ಒಂದಂಕಿ ಲಾಟರಿ: ನಡೆಯದ ಪ್ರಕರಣಕ್ಕೆ ಕೇಸು ದಾಖಲಿಸಿದ್ದ ಪೊಲೀಸರು!
ಬೆಂಗಳೂರು, ಫೆಬ್ರವರಿ 06: ಒಂದಂಕಿ ಲಾಟರಿ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹಾಗೂ ನಿವೃತ್ತ ಎಸ್ಪಿ ಧರಣೀಂದ್ರ ನಿರಾಳರಾಗಿದ್ದಾರೆ. ಅವರಿಗೆ ಸಿಬಿಐ ಕ್ಲೀನ್ಚಿಟ್ ನೀಡಿದೆ. ವಿಶೇಷವೆಂದರೆ ಪ್ರಕರಣದ ಪ್ರಮುಖ ಆರೋಪಿ ಎನಿಸಿಕೊಂಡಿದ್ದ ಪಾಣಿರಾಜನ್ ಗೆ ಸಹ ಕ್ಲೀನ್ ಚಿಟ್ ನೀಡಲಾಗಿದೆ.
ಒಂದಂಕಿ ಲಾಟರಿ ಪ್ರಕರಣ ರಾಜ್ಯ-ದೇಶದಾದ್ಯಂತ ಭಾರಿ ಸುದ್ದಿ ಮಾಡಿತ್ತು. ನಿವೃತ್ತ ಎಸ್ಪಿ ಧರಣೀಂದ್ರ ಮತ್ತು ಐಪಿಎಸ್ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನೂ ಸಹ ಆರೋಪಿಗಳನ್ನಾಗಿ ಮಾಡಿ ಎಫ್ಐಆರ್ ದಾಖಲಿಸಲಾಗಿತ್ತು. ಪ್ರಕರಣದ ಮಾಸ್ಟರ್ ಮೈಂಡ್ ಎಂದು ಪಾರಿರಾಜನ್ ಅನ್ನು ಬಂಧಿಸಲಾಗಿತ್ತು. ಆದರೆ ಈಗ ಪ್ರಕರಣವೇ ಸುಳ್ಳು ಪ್ರಕರಣ ಎಂದು ಸಿಬಿಐ ಹೇಳಿದೆ.
ಪ್ರಕರಣವನ್ನು ಸಿದ್ದರಾಮಯ್ಯ ಸರ್ಕಾರ ಸಿಬಿಐ ಗೆ ವಹಿಸಿತ್ತು. ಸತತ ಐದು ವರ್ಷ ತನಿಖೆ ನಡೆಸಿದ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿದ್ದು, ಎ1 ಆಗಿದ್ದ ಪಾರಿರಾಜನ್ ಸೇರಿ, ಅಲೋಕ್ ಕುಮಾರ್, ಧರಣೀಂದ್ರ ಅವರ ಹೆಸರನ್ನು ಚಾರ್ಜ್ಶೀಟ್ ನಿಂದ ಕೈಬಿಟ್ಟಿದೆ. ಇವರ ಮೇಲೆ ಸುಳ್ಳು ಕೇಸು ದಾಖಲಿಸಲಾಗಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹೇಳಿದೆ.

ಸುಳ್ಳು ಕೇಸು ದಾಖಲಿಸಿದ್ದ ಲಾಟರಿ ನಿಷೇಧ ದಳದ ಮಾಜಿ ಐಜಿಪಿ ಪದ್ಮನಯನ ಅವರನ್ನು ಪ್ರಮುಖ ಆರೋಪಿಯನ್ನಾಗಿಸಿ ಚಾರ್ಜ್ಶೀಟ್ ಸಲ್ಲಿಸಿದೆ. ಇದೇ ಪದ್ಮನಯನ ಅವರ ನೇತೃತ್ವದಲ್ಲಿ ಆಗ ಅಲೋಕ್ ಕುಮಾರ್, ಧರಣೀಂದ್ರ, ಪಾರಿರಾಜನ್ ಮೇಲೆ ಪ್ರಕರಣ ದಾಖಲಿಸಲಾಗಿತ್ತು.
ಪದ್ಮನಯನ, ಇನ್ಸ್ಪೆಕ್ಟರ್ ಕನಕಲಕ್ಷ್ಮಿ, ಜಿಟಿ ರಾಮಸ್ವಾಮಿ, ವೇಣುಗೋಪಾಲ್, ಶ್ರೀಕಂಠ ರಂಗನಾಥ್, ರವಿಪ್ರಕಾಶ್, ತಿಪ್ಪೇಸ್ವಾಮಿ, ರವಿಕುಮಾರ್, ಲೋಕೇಶ್ ಅವರುಗಳು ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಸಿಬಿಐ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ.
ಪ್ರಕರಣದ ಬಗ್ಗೆ ಮಾತನಾಡಿರುವ ಅಲೋಕ್ ಕುಮಾರ್ ಅವರು, 'ಈಗ ನನಗೆ ನ್ಯಾಯ ಸಿಕ್ಕಿದೆ, ನಾನೇನೋ ಹಗರಣ ಮಾಡಿಬಿಟ್ಟಿದ್ದೇನೆ ಎಂದು ಪ್ರಚಾರ ಮಾಡಿದ್ದರು, ಆದರೆ ಈಗ ಜನರಿಗೆ ಸತ್ಯ ಅರ್ಥವಾಗಿದೆ' ಎಂದು ಹೇಳಿದ್ದಾರೆ.
ಲಾಟರಿ ನಿಷೇಧ ದಳದ ಅಧಿಕಾರಿಗಳು ಪದ್ಮನಯನ ಆದೇಶದಂತೆ ವಿಜಯನಗರದ ಸರ್ಕಾರಿ ಮುದ್ರಣಾಲಯದಲ್ಲಿ ಲಾಟರಿಗಳನ್ನು ಮುದ್ರಿಸಿ ಪಾರಿರಾಜನ್ ಮನೆಯಲ್ಲಿಟ್ಟು ನಕಲಿ ರೇಡ್ ಮಾಡಿ ಪ್ರಕರಣ ದಾಖಲಿಸಿದ್ದರು ಎಂದು ಈ ಹಿಂದೆ ತನಿಖೆಯಿಂದ ತಿಳಿದು ಬಂದಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications