ಪೊಲೀಸರ ಮುಷ್ಕರ ಬೆಂಬಲಿಸಿ ಬೆಂಗಳೂರಲ್ಲಿ ಸಹಿಸಂಗ್ರಹ
ಬೆಂಗಳೂರು, ಜೂ, 2 : ಸರಕಾರದ ಅಣತಿಯನ್ನು ಧಿಕ್ಕರಿಸಿ ಜೂನ್ 4ರಂದು ತಮ್ಮ ಹಕ್ಕಿಗಾಗಿ ಮುಷ್ಕರ ಹೂಡುತ್ತಿರುವ ಕರ್ನಾಟಕದ ಪೊಲೀಸ್ ಸಿಬ್ಬಂದಿ ಪರವಾಗಿ ಬೆಂಗಳೂರಿನಲ್ಲಿ ಗುರುವಾರ ನಾನಾ ಸಂಘಟನೆಗಳಿಂದ ಸಹಿ ಸಂಗ್ರಹ ಮಾಡಲಾಯಿತು.
ವಿಶ್ವ ವಾಹನ ಚಾಲಕರ ಮಹಾ ಒಕ್ಕೂಟದ ರಾಜ್ಯದ 105 ಶಾಖೆಗಳಿಂದ, ಖಾಸಗಿ ಹಾಗೂ ಸರಕಾರಿ ವಾಹನ ಚಾಲಕರಿಂದ 1 ಲಕ್ಷ ಸಹಿ ಸಂಗ್ರಹ ಕಾರ್ಯಕ್ರಮಕ್ಕೆ ಗುರುವಾರ ಬೆಳಿಗ್ಗೆ 10.30ಕ್ಕೆ ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.
ಸುಮಾರು 3 ದಶಕಗಳ ಕಾಲದಿಂದ ನ್ಯಾಯಯುತ, ಸಂವಿಧಾನಬದ್ಧ ಹಕ್ಕುಗಳನ್ನು ಈಡೇರಿಸುವಲ್ಲಿ ಸರಕಾರ ವಿಫಲವಾಗಿದೆ. ಸುಮಾರು 28 ಸಾವಿರ ಪೊಲೀಸ್ ಹುದ್ದೆಗಳು ಖಾಲಿಯಿದ್ದು, ಹೊಸ ನೇಮಕಾತಿ ಮಾಡಿಕೊಳ್ಳದೆ, ಇರುವ ಪೊಲೀಸ್ ಸಿಬ್ಬಂದಿಯಿಂದಲೇ ದುಡಿಸಿಕೊಳ್ಳುತ್ತಿರುವುದು ಅಮಾನವೀಯ ಕೃತ್ಯವಾಗಿದೆ ಎಂಬ ಆಕ್ರೋಶ ಈ ಸಂದರ್ಭದಲ್ಲಿ ವ್ಯಕ್ತವಾಯಿತು. [ಶಶಿಧರ್ ಬಂಧನದಿಂದ ಪೊಲೀಸರ ಪ್ರತಿಭಟನೆಗೆ ಹಿನ್ನಡೆ?]

ಕೆಳಕಂಡ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ
* ಗಲಾಟೆ, ಘರ್ಷಣೆಯ ಸಂದರ್ಭದಲ್ಲಿ ಸಾವನ್ನಪ್ಪಿದ ಕಾರ್ಯನಿರತ ಪೊಲೀಸರ ಕುಟುಂಬಕ್ಕೆ ಕನಿಷ್ಠ ಒಂದು ಕೋಟಿ ರೂ. ಪರಿಹಾರ ನೀಡುವುದು. ಅಲ್ಲದೇ ಗಾಯಗೊಂಡ ಪೊಲೀಸರಿಗೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸುವುದು.
* ವರ್ಗಾವಣೆ ಕೌನ್ಸಿಲಿಂಗ್ ಮೂಲಕ ಮಾತ್ರ ಮಾಡುವುದು ಹಾಗೂ ಪೊಲೀಸರಿಗೆ ವಾರಕ್ಕೊಮ್ಮೆ ಕಡ್ಡಾಯ ರಜೆ ನೀಡುವುದು.
* ಕರ್ನಾಟಕ ರಾಜ್ಯದ ಪ್ರತಿಯೊಬ್ಬ ಪೊಲೀಸರಿಗೂ ಮನೆ ನಿರ್ಮಿಸಿಕೊಡಬೇಕು. [ಪ್ರತಿಭಟನೆಗೆ ಮುಂದಾದ ಪೊಲೀಸರ 31 ಬೇಡಿಕೆಗಳು]
* ಪೊಲೀಸರ ಮೇಲೆ ಮೇಲಾಧಿಕಾರಿಗಳ ಕಿರುಕುಳ, ದೌರ್ಜನ್ಯಕ್ಕೆ ಕಡಿವಾಣ ಬೀಳಬೇಕು.
* ಪೊಲೀಸರಿಗೆ ವೇತನ ಪರಿಷ್ಕರಣೆ, ಹೊರರಾಜ್ಯಗಳ ಪೊಲೀಸರ ವೇತನ, ಭತ್ಯೆ ಇತ್ಯಾದಿ ಸೌಲಭ್ಯಗಳಿಗೆ ಒತ್ತಾಯ.
* ದುಡಿಮೆಯ ಸಮಯವನ್ನು 8 ಗಂಟೆಗೆ ಸೀಮಿತಗೊಳಿಸಿ ಹೆಚ್ಚುವರಿ ಅವಧಿಗೆ ಹೆಚ್ಚುವರಿ ಭತ್ಯೆ ನಿಗದಿಪಡಿಸುವುದು.
* ಪೊಲೀಸರಿಗೆ ವಸತಿಗೃಹ ನಿರ್ಮಾಣದ ಜೊತೆಗೆ ಹಳೆಯ ಕಟ್ಟಡಗಳನ್ನು ನವೀಕರಿಸಬೇಕು.
* ವಾರಕ್ಕೊಮ್ಮೆಯಾದರೂ ಕರ್ತವ್ಯನಿರತ ಪೊಲೀಸರಿಗೆ ಆರೋಗ್ಯ ತಪಾಸಣೆ ನಡೆಸಬೇಕು. [ಪೊಲೀಸರ ಸಮಸ್ಯೆಗೆ ಕಿವಿಗೊಡಿ, ಸರ್ಕಾರಕ್ಕೆ ಆಪ್ ಸಲಹೆ]
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications