ಸಿದ್ಧಾರ್ಥ ನಾಪತ್ತೆ: ಕೃಷ್ಣರನ್ನು ಭೇಟಿ ಮಾಡಿ ಧೈರ್ಯ ಹೇಳಿದ ದೇವೇಗೌಡ್ರು

ಬೆಂಗಳೂರು, ಜುಲೈ 30: ಕೆಫೆ ಕಾಫಿ ಡೇ ಮಾಲೀಕ, ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್ ಎಂ ಕೃಷ್ಣ ಅವರ ಅಳಿಯ ವಿಜಿ ಸಿದ್ಧಾರ್ಥ ಅವರ ನಾಪತ್ತೆ ಪ್ರಕರಣದ ಸುದ್ದಿ ತಿಳಿಯುತ್ತಿದ್ದಂತೆಯೇ ಎಸ್ ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರೂ ಎಸ್ ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿದರು.

ರಾಜಕೀಯ ಭಿನ್ನಾಭಿಪ್ರಾಯ, ಪಕ್ಷಭೇದಗಳನ್ನು ಬದಿಗಿಟ್ಟು ಹಲವು ನಾಯಕರು ಎಸ್ ಎಂ ಕೃಷ್ಣ ಅವರನ್ನು ಭೇಟಿಯಾಗಿ ಧೈರ್ಯ ತುಂಬುತ್ತಿದ್ದಾರೆ. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣ ಸೇರಿದಂತೆ ಗಣ್ಯರು ಎಸ್ ಎಂ ಕೃಷ್ಣ ಅವರನ್ನು ಭೇಟಿಯಾಗುತ್ತಿದ್ದಾರೆ.

CCD Owner VG Siddhartha Missing LIVE: ಸಿದ್ಧಾರ್ಥ ನಾಪತ್ತೆ: 16 ಗಂಟೆ ಶೋಧ ಕಾರ್ಯ ನೀಡಿಲ್ಲ ಫಲ
ಸೋಮವಾರ ಸಂಜೆಯಿಂದ ಮಂಗಳೂರು ಉಳ್ಳಾಲ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಸಿದ್ಧಾರ್ಥ ಆ ನಂತರ ಕಾಣೆಯಾಗಿದ್ದರು. ಅವರು ಬೆಂಗಳೂರಿನಿಂದ ರಸ್ತೆಯುದ್ದಕ್ಕೂ ತನ್ನ ಹಲವು ಸ್ನೇಹಿತರಿಗೆ ಫೋನಾಯಿಸಿ ಕ್ಷಮೆ ಕೇಳುತ್ತಿದ್ದರು ಎಂದು ಅವರ ಕಾರ್ ಡ್ರೈವರ್ ಹೇಳಿದ್ದಾರೆ.

Siddhartha missing case: HD Deve Gowda meets SM Krishna

ಕಾರಿನಿಂದ ರಸ್ತೆ ಮಧ್ಯದಲ್ಲಿ ಇಳಿದ ಸಿದ್ಧಾರ್ಥ್ ಯೂಟರ್ನ್ ತೆಗೆದುಕೊಂಡು ಬರಲು ಡ್ರೈವರ್ ಬಳಿ ಹೇಳಿ, ನಂತರ ನಾಪತ್ತೆಯಾಗಿದ್ದರು. ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಸುಮಾರು 8000 ಕೋಟಿಗೂ ಅಧಿಕ ಮೊತ್ತದ ಸಾಲ ಹೊಂದಿದ್ದ ಸಿದ್ಧಾರ್ಥ ಅವರು ಹಣಕಾಸಿನ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆದಾಯ ತೆರಿಗೆ ಇಲಾಖೆಯಿಂದಲೂ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎನ್ನಲಾಗಿದ್ದು, ಅವರ ನಾಪತ್ತೆ ಪ್ರಕರಣ ಮತ್ತಷ್ತು ನಿಗೂಢತೆ ಸೃಷ್ಟಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+