"ದೊಡ್ಡ ಕಂಪನಿಗಳು ಸಿಲಿಕಾನ್ ಸಿಟಿ ಬಿಟ್ಟು ಅನ್ಯ ರಾಜ್ಯಗಳತ್ತ ಮುಖ ಮಾಡಿವೆ"
ಬೆಂಗಳೂರಿನಲ್ಲಿ ರಸ್ತೆ ಅವ್ಯವಸ್ಥೆಯಿಂದ ಬೆಂಗಳೂರಿನಿಂದ ಬೇರೆ ಊರುಗಳಿಗೆ / ಸ್ಥಳಾಂತರಗೊಳ್ಳಲಿದ್ದೇವೆ ಎಂದು ಕೆಲವೊಂದು ಐಟಿ ಕಂಪನಿಗಳು ಹೇಳಿರುವ ಬೆನ್ನಲ್ಲೇ ಇದು ರಾಜಕೀಯ ಪರ - ವಿರೋಧ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವಿವಿಧ ಭಾಗದಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಹೆಚ್ಚಳವಾಗಿದೆ ಎನ್ನುವ ಆರೋಪವು ಜನ ಸಾಮಾನ್ಯರಿಂದ ಕೇಳಿ ಬರುತ್ತಿದೆ. ಇದೀಗ ಈ ವಿಚಾರವಾಗಿ ರಾಜ್ಯ ಸರ್ಕಾರದ ಮೇಲೆ ವಿರೋಧ ಪಕ್ಷಗಳು ಮುಗಿಬಿದ್ದಿವೆ.
ಲೂಟಿಕೋರ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಮೂಲಸೌಕರ್ಯ ಕಡೆಗಣಿಸಿದ್ದರಿಂದ ದೊಡ್ಡ ದೊಡ್ಡ ಕಂಪನಿಗಳು ಸಿಲಿಕಾನ್ ಸಿಟಿ ಬಿಟ್ಟು ಅನ್ಯ ರಾಜ್ಯಗಳತ್ತ ಮುಖ ಮಾಡಿವೆ. ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಬಿದ್ದಿರುವ ತೆಗ್ಗುಗುಂಡಿ ಹಾಗೂ ಮೂಲಸೌಕರ್ಯ ಕೊರತೆಯಿಂದ ಓಡಾಡದಂತಾಗಿದೆ.! ಹೀಗಾಗಿ ಇಲ್ಲಿಂದ ಹೊರಹೋಗಲು ನಾವು ನಿರ್ಧರಿಸಿದ್ದೇವೆ ಎಂದು ಬ್ಲಾಕ್ ಬಕ್ ಕಂಪನಿ ಸಿಇಒ ಎಕ್ಸ್ನಲ್ಲಿ ಬರೆದುಕೊಂಡಿರುವುದು ಬೆಂಗಳೂರಿನಲ್ಲಿ ಮೂಲಸೌಕರ್ಯ ಪಾತಾಳ ಕಂಡಿರುವುದರ ಧ್ಯೋತಕವಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತುಘಲಕ್ ಆಡಳಿತದ ವಿರುದ್ಧ ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದರೂ ಕ್ರಮವಹಿಸಿಲ್ಲ. ಕಾಂಗ್ರೆಸ್ ದುರಾಡಳಿತದಿಂದಾಗಿ ಬೆಂಗಳೂರು ಹೂಡಿಕೆದಾರರ ಆಕರ್ಷಣೆ ಕಳೆದುಕೊಂಡಿದೆ ಹಾಗೂ ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ಅಧ:ಪತನಕ್ಕೆ ಜಾರುತ್ತಿದೆ. ಸ್ವಾಮಿ ಸಿದ್ದರಾಮಯ್ಯನವರೇ ಇರುವ ಕಂಪನಿಗಳು ಗಂಟುಮೂಟೆ ಕಟ್ಟುವ ಮುನ್ನ ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆ ಬಗೆಹರಿಸಿ, ಉದ್ಯಮಿಗಳ ಬೇಡಿಕೆಗೆ ಸ್ಪಂದಿಸಿ ಎಂದು ಹೇಳಲಾಗಿದೆ.
ಅಲ್ಲದೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ, ಹದಗೆಟ್ಟ ರಸ್ತೆಗಳಿಂದ ಬೆಂಗಳೂರಲ್ಲಿ ಬದುಕಲು ಮತ್ತು ಕೆಲಸ ಮಾಡಲು ಕಷ್ಟವಾಗಿ ಕಂಪನಿಗಳು ಹೊರಹೋಗಲು ನಿರ್ಧರಿಸಿವೆ. ಸ್ಟಾರ್ಟ್ಅಪ್ ಗಳು ನಿಮ್ಮ ಆಡಳಿತಕ್ಕೆ ಬೇಸತ್ತು 'EXIT' ಆಗಲು ನಿರ್ಧರಿಸಿದಂತೆಯೇ ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಜನರು ಈ ಕಾಂಗ್ರೆಸ್ ಸರ್ಕಾರಕ್ಕೆ 'EXIT' ತೋರಿಸುವುದು ಖಚಿತ, ಖಂಡಿತ, ನಿಶ್ಚಿತ ಎಂದು ಸರಣಿ ಟ್ವೀಟ್ ಮಾಡಲಾಗಿದೆ.
ಅಲ್ಲದೇ ಗಾರ್ಡನ್ ಸಿಟಿ ಎಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದ ಬೆಂಗಳೂರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತವು ಗಾರ್ಬೇಜ್ ಸಿಟಿ ಎಂಬ ಕುಖ್ಯಾತಿ ತಂದು ಕೊಟ್ಟಿದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ, ಬ್ರ್ಯಾಂಡ್ ಬೆಂಗಳೂರಿನ ಹೆಸರಿನಲ್ಲಿ ಮಾಡುತ್ತಿರುವ ದರೋಡೆ ನಿಲ್ಲಿಸಿ, ಬೆಂಗಳೂರಿನ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನಹರಿಸಿ ಎಂದು ಟ್ವೀಟ್ ಮಾಡಲಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications