ಲಾಂಛನ ಹೊಂದುವ ದೇಶದ ಮೊದಲ ನಗರ ಖ್ಯಾತಿಯಲ್ಲಿ 'ಬೆಂಗಳೂರು'
ಬೆಂಗಳೂರು, ಡಿಸೆಂಬರ್ 22 : ಪ್ರವಾಸೋದ್ಯಮ ಇಲಾಖೆಯು ಬ್ರ್ಯಾಂಡ್ ಬೆಂಗಳೂರಿಗೊಂದು ಲಾಂಛನ ಹಾಗೂ ಪ್ರವಾಸಿಗರಿಗೆ ಅನುಕೂಲಕ್ಕಾಗಿ ಅಪ್ಲಿಕೇಷನ್ ಬಿಡುಗಡೆ ಮಾಡಲು ಮುಂದಾಗಿದೆ.
ಈ ಮೂಲಕ ಬೆಂಗಳೂರು ಇಡೀ ದೇಶ ದಲ್ಲಿಯೇ ಲಾಂಛನ ಹೊಂದುತ್ತಿರುವ ಮೊದಲ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಪ್ರಸ್ತುತ ನ್ಯೂಯಾರ್ಕ್, ಪ್ಯಾರೀಸ್, ಹಾಗೂ ಆಮ್ಸ್ಟರ್ ಡ್ಯಾಮ್ ಸೇರಿದಂತೆ ಕೆಲವೇ ನಗರಗಳು ಇಂತಹ ಲಾಂಛನ ಹೊಂದಿದೆ. ಡಿ.24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲಾಂಛನ ಲೋಕಾರ್ಪಣೆ ಮಾಡಲಿದ್ದಾರೆ.

ನೂತನವಾಗಿ ವಿನ್ಯಾಸಗೊಳಿಸಿರುವ ಲಾಂಛನ ಹಾಗೂ ಬೆಂಗಳೂರಿನ ಪ್ರವಾಸ ಕೈಗೊಳ್ಳುವವರಿಗೆ ಮಾಹಿತಿ ಮತ್ತು ಸೇವೆ ಒದಗಿಸಲು ಭಾನುವಾರ ಡಿ.24ರಂದು ಅಪ್ಲಿಕೇಷನ್ ಬಿಡುಗಡೆ ಮಾಡಲಾಗುತ್ತಿದೆ.
ವಿಶ್ವಮಟ್ಟದಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಕೈಗಾರಿಕಾ ಇಲಾಖೆಗಳು ಕರ್ನಾಟಕವನ್ನು ಪ್ರತಿನಿಧಿಸುತ್ತವೆ ಹಲವಾರು ಬಾರಿ ಬ್ರ್ಯಾಂಡ್ ಎನ್ನುತ್ತೇವಾದರೂ ನಿರ್ದಿಷ್ಟವಾಗಿ ವಿವರಿಸಲು ಸಾದ್ಯವಾಗುತ್ತಿಲ್ಲ.
ನ್ಯೂಯಾರ್ಕ್ ನಲ್ಲಿ ಈ ರೀತಿ ಲಾಂಛನ ರೂಪಿಸಿ ಅದಕ್ಕೆ ಪೂರಕ ಕಾರ್ಯಕ್ರಮ ರೂಪಿಸಿದ ನಂತರ ಉದ್ಯೋಗ ಅವಕಾಶಗಳು ಹೆಚ್ಚಾಗಿದೆ ಎಂದು ಪ್ರವಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನ ಸ್ಥಳೀಯರಿಗೆ ಹಾಗೂ ಹೊರಗಿನಿಂದ ಬರುವವರಿಗೆ ಇಲ್ಲಿನ ಇತಿಹಾಸ ತಿಳಿಸುವುದರ ಜತೆಗೆ ಆಧುನಿಕ ಬೆಳವಣಿಗೆಗಳ ಪರಿಷಯವೂ ಆಗುವಂತೆ ಲಾಂಛನದಡಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ.
ಸ್ಪರ್ಧೆ ಮೂಲಕ ಲಾಂಛನ ವಿನ್ಯಾಸ: ಬೆಂಗಳೂರು ಲಾಂಛನ ರಚನೆಯಲ್ಲಿ ಒಂದೇ ಸಂಸ್ಥೆಗೆ ಗುತ್ತಿಗೆ ನೀಡಲಾಗಿಲ್ಲ. ಅಂತರ್ಜಾಲದಲ್ಲಿ ಸಾರ್ವಜನಿಕರಿಂದ ಸ್ಪರ್ಧೆ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಒಟ್ಟು1,350ಲಾಂಛನಗಳು ಸಲ್ಲಿಕೆಯಾಗಿದ್ದವು.
ರಾಷ್ಟ್ರೀಯ ಫ್ಯಾಷನ್ ಟೆಕ್ನಾಲಜಿ ಸಂಸ್ಥೆ, ಚಿತ್ರಕಲಾ ಪರಿಷತ್ ಸೇರಿ ಅನೇಕ ಸಂಸ್ಥೆಗಳ ಸಹಯೋಗದಲ್ಲಿ ಒಂದು ನವೋದಯ ಸಂಸ್ಥೆ ರೂಪಿಸಿದ ಲಾಂಛನವನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಬೆಂಗಳೂರು ಎಂದು ಬರೆಯುವ ಜತೆಗೆ ಘೋಷವಾಕ್ಯ ವಿರಲಿದೆ. ಸ್ಪರ್ಧೆಯಲ್ಲಿ ಗೆದ್ದ ಸಂಸ್ಥೆ 5 ಲಕ್ಷ ರೂ. ಬಹುಮಾನ ನೀಡಲಾಗುತ್ತದೆ.
ಪ್ರವಾಸಿಗರಿಗಾಗಿ ಆಪ್-ಏನೇನಿರಲಿದೆ: ಬೆಂಗಳೂರಿಗೆ ಆಗಮಿಸುತ್ತಿರುವ ಪ್ರವಾಸಿಗರಿಗೆ ಎಲ್ಲ ಮಾಹಿತಿ ನೀಡುವ ಮೊಬೈಲ್ ಆಪ್ ಸಿದ್ಧವಾಗಿದೆ. ಅಪ್ಲಿಕೇಷನ್ ನಲ್ಲಿ ಬೆಂಗಳೂರಿನ ಪ್ರವಾಸಿತಾಣಗಳ ಮಾಹಿತಿ ಇರಲಿದೆ. ಕಬ್ಬನ್
ಪಾರ್ಕ್ ಮಾರ್ಗ, ಲಾಲ್ ಬಾಗ್ ಪಥ, ದೇವಸ್ಥಾನ ಪಥ, ಬಬ್ ಪಥ ಹೀಗೆ ಪ್ರವಾಸಿಗರಿಗೆ ಆಸಕ್ತಿ ಇರುವ ವಿಷಯದಲ್ಲಿ ಸಂಚರಿಸಲು ಮಾಹಿತಿ ನೀಡಲಾಗುತ್ತದೆ.
ಅವಶ್ಯಕತೆಯಿದ್ದವರು ಅಪ್ಲಿಕೇನ್ ಮೂಲಕವೇ ಕ್ಯಾಬ್, ಬಸ್ ಬುಕ್ ಮಾಡಿ ಸುತ್ತಾಡಬಹುದು. ಆಸ್ಪತ್ರೆಗಳು, ಮೆಟ್ರೋ ನಿಲ್ದಾಣಗಳು, ಬಿಎಂಟಿಸಿ ಬಸ್ ಸಮಯ ಬೆಂಗಳೂರಿನಲ್ಲಿ ದಿನಪೂರ್ತಿ ನಡೆಯಲಿರುವ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯಬಹುದು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications