ಸಿರಿಧಾನ್ಯ ಮೇಳದಲ್ಲಿ ಅದಮ್ಯ ಚೇತನದಿಂದ ಶೂನ್ಯ ತ್ಯಾಜ್ಯ ಭೋಜನ ವ್ಯವಸ್ಥೆ
ಬೆಂಗಳೂರು ಜನವರಿ 20: ಲಕ್ಷಾಂತರ ಮಕ್ಕಳ ಹಸಿವನ್ನು ತಣಿಸುತ್ತಿರುವ ಜೊತೆಯಲ್ಲಿಯೇ 'ಝೀರೋ ಗಾರ್ಬೆಜ್' ಮೂಲಕ ಮನೆಮಾತಾಗಿರುವ ಅದಮ್ಯ ಚೇತನ, ಈ ಬಾರಿಯ ಸಾವಯವ ಮತ್ತು ಸಿರಿಧಾನ್ಯಗಳ ಅಂತರಾಷ್ಟ್ರೀಯ ವಾಣಿಜ್ಯ ಮೇಳ 2019 ರ ಭೋಜನ ವ್ಯವಸ್ಥೆಯನ್ನು ಶೂನ್ಯ ತ್ಯಾಜ್ಯ ಮಾಡುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ.
10 ಸಾವಿರ ಪ್ರತಿನಿಧಿಗಳು ಮತ್ತು 50 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಭಾಗವಹಿಸುವ ಮೂರು ದಿನಗಳ ಈ ಸಾವಯವ ಮತ್ತು ಸಿರಿಧಾನ್ಯಗಳ ಮೇಳದಲ್ಲಿ ಅದಮ್ಯ ಚೇತನ ಶೂನ್ಯ ತ್ಯಾಜ್ಯ ಭೋಜನ ವ್ಯವಸ್ಥೆಯನ್ನು ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ಡಾ ತೇಜಸ್ವಿನೀ ಅನಂತಕುಮಾರ್, ಸಿರಿಧಾನ್ಯಗಳ ಬಳಕೆ ನಮ್ಮ ಭೋಜನ ಶಾಲೆಯಲ್ಲಿ ಸಾಮಾನ್ಯ. ಇಂತಹ ಸಿರಿಧಾನ್ಯಗಳ ಅಂತರಾಷ್ಟ್ರೀಯ ಮೇಳದಲ್ಲಿ ಪ್ಯಾಸ್ಟಿಕ್, ಅಡಕೆ ತಟ್ಟೆ, ಪೇಪರ್ ತಟ್ಟೆ, ಪೇಪರ್ ಚಮಚ ಹಾಗೂ ಲೋಟಗಳನ್ನು ಸಂಪೂರ್ಣವಾಗಿ ನಿರ್ಭಂಧಿಸಲಾಗಿದೆ.

ಅದಮ್ಯ ಚೇತನ ಸಂಸ್ಥೆಯ ವತಿಯಿಂದ ಬಹುದಿನಗಳ ಯೋಜನೆಯಾದ ಸ್ಟೀಲ್ ತಟ್ಟೆ ಹಾಗೂ ಲೋಟಗಳ ಬ್ಯಾಂಕಿನ ಅಡಿಯಲ್ಲಿ 20 ಸಾವಿರ ಸ್ಟೀಲ್ ತಟ್ಟೆಗಳು, 20 ಸಾವಿರ ಸ್ಟೀಲ್ ಬಟ್ಟಲುಗಳು, 50 ಸಾವಿರ ಸ್ಟೀಲ್ ಚಮಚಗಳು ಮತ್ತು ಇನ್ನಿತರ ಸ್ಟೀಲ್ ವಸ್ತುಗಳನ್ನು ಪೂರೈಸಲಾಗಿದೆ. ಈ ಮೂಲಕ ತ್ಯಾಜ್ಯ ಉತ್ಪತ್ತಿಯನ್ನು ಸಂಪೂರ್ಣವಾಗಿ ಕಡಿಮೆಗೊಳಿಸಿರುವುದು ಸಂತಸದ ವಿಷಯವಾಗಿದೆ ಎಂದರು.

ಅಲ್ಲದೆ, ಊಟದ ನಂತರದಲ್ಲಿ ಮಿಕ್ಕುಳಿದ ಆಹಾರವನ್ನು ಗೊಬ್ಬರ ತಯಾರಿಸಲು ಗೊಬ್ಬರದ ಗುಂಡಿಗೆ ಹಾಕುವ ವ್ಯವಸ್ಥೆಯನ್ನು ಮಾಡಲಾಗಿದೆ. ಹಾಗೆಯೇ, ಉಟೋಪಚಾರಕ್ಕೆ ಬಳಸಲಾದ ಈ ಸ್ಟೀಲ್ ವಸ್ತುಗಳನ್ನು ಸ್ವಚ್ಚಗೊಳಿಸಲು ಸಾವಯವ ಸಾಬೂನ ಬಳಸಲಾಗುತ್ತದೆ. ಯಾವುದೇ ಕಾರಣಕ್ಕೂ ಪರಿಸರಕ್ಕೆ ಹಾನಿಯನ್ನುಂಟು ಮಾಡುವ ರಾಸಾಯನಿಕಗಳು ಮತ್ತು ಪ್ಯಾಸ್ಟಿಕ್ ವಸ್ತುಗಳನ್ನು ಬಳಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾವಯವ ಸಿರಿಧಾನ್ಯಗಳ ಮೇಳದ ಉದ್ಘಾಟನಾ ದಿನದಂದು ಸಾವಿರಾರು ಜನರು ಈ ಸ್ಟೀಲ್ ತಟ್ಟೆಗಳು ಹಾಗೂ ಲೋಟಗಳನ್ನು ಬಳಸಿಕೊಂಡಿದ್ದಾರೆ. ಈ ಮೂಲಕ ಪರಿಸರಕ್ಕೆ ಅಲ್ಪ ಕಾಣಿಕೆಯನ್ನೂ ನೀಡಿರುವ ಖುಷಿ ಅದಮ್ಯ ಚೇತನ ಸಂಸ್ಥೆಯದ್ದಾಗಿದೆ.
-
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications