ಡಿಜಿಟಲ್ ಬ್ಯಾಂಕಿಂಗ್ ವಂಚನೆ ತಡೆಯಲು ಏಕಗವಾಕ್ಷಿ ಪದ್ಧತಿ
ಬೆಂಗಳೂರು, ಸೆಪ್ಟೆಂಬರ್ 10: ಡಿಜಿಟಲ್ ಬ್ಯಾಂಕಿಂಗ್ ವಲಯದಲ್ಲಿ ಹೆಚ್ಚುತ್ತಿರುವ ವಂಚನೆಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ.
ಡಿಜಿಟಲ್ ಬ್ಯಾಂಕಿಂಗ್ ಮೋಸ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನಕಲಿ ಕಸ್ಟಮರ್ ಕೇರ್ ಕರೆ ತಡೆಗಟ್ಟಲು ಏಕ ಗವಾಕ್ಷಿ ಪದ್ಧತಿ ತರಲು ಉದ್ದೇಶಿಸಲಾಗಿದೆ. ಇದರ ಮೂಲಕ ಡಿಜಿಟಲ್ ಕ್ಷೇತ್ರದ ವಂಚನೆಯನ್ನು ತಡೆಯಲು ಕ್ರಮ ತೆಗೆದುಕೊಳ್ಳಲಾಗುವುದು. ವಂಚನೆಗೆ ಒಳಗಾದವರು ವಾಟ್ಸಾಪ್ ಸಂದೇಶದ ಮೂಲಕ ದೂರು ದಾಖಲಿಸಬಹುದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಈ ವ್ಯವಸ್ಥೆಗಾಗಿ ಶೀಘ್ರದಲ್ಲಿಯೇ ಒಂದು ವಾಟ್ಸಾಪ್ ಸಂಖ್ಯೆ ನೀಡಲಾಗುವುದು. ಇದಕ್ಕಾಗಿ ಸಮನ್ವಯ ಸಮಿತಿ ರಚನೆ ಮಾಡಲು ತೀರ್ಮಾನಿಸಲಾಗಿದೆ. ಈ ಸಮಿತಿಯಿಂದ ಸಲಹೆಗಳನ್ನು ಪಡೆದು ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಗುವ ಅವ್ಯವಹಾರ, ವಂಚನೆಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು, ವಿವಿಧ ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್ಗಳ ಮುಖ್ಯಸ್ಥರು ಮತ್ತು ಪ್ರತಿನಿಧಿಗಳ ಜತೆಗೆ ಅವರು ಗುರುವಾರ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿಯಲ್ಲಿ ಬ್ಯಾಂಕಿಂಗ್ ಕ್ಷೇತ್ರದವರು, ಮಾಹಿತಿ ತಂತ್ರಜ್ಞಾನ ತಜ್ಞರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಇರುತ್ತಾರೆ ಎಂದರು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಪರಾಧಗಳು ಹೆಚ್ಚುತ್ತಿವೆ. ಜನಸಾಮಾನ್ಯರ ಹಣ ಬ್ಯಾಂಕ್ ಖಾತೆಯಲ್ಲಿ ಸುರಕ್ಷಿತವಾಗಿರಬೇಕು. ಡಿಜಿಟಲೀಕರಣದ ಬಳಿಕ ಸಾಮಾನ್ಯ ಜನರಿಗೆ ವಂಚನೆ, ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ಗಳ ಮೋಸದ ಪ್ರಕರಣಗಳು ವರದಿಯಾಗುತ್ತಿವೆ. ಸರ್ಕಾರದ ಖಾತೆಯಿಂದಲೂ ಹಣ ವರ್ಗಾವಣೆಯ ವಂಚನೆ ನಡೆಯುತ್ತಿವೆ. ಅದಕ್ಕೆ ತಡೆ ಹಾಕುವ ಉದ್ದೇಶದಿಂದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು.
-
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ?











Click it and Unblock the Notifications