Homes Distribute: ಬೆಂಗಳೂರಿನಲ್ಲಿ ಶೀಘ್ರವೇ ಇವರಿಗೆ ಸಿಂಗಲ್ ಬೆಡ್ ರೂಂ ಮನೆ ಹಂಚಿಕೆ-ಯಾವ್ಯಾವ ಭಾಗಗಳಲ್ಲಿ ಮನೆಗಳ ನಿರ್ಮಾಣ?
ಬೆಂಗಳೂರು, ಸೆಪ್ಟೆಂಬರ್, 20: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಸ ಮಾಡುಸುತ್ತಿರುವ ವಸತಿ ಹೊಂದಿಲ್ಲದ ಬಡಜನರಿಗೆ ಶೀಘ್ರದಲ್ಲೇ ಮನೆ ಹಂಚಿಕೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಎಷ್ಟು ಮಂದಿಗೆ ವಿತರಣೆ ಮಾಡಲಾಗುತ್ತದೆ ಹಾಗೂ ಯಾವಾಗ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಆರ್ಥಿಕವಾಗಿ ಹಿಂದುಳಿದ ವಸತಿ ಹೊಂದಿಲ್ಲದ ಬಡವರಿಗೆ ಬೆಂಗಳೂರು ಸುತ್ತಮುತ್ತ ಮುಖ್ಯಮಂತ್ರಿಗಳ ಬಹು ಮಹಡಿ ವಸತಿ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಾಣ ಮಾಡುತ್ತಿರುವ ಸಿಂಗಲ್ ಬೆಡ್ ರೂಂನ ಸುಮಾರು 4000 ಫ್ಲ್ಯಾಟ್, ಮನೆಗಳು ಸಿದ್ಧವಾಗಿದ್ದು, ಮೂರ್ನಾಲ್ಕು ತಿಂಗಳಲ್ಲಿ ವಾಸಕ್ಕೆ ಲಭ್ಯ ಆಗಲಿವೆ.

ನೀರಿನ ಸಂಪರ್ಕ, ವಿದ್ಯುತ್ ಸೇರಿದಂತೆ ಹಲವು ಅಂತಿಮ ಹಂತದ ಕಾಮಗಾರಿ ಬಾಕಿ ಉಳಿದಿದ್ದು, ಎಲ್ಲವನ್ನು ಪೂರ್ಣಗೊಳಿಸಿ ನಿಗದಿತ ಶುಲ್ಕ ಪಾವತಿಸುವ ಅರ್ಜಿದಾರರಿಗೆ ಫ್ಲ್ಯಾಟ್ ಬೀಗ ಹಸ್ತಾಂತರಿಸಲು ವಸತಿ ನಿಗಮ ನಿರ್ಧರಿಸಿದೆ.
ಎಲ್ಲೆಲ್ಲಿ ವಸತಿಗಳ ನಿರ್ಮಾಣ?: ಮಹದೇವಪುರ, ಆನೇಕಲ್, ಯಲಹಂಕ, ಬೆಂಗಳೂರು ದಕ್ಷಿಣ, ದಾಸರಹಳ್ಳಿ, ಕೆಆರ್ ಪುರ, ಯಶವಂತಪುರ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಪೂರ್ಣಗೊಂಡ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗುವುದು. ಈ ಯೋಜನೆಗೆ ಸರ್ಕಾರದಿಂದಲೇ ಜಮೀನು ನೀಡಲಾಗಿದೆ. ಮೂಲ ಸೌಕರ್ಯ ಸೇರಿ ಫ್ಲ್ಯಾಟ್ ದರ 11.20 ಲಕ್ಷ ರೂಪಾಯಿ ನಿಗದಿ ಮಾಡಿದ್ದು, ಎಸ್ಸಿ ಎಸ್ಟಿ ಸಮುದಾಯಗಳಿಗೆ ಸರ್ಕಾರದಿಂದ 3.50 ಲಕ್ಷ ರೂಪಾಯಿ ಸಬ್ಸಿಡಿ, ಸಾಮಾನ್ಯ ವರ್ಗದವರಿಗೆ 2.70 ಲಕ್ಷ ರೂಪಾಯಿ ಸಬ್ಸಿಡಿ ನೀಡಲಾಗುತ್ತದೆ.
ಮುಂಗಡವಾಗಿ ಫ್ಲ್ಯಾಟ್ ಬುಕ್ ಮಾಡಿ ಮುಂಗಡ ಠೇವಣಿ ಇಟ್ಟಿರುವ ಅರ್ಜಿದಾರರಿಗೆ ರಾಜ್ಯ ಸರ್ಕಾರ ಮತ್ತೆ ಒಂದು ಲಕ್ಷ ರೂಪಾಯಿ ಕಡಿತಗೊಳಿಸಿದ್ದು, ಫ್ಲ್ಯಾಟ್ ದರ ಅಂತಿಮವಾಗಿ ಪರಿಶಿಷ್ಟ ಜಾತಿ, ಪಂಗಡ ಸಮುದಾಯದವರಿಗೆ 6.7 ಲಕ್ಷ ರೂಪಾಯಿ, ಸಾಮಾನ್ಯ ವರ್ಗದವರಿಗೆ 7.50 ಲಕ್ಷ ರೂಪಾಯಿ ಆಗಲಿದೆ. ಅರ್ಜಿದಾರರು ಪಡಿತರ ಚೀಟಿ, ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿ ಮಿತಿಯಲ್ಲಿರಬೇಕು. ಯೋಜನೆಯಲ್ಲಿ ಒಟ್ಟು 46,499 ಮನೆಗಳನ್ನು ನಿರ್ಮಿಸಲಾಗುವುದು.
ಬೆಂಗಳೂರಿನಲ್ಲಿ ನಮ್ಮ ರಾಜ್ಯದವರೇ ಎಷ್ಟೋ ಜನರು ಮನೆಯಿಲ್ಲದೇ ಬೀದಿಗಳಲ್ಲಿ ಜೀವನ ಮಾಡುತ್ತಿರುವ ಉದಾಹರಣೆಳಿವೆ. ಪುಟ್ ಪಾತ್, ರಾಜಕಾಲುವೆಗಳ ಮೇಲೆ ಗುಡಿಸಲು ಹಾಕಿಕೊಂಡು ಜೀವನ ಮಾಡುತ್ತಿದ್ದು, ಮಳೆಗಾಲದಲ್ಲಿ ಇವರ ಜೀವನ ಹೇಳತೀರದಾಗಿರುತ್ತದೆ. ಇದೀಗ ಸರ್ಕಾರ ಇಂತಹವರ ಕಡೆಗೂ ಗಮನಹರಿಸಬೇಕಿದೆ.
-
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications