‘ಉದ್ಯಮದಲ್ಲಿ ಸಾಮಾಜಿಕ ಕಳಕಳಿ ಕೂಡ ಮೂಡಬೇಕಿದೆ’
ಸಮಾಜದಲ್ಲಿ ಉದ್ಯಮಿಗಳು ಉದ್ಯಮದ ಜೊತೆಗೆ ಸಾಮಾಜಿಕ ಕಳಕಳಿ ಕೂಡ ಬೆಳೆಸಿಕೊಳ್ಳಬೇಕು ಆ ಮೂಲಕ, ನಮ್ಮ ಸಮಾಜದಲ್ಲಿ ಬದಲಾವಣೆ ತರಬಹುದು ಎಂದು ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಮಠದ ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿಗಳು ಪ್ರತಿಪಾದನೆ ಮಾಡಿದರು. ಹೀಗೆ ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಉದ್ಯಮಿಗಳ ಪಾತ್ರವೂ ಮುಖ್ಯ ಎಂದರು.
ಅಂದಹಾಗೆ ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ ಬ್ಯಾಟರಾಯನಪುರದಲ್ಲಿ ವಾಣಿಜ್ಯ ಉದ್ದೇಶಕ್ಕೆ ನಿರ್ಮಿಸಿರುವ ಸೂರ್ಯ ಹೈಟ್ಸ್ ಕಟ್ಟಡವನ್ನು, ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಮಠದ ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿಗಳು ಉದ್ಘಾಟನೆ ಮಾಡಿ ಮಾತನಾಡಿದರು. ಈ ವೇಳೆ ಉದ್ಯಮ ವಲಯಕ್ಕೆ ಸಲಹೆ ನೀಡಿದರು. ಈ ಕಟ್ಟಡ ನಿರ್ಮಿಸಿರುವ ವಿಶ್ವನಾಥ ಕೇವಲ ಸ್ವಲಾಭವನ್ನು ಮಾತ್ರ ಯೋಚಿಸದೆ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಮುಂದಿನ ಎಲ್ಲಾ ಯೋಜನೆ ಯಶಸ್ವಿ ಆಗಲಿ ಮತ್ತು ಅವರಿಂದ ಇನ್ನಷ್ಟು ಉತ್ತಮ ಕೆಲಸಗಳೂ ಸಮಾಜಕ್ಕೆ ಆಗಲಿ ಎಂದು ಹಾರೈಸಿದರು.

ಲಾಭದ ಜೊತೆಗೆ ವಿಶ್ವಾಸರ್ಹತೆ
ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಲಾಭದ ಜೊತೆಗೆ ವಿಶ್ವಾಸರ್ಹತೆ ಗಳಿಸಿದರೆ ಮೌಲ್ಯ ಹೆಚ್ಚಾಗುತ್ತೆ. ಅದನ್ನು ಸೂರ್ಯ ಹೈಟ್ಸ್ ನ ವಿಶ್ವನಾಥ ಸಾಧಿಸಿ ತೋರಿಸಿದ್ದಾರೆ. ಸಮುದಾಯ ಆರೋಗ್ಯ ಸುಧಾರಿಸುವ ಆಸ್ಪತ್ರೆಗೆ ಕಟ್ಟಡ ನಿರ್ಮಿಸಿ ಕೊಡುತ್ತಾ ಇರುವ ಅವರ ಕಾರ್ಯ ನಿಜಕ್ಕೂ ಪ್ರಶಂಸನಾರ್ಹ. ನಿಮ್ಮ ಪ್ರಯತ್ನಗಳಲ್ಲಿ ಪ್ರಾಮಾಣಿಕತೆ ಇದೆ ನಿಮ್ಮ ಬೆಳವಣಿಗೆ ಆ ಸೂರ್ಯನಷ್ಟೇ ಎತ್ತರಕ್ಕೆ ಕೂಡ ಬೆಳೆಯಲಿ. ಇಂತಹ ಉತ್ತಮ ಕಾರ್ಯಕ್ಕೆ ಶ್ರೀಗಳು ಆಶೀರ್ವಾದ ಮಾಡಿರುವುದು ಮತ್ತೊಂದು ಶುಭ ಸಂಕೇತ ಎಂದರು.
ಬೆಂಗಳೂರಿನಲ್ಲಿ ನೂರೆಂಟು ಅವಕಾಶ
ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ ಪಾಟೀಲ್ ಅವರು ಇದೇ ವೇಳೆ ಮಾತನಾಡಿ, ಬೆಂಗಳೂರು ಬೃಹತ್ ಪ್ರಮಾಣದಲ್ಲಿ ಬೆಳೆಯುತ್ತಿದೆ ಆ ಮೂಲಕ ನೂರೆಂಟು ಅವಕಾಶ ತೆರೆದಿಡುತ್ತಿದೆ. ಈ ಅವಕಾಶವೇ ಇಂದು ಈ ಕಟ್ಟಡ ಎದ್ದು ನಿಲ್ಲಲು ಕಾರಣವು ಆಗಿದೆ. ಒಂದು ಕಟ್ಟಡದ ನಿರ್ಮಾಣದ ಹಿಂದೆ ಅನೇಕರ ಶ್ರಮ ಇರುತ್ತದೆ. ಆ ಮೂಲಕ ಅಷ್ಟು ಜನಕ್ಕೂ ಉದ್ಯೋಗಕ್ಕೆ ಅವಕಾಶವಾಗಿದೆ. ಇದೊಂದು ಅತ್ಯುತ್ತಮ ಪ್ರಯತ್ನ ಎಂದರು.

ಸೇನೆಯಲ್ಲಿ ಸೇವೆ ಸಲ್ಲಿಸಿದವರಿಗೆ ರಿಯಾಯಿತಿ
ಇನ್ನು ಸೂರ್ಯ ಡೆವಲಪರ್ಸ್ ಸಂಸ್ಥಾಪಕ & ವ್ಯವಸ್ಥಾಪಕ ಪಾಲುದಾರರಾದ ವಿಶ್ವನಾಥ್ ಬಾತಿ ಅವರು ಮಾತನಾಡಿ, ಮೌಲ್ಯ ಮತ್ತು ಬದ್ಧತೆಯ ಜೊತೆಯಲ್ಲಿ ಈ ಉದ್ಯಮ ಆರಂಭಿಸಿದ್ದೇನೆ. ನಮ್ಮ ವಿಲ್ಲಾಗಳನ್ನು ಬುಕ್ ಮಾಡಿಕೊಳ್ಳುವ ಆರ್ಮಿ ಹಾಗೂ ಏರ್ ಫೋರ್ಸ್ ಅಧಿಕಾರಿಗಳಿಗೆ ನೋಂದಣಿಯಲ್ಲಿ, ವಿಶೇಷ ರಿಯಾಯಿತಿ ಕೊಡುವ ನಿರ್ಧಾರ ಕೂಡ ಮಾಡಿದ್ದೀವಿ. ಸೂರ್ಯ ಡೆವಲಪರ್ಸ್ ಸದಾ ಸಮಾಜಮುಖಿ ಆಗಿ ಕಾರ್ಯ ನಿರ್ವಹಿಸುವುದಕ್ಕೆ ಬದ್ಧವಾಗಿರುತ್ತದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಸೇರಿದಂತೆ, ಮಾಜಿ ಸಚಿವರಾದ ಬೈರತಿ ಸುರೇಶ್ ಅವರು ಕಾರ್ಯಕ್ರಮಕ್ಕೆ ಆಗಮಿಸಿ ಶುಭಕೋರಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications