Siddaramaiah: ಮಂಡಿ ನೋವಿನಿಂದ ಉಮಾಶ್ರೀ ಹೆಗಲ ಸಪೋರ್ಟ್ ಪಡೆದು ನಡೆದ ಸಿದ್ದರಾಮಯ್ಯ
ಬೆಂಗಳೂರು ಮಾರ್ಚ್ 2: ಮಂಡಿ ನೋವಿನಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಫಿಲ್ಮ್ ಫೆಸ್ಟಿವಲ್ಗೆ ಆಗಮಿಸಿದ ವೇಳೆ ನಟಿ ಉಮಾಶ್ರೀ ಹೆಗಲ ಸಪೋರ್ಟ್ ಪಡೆದ ದೃಶ್ಯ ಕಂಡು ಬಂದಿದೆ. ಕಾರಿನಲ್ಲಿ ತಮ್ಮ ಹಲವಾರು ಪಿಎಗಳೊಂದಿಗೆ ಬಂದ ಸಿದ್ದರಾಮಯ್ಯ ಅವರನ್ನು ಉಮಾಶ್ರೀ ಮಾತನಾಡಿಸಲು ಮುಂದಾದರು.
ಈ ಸಮಯದಲ್ಲಿ ಸಿದ್ದರಾಮಯ್ಯ ಅವರು ಉಮಾಶ್ರೀ ಕೈ ಹಿಡಿದು ನಡೆದಿದ್ದಾರೆ. ಜೊತೆಗೆ ಉಮಾಶ್ರೀ ಹೆಗಲನ್ನು ಆಸರೆಯಾಗಿ ಕೈ ಹಾಕಿ ಮುಂದೆ ಸಾಗಿದ್ದು ಕಂಡು ಬಂದಿದೆ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಬೆಂಗಳೂರಿನಲ್ಲಿ ಫಿಲ್ಮ ಫೆಸ್ಟಿವಲ್ ಆರಂಭವಾಗಿದೆ. ಇಡೀ ಜಗತ್ತಿನ ಸಿನಿಮಾನಾ ಒಟ್ಟಿಗೆ ಸೇರಿಸುವ ಬೆಂಗಳೂರು ಫಿಲ್ಮ್ ಫೆಸ್ಟಿವಲ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಈ ವೇಳೆ ಸಿನಿಮಾದ ಹಲವಾರು ಗಣ್ಯರು ಭಾಗಿಯಾಗಿದ್ದರು. ಒಂದು ವಾರ ಸಿಲಿಕಾನ್ ಸಿಟಿಯಲ್ಲಿ ಫಿಲ್ಮ್ ಫೆಸ್ಟಿವಲ್ ನಡೆಯಲಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ಗೆ ವಿಶ್ವ ಮಾನ್ಯತೆ ಸಿಕ್ಕಿದ್ದು, ವಿದೇಶಿ ಸಿನಿಮಾಗಳೂ ನಮ್ಮೂರ ಫಿಲ್ಮ್ ಫೆಸ್ಟಿವಲ್ನಲ್ಲಿ ಭಾಗಿಯಾಗೋಕೆ ಪೈಪೋಟಿ ನಡೆಸ್ತಿವೆ. ಈ ಮಟ್ಟಿಗಿನ ಖ್ಯಾತಿ, ಗೌರವದಿಂದಲೇ ಯಶಸ್ವಿಯಾಗಿ, ಈಗ 16ನೇ ಆವೃತ್ತಿಗೆ ಬೆಂಗಳೂರು ಫಿಲ್ಮ್ ಫೆಸ್ಟಿವಲ್ ಕಾಲಿಟ್ಟಿದ್ದು, ಅದ್ಧೂರಿ ಚಾಲನೆ ಸಿಕ್ಕಿದೆ.
ಸುಮಾರು 60 ದೇಶಗಳ, 200ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಫಿಲ್ಮ್ ಫೆಸ್ಟಿವಲ್ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದ್ದು, ಒಂದು ವಾರ ಪೂರ್ತಿ ಸಿನಿಮಾ ಸುಗ್ಗಿ ನಡೆಯಲಿದೆ. ತಿಂಗಳುಗಳ ಕಾಲ ಎಲ್ಲಾ ಭಾಷೆಯ ಸಿನಿಮಾಗಳ ವೀಕ್ಷಿಸಿ, ವಿಮರ್ಶಿಸಿ ದಿ ಬೆಸ್ಟ್ ಸಿನಿಮಾಗಳನ್ನೇ ಪಟ್ಟಿಯಲ್ಲಿ ಸೇರಿಸಲಾಗಿದೆ. ಎಲ್ಲರೂ ಈ ಅವಕಾಶ ಉಪಯೋಗಿಸಿಕೊಳ್ಳಿ ಅನ್ನೋದು ರಾಜ್ಯ ಸರ್ಕಾರದ ಆಶಯ.
"ಸರ್ವಜನಾಂಗದ ಶಾಂತಿಯ ತೋಟ" ಎಂಬ ಧ್ಯೇಯವಾಕ್ಯದೊಂದಿಗೆ ಈ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯುತ್ತಿದೆ. ಶನಿವಾರ ಸಂಜೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಚಲನಚಿತ್ರೋತ್ಸವದ ಕೈಪಿಡಿಯನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆ ಮಾಡಿದರು.
ಈ ಚಲನಚಿತ್ರೋತ್ಸವದಲ್ಲಿ 13 ಪರದೆಗಳಲ್ಲಿ ಸುಮಾರು 60 ದೇಶಗಳ 200ಕ್ಕೂ ಹೆಚ್ಚು ಚಲನಚಿತ್ರಗಳ 400 ಪ್ರದರ್ಶನಗಳು ನಡೆಯುತ್ತವೆ. ರಾಜಾಜಿನಗರದ ಒರಾಯನ್ ಮಾಲ್ನ ಪಿವಿಆರ್ ಸಿನಿಮಾಸ್, ಚಾಮರಾಜಪೇಟೆಯ ಡಾ.ರಾಜ್ಕುಮಾರ್ ಭವನ ಹಾಗೂ ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರ ಫಿಲಂ ಸೊಸೈಟಿಯಲ್ಲಿ ಈ ಸಿನಿಮಾಗಳ ಪ್ರದರ್ಶನ ನಡೆಯಲಿದೆ.
-
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget: ಹೆಚ್ಚು ಹಾಲು ಕೊಡುವ ಹಸುವಿಗೆ ಹೆಚ್ಚಿನ ಆರೈಕೆ ಬೇಕು: ಬಜೆಟ್ ಭಾಷಣವಿಡೀ ಕೇಂದ್ರಕ್ಕೆ ಕುಟುಕಿದ ಸಿದ್ದರಾಮಯ್ಯ -
ರಾಜ್ಯ ಬಜೆಟ್ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ -
Karnataka Budget 2026: 4.5 ಲಕ್ಷ ಕೋಟಿಯ ರಾಜ್ಯ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಗುವುದೇ ಭರ್ಜರಿ ಕೊಡುಗೆ? -
ಕರ್ನಾಟಕ ಬಜೆಟ್ 2026: ಹೆಚ್.ಡಿ.ಕುಮಾರಸ್ವಾಮಿ ಟೀಕೆ: ಸಿದ್ದರಾಮಯ್ಯ ಬಜೆಟ್ ರಾಜ್ಯದ ಆರ್ಥಿಕತೆಗೆ ಅಪಾಯ -
ಮುಖ್ಯಮಂತ್ರಿಗಳಿಂದ ದಿಕ್ಕು-ದೆಸೆ ಇಲ್ಲದ ಅಭಿವೃದ್ಧಿ ಶೂನ್ಯ ಬಜೆಟ್ ಮಂಡನೆ: ಬಸವರಾಜ ಬೊಮ್ಮಾಯಿ -
45,000 ಕೋಟಿ ರೂಪಾಯಿ ಸಂಗ್ರಹ ಗುರಿ, ಮದ್ಯಪ್ರಿಯರಿಗೆ ದಿಢೀರ್ ಎದುರಾಯ್ತು ಆಘಾತ... Karnataka Budget 2026 -
5,00,00,000 ರೂಪಾಯಿ, ಕನ್ನಡ ನಾಡಿನ ಭಕ್ತರಿಗೆ ಭರ್ಜರಿ ಉಡುಗೊರೆ... Karnataka Budget 2026 -
ಬಜೆಟ್ನಲ್ಲಿ ಜನರ ಮೇಲೆ ಸಾಲದ ಹೊರೆ, ಖಾಲಿ ಚೊಂಬು ನೀಡಿದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ -
ಸಿನಿಮಾ ಚಿತ್ರೀಕರಣ ಅನುಮತಿಗೆ "ಸಿನಿ ಮಿತ್ರ" ಆನ್ಲೈನ್ ವ್ಯವಸ್ಥೆ: ಸ್ಯಾಂಡಲ್ವುಡ್ಗೆ ಸಿದ್ದರಾಮಯ್ಯ ಬಜೆಟ್ ಕೊಟ್ಟಿದ್ದೇನು?












Click it and Unblock the Notifications