Homes Distribute: ಬೆಂಗಳೂರಿನಲ್ಲಿ ಶೀಘ್ರವೇ ಇವರಿಗೆ ಸಿಂಗಲ್ ಬೆಡ್ ರೂಂ ಮನೆ ಹಂಚಿಕೆ-ಯಾವ್ಯಾವ ಭಾಗಗಳಲ್ಲಿ ಮನೆಗಳ ನಿರ್ಮಾಣ?
ಬೆಂಗಳೂರು, ಸೆಪ್ಟೆಂಬರ್, 20: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಸ ಮಾಡುಸುತ್ತಿರುವ ವಸತಿ ಹೊಂದಿಲ್ಲದ ಬಡಜನರಿಗೆ ಶೀಘ್ರದಲ್ಲೇ ಮನೆ ಹಂಚಿಕೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಎಷ್ಟು ಮಂದಿಗೆ ವಿತರಣೆ ಮಾಡಲಾಗುತ್ತದೆ ಹಾಗೂ ಯಾವಾಗ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಆರ್ಥಿಕವಾಗಿ ಹಿಂದುಳಿದ ವಸತಿ ಹೊಂದಿಲ್ಲದ ಬಡವರಿಗೆ ಬೆಂಗಳೂರು ಸುತ್ತಮುತ್ತ ಮುಖ್ಯಮಂತ್ರಿಗಳ ಬಹು ಮಹಡಿ ವಸತಿ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಾಣ ಮಾಡುತ್ತಿರುವ ಸಿಂಗಲ್ ಬೆಡ್ ರೂಂನ ಸುಮಾರು 4000 ಫ್ಲ್ಯಾಟ್, ಮನೆಗಳು ಸಿದ್ಧವಾಗಿದ್ದು, ಮೂರ್ನಾಲ್ಕು ತಿಂಗಳಲ್ಲಿ ವಾಸಕ್ಕೆ ಲಭ್ಯ ಆಗಲಿವೆ.

ನೀರಿನ ಸಂಪರ್ಕ, ವಿದ್ಯುತ್ ಸೇರಿದಂತೆ ಹಲವು ಅಂತಿಮ ಹಂತದ ಕಾಮಗಾರಿ ಬಾಕಿ ಉಳಿದಿದ್ದು, ಎಲ್ಲವನ್ನು ಪೂರ್ಣಗೊಳಿಸಿ ನಿಗದಿತ ಶುಲ್ಕ ಪಾವತಿಸುವ ಅರ್ಜಿದಾರರಿಗೆ ಫ್ಲ್ಯಾಟ್ ಬೀಗ ಹಸ್ತಾಂತರಿಸಲು ವಸತಿ ನಿಗಮ ನಿರ್ಧರಿಸಿದೆ.
ಎಲ್ಲೆಲ್ಲಿ ವಸತಿಗಳ ನಿರ್ಮಾಣ?: ಮಹದೇವಪುರ, ಆನೇಕಲ್, ಯಲಹಂಕ, ಬೆಂಗಳೂರು ದಕ್ಷಿಣ, ದಾಸರಹಳ್ಳಿ, ಕೆಆರ್ ಪುರ, ಯಶವಂತಪುರ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಪೂರ್ಣಗೊಂಡ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗುವುದು. ಈ ಯೋಜನೆಗೆ ಸರ್ಕಾರದಿಂದಲೇ ಜಮೀನು ನೀಡಲಾಗಿದೆ. ಮೂಲ ಸೌಕರ್ಯ ಸೇರಿ ಫ್ಲ್ಯಾಟ್ ದರ 11.20 ಲಕ್ಷ ರೂಪಾಯಿ ನಿಗದಿ ಮಾಡಿದ್ದು, ಎಸ್ಸಿ ಎಸ್ಟಿ ಸಮುದಾಯಗಳಿಗೆ ಸರ್ಕಾರದಿಂದ 3.50 ಲಕ್ಷ ರೂಪಾಯಿ ಸಬ್ಸಿಡಿ, ಸಾಮಾನ್ಯ ವರ್ಗದವರಿಗೆ 2.70 ಲಕ್ಷ ರೂಪಾಯಿ ಸಬ್ಸಿಡಿ ನೀಡಲಾಗುತ್ತದೆ.
ಮುಂಗಡವಾಗಿ ಫ್ಲ್ಯಾಟ್ ಬುಕ್ ಮಾಡಿ ಮುಂಗಡ ಠೇವಣಿ ಇಟ್ಟಿರುವ ಅರ್ಜಿದಾರರಿಗೆ ರಾಜ್ಯ ಸರ್ಕಾರ ಮತ್ತೆ ಒಂದು ಲಕ್ಷ ರೂಪಾಯಿ ಕಡಿತಗೊಳಿಸಿದ್ದು, ಫ್ಲ್ಯಾಟ್ ದರ ಅಂತಿಮವಾಗಿ ಪರಿಶಿಷ್ಟ ಜಾತಿ, ಪಂಗಡ ಸಮುದಾಯದವರಿಗೆ 6.7 ಲಕ್ಷ ರೂಪಾಯಿ, ಸಾಮಾನ್ಯ ವರ್ಗದವರಿಗೆ 7.50 ಲಕ್ಷ ರೂಪಾಯಿ ಆಗಲಿದೆ. ಅರ್ಜಿದಾರರು ಪಡಿತರ ಚೀಟಿ, ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿ ಮಿತಿಯಲ್ಲಿರಬೇಕು. ಯೋಜನೆಯಲ್ಲಿ ಒಟ್ಟು 46,499 ಮನೆಗಳನ್ನು ನಿರ್ಮಿಸಲಾಗುವುದು.
ಬೆಂಗಳೂರಿನಲ್ಲಿ ನಮ್ಮ ರಾಜ್ಯದವರೇ ಎಷ್ಟೋ ಜನರು ಮನೆಯಿಲ್ಲದೇ ಬೀದಿಗಳಲ್ಲಿ ಜೀವನ ಮಾಡುತ್ತಿರುವ ಉದಾಹರಣೆಳಿವೆ. ಪುಟ್ ಪಾತ್, ರಾಜಕಾಲುವೆಗಳ ಮೇಲೆ ಗುಡಿಸಲು ಹಾಕಿಕೊಂಡು ಜೀವನ ಮಾಡುತ್ತಿದ್ದು, ಮಳೆಗಾಲದಲ್ಲಿ ಇವರ ಜೀವನ ಹೇಳತೀರದಾಗಿರುತ್ತದೆ. ಇದೀಗ ಸರ್ಕಾರ ಇಂತಹವರ ಕಡೆಗೂ ಗಮನಹರಿಸಬೇಕಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion












Click it and Unblock the Notifications