೆ. ಇದನ್ನು ನಾವು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ. ಯಾರೇ ಆಗಲಿ, ಕಾನೂನಿಗೆ ಗೌರವ ಕೊಡಬೇಕು. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+