ಶಾಸಕ ಬಿ.ನಾಗೇಂದ್ರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ
ಬೆಂಗಳೂರು, ಜುಲೈ 16 : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಆರೋಗ್ಯ ವಿಚಾರಿಸಿದರು. ನಾಗೇಂದ್ರ ಹೆಬ್ಬಾಳ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳವಾರ ಬೆಳಗ್ಗೆ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಖಾನ್ ಹೆಬ್ಬಾಳ ಬಳಿಯ ಆಸ್ಟರ್ ಆಸ್ಪತ್ರೆಗೆ ಭೇಟಿ ನೀಡಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಆರೋಗ್ಯ ವಿಚಾರಿಸಿದರು.
ಶಾಸಕ ನಾಗೇಂದ್ರ ಆರೋಗ್ಯ ವಿಚಾರಿಸಿದ ಸಿಎಂ, ಡಿಕೆಶಿ
ಎದೆ ನೋವಿನ ಕಾರಣ ಬಿ.ನಾಗೇಂದ್ರ ಕಳೆದ ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಸಚಿವ ಡಿ. ಕೆ. ಶಿವಕುಮಾರ್ ಭಾನುವಾರ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದರು.
ಶಾಸಕರ ಜೊತೆ ಮಹತ್ವದ ಸಭೆ ನಡೆಸಿದ ಸಿದ್ದರಾಮಯ್ಯ
ಸೋಮವಾರ ಪ್ರತಿಪಕ್ಷ ನಾಯಕ ಬಿ. ಎಸ್. ಯಡಿಯೂರಪ್ಪ ಬಿ. ನಾಗೇಂದ್ರಗೆ ಕರೆ ಮಾಡಿ ಆರೋಗ್ಯವನ್ನು ವಿಚಾರಿಸಿದ್ದರು. ಆಸ್ಪತ್ರೆಯಲ್ಲಿರುವ ನಾಗೇಂದ್ರ ಅವರು ವಿಧಾನಸಭೆ ಕಲಾಪಕ್ಕೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ.
ಸಿದ್ದರಾಮಯ್ಯಗೆ ಮಹತ್ವದ ಜವಾಬ್ದಾರಿ ನೀಡಿದ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಗೇಂದ್ರ ಅವರ ಸಂಬಂಧಿಕರ ಜೊತೆ, ವೈದ್ಯರ ಜೊತೆ ಮಾತುಕತೆ ನಡೆಸಿ ವಿಧಾನಸಭೆಗೆ ಕರೆತರಲು ಸಾಧ್ಯವೇ ಎಂದು ಚರ್ಚಿಸಿದ್ದರು. ಗುರುವಾರ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಮಾಡಲಿದ್ದಾರೆ.