ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್ ಮಾದರಿಯಲ್ಲಿ ಬೆಂಗಳೂರು ಸ್ಕ್ವೇರ್
ಬೆಂಗಳೂರು, ಮಾರ್ಚ್ 2: ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಮಾದರಿಯಲ್ಲಿ ಬೆಂಗಳೂರಿನ ರೆಸಿಡೆನ್ಸಿ ರಸ್ತೆ ಮತ್ತು ಬ್ರಿಗೆಡ್ ರಸ್ತೆ ಜಂಕ್ಷನ್ ನಲ್ಲಿ ಟವರ್ ವೊಂದನ್ನು ನಿರ್ಮಿಸಲು ಬಿಬಿಎಂಪಿ ಚಿಂತನೆ ನಡೆಸಿದೆ. ಈ ಕುರಿತಂತೆ ಬಿಬಿಎಂಪಿ ಅಧಿಕಾರಿಗಳು ಸಾಕಷ್ಟು ಸಿದ್ಧತೆ ಆರಂಭಿಸಿದ್ದಾರೆ.
ಗುರುವಾರ ಚರ್ಚ್ ಸ್ಟ್ರೀಟ್ ರಸ್ತೆ ಪುನರಾರಂಭಗೊಂಡ ವೇಳೆ ಮೇಯರ್ ಸಂಪತ್ ರಾಜ್ ಈ ವಿಷಯ ತಿಳಿಸಿದ್ದು, ನ್ಯೂಯಾರ್ಕ್ ಟೈಮ್ಸ್ ನ ಟೈಮ್ಸ್ ಸ್ಕ್ವೇರ್ ಮಾದರಿಯಲ್ಲಿ ಬ್ರಿಗೆಡ್ ರಸ್ತೆ ಮತ್ತು ರೆಸಿಡೆನ್ಸಿ ರಸ್ತೆ ಸಂಧಿಸುವ ಜಂಕ್ಷನ್ ನಲ್ಲಿ ಟವರ್ ಒಂದನ್ನು ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಚರ್ಚ್ ಸ್ಟ್ರೀಟ್ ರಸ್ತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಉದ್ಘಾಟಿಸಬೇಕಿತ್ತಾದರೂ ಸಮಯದ ಅಭಾವದಿಂದ ಮೇಯರ್ ಸಂಪತ್ ರಾಜ್ ಚರ್ಚ್ ಸ್ಟ್ರೀಟ್ ಲೋಕಾರ್ಪಣೆ ಗೊಳಿಸಿದ ನಂತರ ಈ ವಿಷಯ ತಿಳಿಸಿದರು.

ಚರ್ಚ್ ಸ್ಟ್ರೀಟ್ ರಸ್ತೆಯ ಕಾಮಗಾರಿ ಹಲವು ತಿಂಗಳುಗಳಿಂದ ನೆನಗುದಿಗೆ ಬಿದ್ದಿತ್ತು. ಮಳೆ ಹಾಗೂ ಇನ್ನಿತರೆ ಕಾರಣಗಳಿಂದಾಗಿ ಟೆಂಡರ್ ಶ್ಯೂರ್ ಕಾಮಗಾರಿ ಪೂರ್ಣವಾಗಿರಲಿಲ್ಲ. ಅಲ್ಲದೆ ಚರ್ಚ್ ಸ್ಟ್ರೀಟ್ ಕಾಮಗಾರಿಗೆ ವಿಧಿಸಿದ್ದ ಡೆಡ್ ಲೈನ್ ಮುಗಿದ ನಂತರವೂ ಹಲವು ತಿಂಗಳುಗಳ ಕಾಲ ಕಾಮಗಾರಿ ವಿಳಂಬವಾಗಿತ್ತು.
ನಮಗೆ ನ್ಯೂಯಾರ್ಕ್ ನ ಟೈಮ್ಸ್ ಮಾದರಿಯಲ್ಲಿ ಬೆಂಗಳೂರು ಸ್ಕ್ವೆರ್ ನಿರ್ಮಿಸಬೇಕೆಂಬ ಆಲೋಚನೆ ಇದೆ. ಈಗಾಗಲೇ ಚರ್ಚ್ ಸ್ಟ್ರೀಟ್ ನ ಪ್ರವೇಶ ದ್ವಾರದಲ್ಲಿ ಈ ಕುರಿತಂತೆ ಸ್ಥಳ ಪರಿಶೀಲನೆ ನಡೆಸಲಾಗಿದೆ. ಬೆಂಗಳೂರು ವಿಶ್ವದ ಅತಿ ವೇಗದಲ್ಲಿ ಬೆಳೆಯುವ ನಗರವಾಗಿದ್ದು ಸೆಲೆಬ್ರೇಷನ್ ಗೆ ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್ ಹೆಸರು ಮಾಡಿವೆ. ಈ ನಿಟ್ಟಿನಲ್ಲಿ ಬೆಂಗಳೂರನಲ್ಲಿ ಟೈಮ್ಸ್ ಬೆಂಗಳೂರು ಸ್ಕ್ವೇರ್ ನಿರ್ಮಾಣಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬೆಂಗಳೂರು ಅದಕ್ಕಾಗಿ ಉಳಿದ ರಸ್ತೆಗಳನ್ನು ಟೆಂಡರ್ ಶ್ಯೂರ್ ನಿಂದ ಅಭಿವೃದ್ಧಿಪಡಿಸಲು ಚಿಂತನೆ ನಡೆದಿದೆ.
ಚರ್ಚ್ ಸ್ಟ್ರೀಟ್ ರಸ್ತೆ ಪ್ರಮುಖ ಸ್ಥಾನವಾಗಿದ್ದು ವಾಹನಮುಕ್ತ ಪ್ರದೇಶ ಎಂದು ಘೋಷಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಸ್ತೆಯಲ್ಲಿ ಭಾರಿಪ್ರವೇಶವನ್ನು ಶೀಘ್ರವೇ ನಿಷೇಧಿಸಲಾಗುವುದು, ಈ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರಗಳ ಜತೆಗೆ ಬಿಬಿಎಂಪಿ ಮಾತುಕತೆ ನಡೆಸಿದೆ. ಆದರೆ ಟ್ಯಾಕ್ಸಿ ಮತ್ತು ಬೈಕ್ ಗಳ ಮೂಲಕ ಈ ರಸ್ತೆಯನ್ನು ಸಂಪರ್ಕಿಸಲು ಸುಗಮವಾಗಿ ಕೂಡ ಕ್ರಮ ಕೈಗೊಳ್ಳಲಾಗುವುದು ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications