ಸಿಲಿಕಾನ್ ಸಿಟಿ ಜತೆ ಗಾರ್ಡನ್ ಸಿಟಿ ಕೂಡ ಅಗತ್ಯ: ವೀರೇಂದ್ರ ಹೆಗ್ಗಡೆ
ಬೆಂಗಳೂರು, ಜನವರಿ 19 : ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾಸಂಘ ಶುಕ್ರವಾರ ಲಾಲ್ ಬಾಗ್ ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಏರ್ಪಡಿಸಿದ್ದ 207ನೇ ಫಲಪುಷ್ಪ ಪ್ರದರ್ಶನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.
ಉದ್ಘಾಟನೆ ಬಳಿಕ ಮಾತನಾಡಿದ ಅವರು, ಕೇವಲ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಗಳು ಎತ್ತರದ ಕಟ್ಟಡಗಳು ಮಾತ್ರ ನಗರದ ಸೌಂದರ್ಯವಲ್ಲ, ಪುಷ್ಪನಗರಿ ಇದೀಗ ತಂತ್ರಜ್ಞಾನ ನಗರಿಯಾಗಿ ಮಾರ್ಪಾಡಾಗುತ್ತಿರುವುದು ಕಳವಳದ ಸಂಗತಿ ಎಂದು ಅಭಿಪ್ರಾಯಪಟ್ಟರು.
ಪುಷ್ಪ ನಗರಿ ತನ್ನ ಹೆಸರನ್ನು ಕಳೆದುಕೊಂಡು ಇದೀಗ ತಂತ್ರಜ್ಞಾನ ನಗರಿ ಎಂದು ಕರೆಸಿಕೊಳ್ಳು ಪ್ರಾರಂಭಿಸಿದೆ. ಮತ್ತೆ ಸುಂದರವಾದ ಪುಷ್ಪನಗರವನ್ನಾಗಿ ಮಾಡಬೇಕಿದೆ. ಪ್ರತಿಯೊಂದು ಸರ್ಕಾರಿ ಅಥವಾ ಖಾಸಗಿ ಕಚೇರಿ ಎದುರು ಹೂವಿನ ಗಿಡ ಅಥವಾ ಸಸ್ಯಗಳನ್ನು ಕಡ್ಡಾಯವಾಗಿ ನೆಡಬೇಕು ಎನ್ನುವ ಕಾನೂನು ತರುವ ಅಗತ್ಯವಿದೆ ಎಂದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥಸ್ವಾಮೀಜಿ ಮಾತನಾಡಿ, ಜಗತ್ತನ್ನು ಗೆಲ್ಲಲು ತ್ಯಾಗ ಬೇಕು, ಬದುಕು ಸಾರ್ಥಕತೆ ಕಾಣಬೇಕಾದರೆ ತ್ಯಾಗವನ್ನು ಮೈಗೂಡಿಸಿಕೊಳ್ಳಬೇಕು, ಕೇವಲ ಸುಂದರ ಹೂವುಗಳು ನೋಡಿ ಸಂತಸ ಪಡುವುದರ ಜತೆಗೆ ಹೃದಯದಲ್ಲಿ ತ್ಯಾಗವೆನ್ನುವ ಹೂವನ್ನು ಅರಳಿಸಬೇಕಿದೆ. ವ್ಯಕ್ತಿ ವ್ಯಕ್ತಿಯ ಮಧ್ಯೆ ಸಾಮರಸ್ಯವನ್ನು ಹುಟ್ಟುಹಾಕುವ ಅಗತ್ಯವಿದೆ ಎಂದು ಹೇಳಿದರು.
ಕೃಷಿ ಮಾರುಕಟ್ಟೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಲೋಕೋಪಯೋಗಿ ಸಚಿವ ಮಹದೇವಪ್ಪ, ಮೇಯರ್ ಸಂಪತ್ ರಾಜ್, ಮೈಸೂರು ಉದ್ಯಾನ ಕಲಾಸಂಘ ಉಪಾಧ್ಯಕ್ಷ ಬಿ.ಆರ್.ವಾಸುದೇವ್ ಹಾಜರಿದ್ದರು.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications