'ಕಾವೇರಿ'ಗಾಗಿ ಸಿದ್ದರಾಮಯ್ಯ ಪಟ್ಟು: ಸರ್ಕಾರಕ್ಕೆ ಪತ್ರ
ಬೆಂಗಳೂರು, ಅಕ್ಟೋಬರ್ 11: ಎರಡು ಸರ್ಕಾರಗಳು ಬದಲಾದರೂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸವನ್ನು ಬಿಡಲು ಮನಸ್ಸು ಮಾಡಿಲ್ಲ.
ಮುಖ್ಯಮಂತ್ರಿ ಆದಾಗಿನಿಂದಲೂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿಯೇ ಇದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಿದ್ದರಾಮಯ್ಯ ಗೆ ಯಾವುದೇ ಶಾಸನಬದ್ಧ ಸ್ಥಾನ ಇರದಿದ್ದರೂ ಸಹ ಅವರು ಕಾವೇರಿ ನಿವಾಸ ಬಿಟ್ಟು ಕದಲಿರಲಿಲ್ಲ. ಈಗ ಬಿಜೆಪಿ ಸರ್ಕಾರ ಬಂದಮೇಲೂ ಕಾವೇರಿ ನಿವಾಸಕ್ಕೆ ಅವರು ಪಟ್ಟು ಹಿಡಿದಿದ್ದಾರೆ.
ಮುಖ್ಯಮಂತ್ರಿ ಆಗಿದ್ದವರಿಗೆ ಕಾವೇರಿ ನಿವಾಸ ನೀಡುವುದು ವಾಡಿಕೆ. ಒಂದು ಮುಕ್ಕಾಲು ವರ್ಷದಿಂದ ಸಿದ್ದರಾಮಯ್ಯ ಮಾಜಿ ಸಿಎಂ ಆಗಿದ್ದಾರೆ ಆದರೂ ಕಾವೇರಿ ಬಿಟ್ಟು ಹೋಗಲು ಮನಸ್ಸು ಮಾಡಿಲ್ಲ. ಈಗ ವಿಪಕ್ಷ ನಾಯಕ ಆಗಿರುವ ಅವರಿಗೆ ಸರ್ಕಾರವೇ ನಿವಾಸ ನೀಡಬೇಕಿದೆ. ಹಾಗಾಗಿ ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ಕಾವೇರಿ ನಿವಾಸವನ್ನು ನನಗೇ ಕೊಟ್ಟುಬಿಡಿ ಎಂದು ಕೋರಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ಸಿಎಂ ಯಡಿಯೂರಪ್ಪ ಅವರಿಗೆ ಕಾವೇರಿ ನಿವಾಸ ನೀಡಲಾಗಿತ್ತು. ಆದರೆ ಬೆಂಗಳೂರಿನ ಡಾಲರ್ಸ್ ಕಾಲನಿಯ ಧವಳಗಿರಿ ನಿವಾಸದಲ್ಲಿರುವ ಯಡಿಯೂರಪ್ಪ ಅಲ್ಲಿಂದಲೇ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರು ಕಾವೇರಿಯಲ್ಲಿಯೇ ಮುಂದುವರೆದಿದ್ದರು.
ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸವನ್ನು ನೀಡುತ್ತಾರೆಯೋ ಅಥವಾ ಬದಲಿ ನಿವಾಸ ಕೊಡುತ್ತಾರೆಯೋ ಎಂಬುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ. ಸರ್ಕಾರ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications