ಕನಿಷ್ಠ ಆರು ದಿನ ಅಧಿವೇಶನ ವಿಸ್ತರಿಸಲು ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು, ಅಕ್ಟೋಬರ್ 11 : ವಿಧಾನಸಭೆ ಕಲಾಪವನ್ನು ಇನ್ನೂ ಆರು ದಿನ ವಿಸ್ತರಿಸಬೇಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಚಳಿಗಾಲದ ಅಧಿವೇಶನವನ್ನು ಕೇವಲ ಮೂರು ದಿನ ಮಾತ್ರ ನಡೆಸಲು ಉದ್ದೇಶಿಸಲಾಗಿತ್ತು.
ಆದರೆ ಮೂರು ದಿನ ನೆರೆ ಹಾಗೂ ಕನಿಷ್ಠ ಮೂರು ದಿನ ಬಜೆಟ್ ಕುರಿತು ಚರ್ಚೆ ನಡೆಯಬೇಕಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಇವೆಲ್ಲವೂ ಚರ್ಚೆಯಾಗುತ್ತಿತ್ತು, ನೀವು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿಲ್ಲ ಯಡಿಯೂರಪ್ಪನವರೇ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೀರ, ನಿಮಗೆಲ್ಲಾ ತಿಳಿದಿದೆ ಪಲಾಯನವಾದ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪ ಚುನಾವಣೆಯಿದ್ದ ಕಾರಣ ಕೇಬಲ ಮೂರು ದಿನದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಈಗ ಅಧಿವೇಶನವನ್ನು ವಿಸ್ತರಿಸಲು ಅವಕಾಶ ಇದ್ದಾಗ್ಯೂ ರಾಜ್ಯ ಬಿಜೆಪಿ ಸರ್ಕಾರ ಕೇವಲ ಮೂರೇ ದಿನದಲ್ಲಿ ಅಧಿವೇಶನ ಮುಗಿಸಲು ಮುಂದಾಗಿದೆ. ಈ ಮೂರು ದಿನದಲ್ಲೇ ನೆರೆ ಪರಿಹಾರ, ಬಜೆಟ್ ಮಂಡನೆ ಹಾಗೂ ಬಜೆಟ್ ಮೇಲಿನ ಚರ್ಚೆ ನಡೆಯಬೇಕಿರುವ ಪರಿಸ್ಥಿತಿ ಉಂಟಾಗಿದೆ.

ಎರಡನೇ ದಿನದ ಅಧಿವೇಶನದ ಭಾಷಣದಲ್ಲಿ ತಮ್ಮ ಆಕ್ರೋಶ ಹೊರಹಾಕಿರುವ ಅವರು ಪ್ರವಾಹದ ಪರಿಸ್ಥಿತಿ ಗಂಭೀರವಾದ ವಿಚಾರ. ಅರ್ಧ ರಾಜ್ಯವೇ ಪ್ರವಾಹಕ್ಕೆ ತುತ್ತಾಗಿದೆ. ಆ ಭಾಗದ ಶಾಸಕರು ಸದನಲ್ಲಿ ಅಭಿಪ್ರಾಯ ತಿಳಿಸಬೇಕು.
ಹೀಗಾಗಿ ಸದನ ವಿಸ್ತರಣೆ ಮಾಡಿ. ಅದನ್ನು ಬಿಟ್ಟು ಇಂದೇ 1 ಗಂಟೆಯ ಒಳಗಾಗಿ ಈ ಕುರಿತ ಚರ್ಚೆಯನ್ನು ಮುಗಿಸಬೇಕು ಎಂಬುದು ಸರಿಯಲ್ಲ. ಇದೊಂದು ಜನ ವಿರೋಧಿ ನಿಲುವು ಎಂದು ಕಿಡಿಕಾರಿದ್ದಾರೆ.
ಪ್ರವಾಹ ಮತ್ತು ಬಜೆಟ್ ಕುರಿತು ತಲಾ 3 ದಿನ ಚರ್ಚೆಯಾಗಬೇಕು. ವಿಪಕ್ಷ ಬೇಡ ಅಂದರೆ ನಿಮಗೆ ಬೇಕಾದಂತೆ ಮಾಡಿಕೊಳ್ಳಿ. ಆದರೆ, ಇಂತಹ ಸರ್ವಾಧಿಕಾರಿ ಧೋರಣೆ ಮಾತ್ರ ಸರಿಯಲ್ಲ. ಇದು ನಮ್ಮ ಪಕ್ಷದ ಸ್ಪಷ್ಟವಾದ ನಿಲುವು ಎಂದು ಅವರು ಅಧಿವೇಶನದಲ್ಲಿ ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ನಾನು 13 ಬಜೆಟ್ ಮಂಡಿಸಿದ್ದೇನೆ, ಬಜೆಟ್ ಮೇಲೆ ಹೆಚ್ಚಿನ ಚರ್ಚೆಯಾಗಬೇಕು. 30 ರವರೆಗೆ ಬಜೆಟ್ ಪಾಸು ಮಾಡಿಕೊಳ್ಳಬಹುದು, ಸಪ್ಲಿಮೆಂಟರಿ ಬಜೆಟ್ ಬೇಕಾದರೆ ಪಾಸ್ ಮಾಡೋಣ. ಆದರೆ, ಬಜೆಟ್ ಮಂಡಿಸೋಕೆ ತರಾತುರಿಯೇಕೆ? ಜನರ ಕಷ್ಟಗಳಿಗೆ ಸರ್ಕಾರ ಸ್ಪಂದಿಸದೆ ಇರುವುದು ಸರಿಯಾದ ತೀರ್ಮಾನವಲ್ಲ ಎಂದಿದ್ದಾರೆ.
-
ಏಪ್ರಿಲ್ 9ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಧಿಕಾರ ಬದಲಾವಣೆ; ನನ್ನ-ಸಿಎಂ ಬಿಟ್ಟು ಬೇರೆಯವರ ಮಾತು ಮುಖ್ಯವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
ಏಪ್ರಿಲ್ 7ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ವಿಶ್ವ ಆರೋಗ್ಯ ದಿನ 2026: ಸ್ವಸ್ಥ ಕರ್ನಾಟಕ ನಿರ್ಮಾಣಕ್ಕೆ ಸಿದ್ದರಾಮಯ್ಯ ನೀಡಿದ 'ಆರೋಗ್ಯ ಭಾಗ್ಯ'ಗಳ ಪಟ್ಟಿ ಇಲ್ಲಿದೆ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್











Click it and Unblock the Notifications