ಸಿರ್ಸಿ ಸರ್ಕಲ್ ಮೇಲ್ಸೇತುವೆ ದುರಸ್ತಿ ಕಾಮಗಾರಿ ಇಂದಿನಿಂದ ಆರಂಭ
ಬೆಂಗಳೂರು,ಡಿಸೆಂಬರ್ 16: ಇಂದಿನಿಂದ ಸಿರ್ಸಿ ಸರ್ಕಲ್ ಮೇಲ್ಸೇತುವೆ ಇನ್ನೊಂದು ಬದಿಯ ದುರಸ್ತಿ ಕಾಮಗಾರಿ ಆರಂಭವಾಗಲಿದೆ.
ಸೋಮವಾರ(ಡಿಸೆಂಬರ್ 16) ಮಧ್ಯಾಹ್ನ 12 ಗಂಟೆಯಿಂದ ಮೇಲ್ಸೇತುವೆ ಸಂಚಾರ ಸ್ಥಗಿತಗೊಳ್ಳಲಿದೆ. ಸಿರ್ಸಿ ಮೇಲ್ಸೇತುವೆಯಿಂದ 2.65 ಕಿ.ಮೀ ಉದ್ದವಿದ್ದು, ಎರಡು ಹಂತಗಳಲ್ಲಿ ಕಾಮಗಾರಿ ನಡೆಸುವುದಕ್ಕೆ ಬಿಬಿಎಂಪಿ ಹಾಗೂ ಸಂಚಾರ ಪೊಲೀಸರು ಯೋಜನೆ ರೂಪಿಸಿದ್ದಾರೆ.

ಮೊದಲ ಹಂತದ ಕಾಮಗಾರಿ
ಮೈಸೂರು ರಸ್ತೆ ಕಡೆಯಿಂದ ಮೇಲ್ಸೇತುವೆ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗುತ್ತಿದೆ. ಸಂಚಾರ ಬದಲಾವಣೆ ಮಾಡಿಕೊಳ್ಳಲಾಗುತ್ತಿದೆ. ಬೆಳಗ್ಗೆ 6ರಿಂದ ಸಂಜೆ 4ವರಗೆ ಹಾಗೂ ರಾತ್ರಿ 11ರಿಂದ ಬೆಳಗ್ಗೆ 6 ಗಂಟೆವರೆಗೆ ಮೈಸೂರು ಕಡೆಯಿಂದ ಬರುವ ವಾಹನಗಳಲ್ಲಿ ಈಗಾಗಲೇ ಕಾಮಾಗಾರಿ ನಡೆಸಲಾಗಿರುವ ಮೇಲ್ಸೇತುವೆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಹೀಗೆ ಮೇಲ್ಸೇತುವೆ ಬಳಸಿ ಬರುವ ವಾಹನಗಳನ್ನು ರಾಯನ್ ವೃತ್ತದ ಬಳಿ ಎರ ತಿರುವು ಪಡೆದು ಯಥಾ ಪ್ರಕಾರ ಮೆಜೆಸ್ಟಿಕ್ ಹಾಗೂ ಪುರಭವನದ ಕಡೆ ಸಾಗಬೇಕಾಗಿದೆ.

ಟೌನ್ಹಾಲ್ನಿಂದ ಬರುವ ವಾಹನಗಳಿಗೆ ಯಾವ ಮಾರ್ಗ
ಟೌನ್ಹಾಲ್ನಿಂದ ಮೈಸೂರು ರಸ್ತೆ ಕಡೆ ಸಂಚರಿಸುವ ವಾಹನಗಳು ರಾಯನ್ ವೃತ್ತದ ಬಳಿ ಎಡಕ್ಕೆ ತಿರುವು ಪಡೆದು ರಾಯನ್ ವೃತ್ತದ ಬಳಿ ಎಡಕ್ಕೆ ತಿರುವು ಪಡೆದು ಸೇತುವೆಯಿಂದ ಚಾಮರಾಜಪೇಟೆ ಕಡೆ ಮೇಲ್ಸೇತುವೆಯಿಂದ ಇಳಿದು ಒಂದನೇ ಮುಖ್ಯರಸ್ತೆ ಮೂಲಕ ಮೈಸೂರು ರಸ್ತೆ ಕಡೆ ತೆರಳಬೇಕಾಗಿದೆ.

ಸಂಜೆ 4ರಿಂದ ರಾತ್ರಿ11ರವರೆಗೆ ವಾಹನದ ಮಾರ್ಗ
ಸಂಜೆ 4ರಿಂದ ರಾತ್ರಿ 11ರವರೆಗೆ ಪುರಭವನದ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಸಾಗುವ ಮೇಲ್ಸೇತುವೆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಇನ್ನು ಮೈಸೂರು ಕಡೆಯಿಂದ ಬರುವ ವಾಹನಗಳು ಮೇಲ್ಸೇತುವೆಯ ಕೆಳಭಾಗದಲ್ಲಿ ಸಂಚರಿಸಿ ಕೆಆರ್ ಮಾರುಕಟ್ಟೆ ಬಳಸಿ ಪುರಭವನ ಕಡೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಸುಮನಹಳ್ಳಿ ಫ್ಲೈಓವರ್ ದುರಸ್ತಿ ಕಾಮಗಾರಿ
ಸುಮನಹಳ್ಳಿ ಮೇಲ್ಸೇತುವೆ ದುರಸ್ತಿ ಕಾಮಗಾರಿಯು ಸೋಮವಾರದಿಂದಲೇ ಆರಂಭವಾಗಲಿದೆ. ಆದರೆ, ಈ ಮಾರ್ಗದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಪ್ರತಿನಿತ್ಯದಂತೆ ವಾಹನ ಸಂಚಾರ ನಡೆಯಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications