ಹೊಸ ವರ್ಷದ ಪಾರ್ಟಿಗಳು ಇಂದಿರಾನಗರ, ಕೋರಮಂಗಲಕ್ಕೆ ಶಿಫ್ಟ್
ಬೆಂಗಳೂರು, ಡಿಸೆಂಬರ್ 29: ಹೊಸ ವರ್ಷಾಚರಣೆ ಸಂಭ್ರಮ ಬೆಂಗಳೂರಿನ ಎಂಜಿ ರಸ್ತೆ ಹಾಗೂ ಬ್ರಿಗೆಡ್ ರಸ್ತೆಯಲ್ಲಿ ಮಾತ್ರ ಕೇಂದ್ರೀಕೃತಗೊಳ್ಳುವರಿಂದ ಉಂಟಾಗುವ ಅನಾಹುತಗಳನ್ನು ತಪ್ಪಿಸಲು ಬೆಂಗಳೂರು ಪೊಲೀಸರು ಇದೀಗ ಇತರೆ ಪ್ರದೇಶಗಳಿಗೆ ರಾತ್ರಿ ಪಾರ್ಟಿಗಳನ್ನು ಸ್ಥಳಾಂತರಗೊಳಿಸಲು ಪ್ರಯತ್ನ ಆರಂಭಿಸಿದ್ದಾರೆ.
ಎಂಜಿ ರಸ್ತೆ ಹಾಗೂ ಬ್ರಿಗೆಡ್ ರಸ್ತೆಗೆ ಬದಲಾಗಿ ಕೋರಮಂಗಲ ಎಚ್ ಎಸ್ ಆರ್ ಲೇಔಟ್ ಹಾಗೂ ಇಂದಿರಾನಗರದಂತಹ ಪ್ರದೇಶಗಳಲ್ಲೂ ಈ ರೀತಿಯ ಪಾರ್ಟಿ ಹಬ್ ಗಳನ್ನಾಗಿ ಪರಿವರ್ತಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಈ ಕುರಿತಂತೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಗುರುವಾರ ಕೋರಮಂಗಲದಲ್ಲಿ ಸಭೆ ನಡೆಸಿದ್ದು, ಬೆಂಗಳೂರಿನ ಎಲ್ಲ ಪಬ್ ಹಾಗೂ ಬಾರ್ ಗಳ ಮಾಲೀಕರೊಂದಿಗೆ ಚರ್ಚಿಸಿದ್ದಾರೆ.

ಕೇವಲ ಬ್ರಿಗೆಡ್ ರಸ್ತೆ ಹಾಗೂ ಎಂಜಿ ರಸ್ತೆಯಲ್ಲಿ ಪಾರ್ಟಿಗಳನ್ನು ಆಯೋಜಿಸುವುದರಿಂದ ಹೆಚ್ಚು ಜನಸಂದಣಿ ಉಂಟಾಗುತ್ತದೆ. ಇದರಿಂದ ಸಂಭ್ರಮಾಚರಣೆ ಕೂಡ ಸಮರ್ಪಕವಾಗುವುದಿಲ್ಲ ಅದೇ ರೀತಿ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆ ಯಲ್ಲಿ ಇಂದಿರಾನಗರ ಹಾಗೂ ಕೋರಮಂಗಲ ದಂತಹ ವಾಣಿಜ್ಯ ಪ್ರದೇಶಗಳಲ್ಲಿ ಹೆಚ್ಚು ಪಾರ್ಟಿಗಳನ್ನು ಆಯೋಜಿಸುವುದರಿಂದ ಎಂಜಿ ರಸ್ತೆಯಲ್ಲಿ ಉಂಟಾಗುವ ಜನಸಂದಣಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬಹುದು. ಈ ನಿಟ್ಟಿನಲ್ಲಿ ಬಾರ್ ಹಾಗೂ ಪಬ್ ಮಾಲೀಕರ ನೆರವನ್ನು ಕೋರಲಾಗಿದೆ.
ಇದೇ ವೇಳೆ ಎಂಜಿ ರಸ್ತೆ, ಬ್ರಿಗೆಡ್ ರಸ್ತೆ ಸೇರಿದಂತೆ ಪ್ರದೇಶಗಳಲ್ಲಿ ಆಯೋಜಿಸುವ ಹೊಸ ವರ್ಷ ಆಚರಣೆ ಪಾರ್ಟಿಗಳ ಸಂದರ್ಭದಲ್ಲಿ ಸಿಸಿಟಿವಿ ಅಳವಡಿಸುವುದು ಕಡ್ಡಾಯ ಎಂದು ಪಬ್ ಹಾಗೂ ಬಾರ್ ಗಳ ಮಾಲೀಕರಿಗೆ ಸೀಮಂತ್ ಕುಮಾರ್ ಸಿಂಗ್ ಸೂಚನೆ ನೀಡಿದ್ದಾರೆ.
ಮಹಾತ್ಮಾ ಗಾಂಧಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆ ಮೇಲಿನ ಹೊಸ ವರ್ಷಾಚರಣೆ ಪಾರ್ಟಿಗಳ ಜನ ಸಂದಣಿ ತಪ್ಪಿಸುವ ನಿಟ್ಟಿನಲ್ಲಿ ಗುರುವಾರವಷ್ಟೇ ಕೋರಮಂಗಲದಲ್ಲಿ ಸಭೆ ನಡೆಸಿದ್ದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಶುಕ್ರವಾರ ಇಂದಿರಾನಗರ ಪ್ರದೇಶದಲ್ಲೂ ಬಾರ್ ಮತ್ತು ಪಬ್ ಗಳ ಪಾಲೀಕರ ಜತೆಗೆ ಸಭೆ ನಡೆಸಲಿದ್ದಾರೆ.
ಎಂ ಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ನಡೆಯುವ ವರ್ಣ ರಂಜಿತ ಪಾರ್ಟಿಗಳನ್ನು ಇತರೆ ಪ್ರದೇಶಗಳಲ್ಲೂ ಆಯೋಜಿಸುವುದರಿಂದ ಎಂಜಿ ರಸ್ತೆಗೆ ಹೆಚ್ಚು ಜನರು ಬರುವುದನ್ನು ತಪ್ಪಿಸಬಹುದು. ಇದರಿಂದ ವಾಣಿಜ್ಯದ ದೃಷ್ಟಿಯಿಂದಲೂ ಬೇರೆ ಪ್ರದೇಶಗಳಿಗೆ ಅನುಕೂಲವಾಗುತ್ತದೆ ಎಂಬುದು ಪೊಲೀಸ್ ಇಲಾಖೆಯ ಚಿಂತನೆಯಾಗಿದೆ.
ಆದರೆ ಇಂದಿರಾನಗರ, ಕೋರಮಂಗಲ ಪ್ರದೇಶ ಮತ್ತು ಎಚ್ ಎಸ್ ಆರ್ ಲೇಔಟ್ ನಲ್ಲಿ ರಾತ್ರಿ ಪಾರ್ಟಿಗಳನ್ನು ಆಯೋಜಿಸಲು ಪೊಲೀಸರು ತೆಗೆದುಕೊಂಡಿರುವ ಕ್ರಮಕ್ಕೆ ಸ್ಥಳೀಯ ನಾಗರಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಈಗಾಗಲೇ ಸಾಕಷ್ಟು ವಾಣಿಜ್ಯೀಕರಣಗೊಂಡಿರುವ ಜನವಸತಿ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆಯಾಗಿ ದೆ ಹೊಸ ವರ್ಷಾಚರಣೆಯ ಪಾರ್ಟಿಗಳನ್ನೂ ಕೂಡ ಇಂದಿರಾನಗರದಂತಹ ಜನವಸತಿ ಪ್ರದೇಶಗಳಲ್ಲಿ ಆಯೋಜಿಸುವುದರಿಂದ ಜನಸಾಮಾನ್ಯರ ನೆಮ್ಮದಿಗೆ ಭಂಗ ಉಂಟಾಗುತ್ತದೆ ಎನ್ನುವುದು ನಾಗರಿಕರ ವಿರೋಧಕ್ಕೆ ಕಾರಣವಾಗಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ










Click it and Unblock the Notifications