ಸಿರ್ಸಿ ಸರ್ಕಲ್ ಮೇಲ್ಸೇತುವೆ ದುರಸ್ತಿ ಕಾಮಗಾರಿ ಇಂದಿನಿಂದ ಆರಂಭ
ಬೆಂಗಳೂರು,ಡಿಸೆಂಬರ್ 16: ಇಂದಿನಿಂದ ಸಿರ್ಸಿ ಸರ್ಕಲ್ ಮೇಲ್ಸೇತುವೆ ಇನ್ನೊಂದು ಬದಿಯ ದುರಸ್ತಿ ಕಾಮಗಾರಿ ಆರಂಭವಾಗಲಿದೆ.
ಸೋಮವಾರ(ಡಿಸೆಂಬರ್ 16) ಮಧ್ಯಾಹ್ನ 12 ಗಂಟೆಯಿಂದ ಮೇಲ್ಸೇತುವೆ ಸಂಚಾರ ಸ್ಥಗಿತಗೊಳ್ಳಲಿದೆ. ಸಿರ್ಸಿ ಮೇಲ್ಸೇತುವೆಯಿಂದ 2.65 ಕಿ.ಮೀ ಉದ್ದವಿದ್ದು, ಎರಡು ಹಂತಗಳಲ್ಲಿ ಕಾಮಗಾರಿ ನಡೆಸುವುದಕ್ಕೆ ಬಿಬಿಎಂಪಿ ಹಾಗೂ ಸಂಚಾರ ಪೊಲೀಸರು ಯೋಜನೆ ರೂಪಿಸಿದ್ದಾರೆ.

ಮೊದಲ ಹಂತದ ಕಾಮಗಾರಿ
ಮೈಸೂರು ರಸ್ತೆ ಕಡೆಯಿಂದ ಮೇಲ್ಸೇತುವೆ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗುತ್ತಿದೆ. ಸಂಚಾರ ಬದಲಾವಣೆ ಮಾಡಿಕೊಳ್ಳಲಾಗುತ್ತಿದೆ. ಬೆಳಗ್ಗೆ 6ರಿಂದ ಸಂಜೆ 4ವರಗೆ ಹಾಗೂ ರಾತ್ರಿ 11ರಿಂದ ಬೆಳಗ್ಗೆ 6 ಗಂಟೆವರೆಗೆ ಮೈಸೂರು ಕಡೆಯಿಂದ ಬರುವ ವಾಹನಗಳಲ್ಲಿ ಈಗಾಗಲೇ ಕಾಮಾಗಾರಿ ನಡೆಸಲಾಗಿರುವ ಮೇಲ್ಸೇತುವೆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಹೀಗೆ ಮೇಲ್ಸೇತುವೆ ಬಳಸಿ ಬರುವ ವಾಹನಗಳನ್ನು ರಾಯನ್ ವೃತ್ತದ ಬಳಿ ಎರ ತಿರುವು ಪಡೆದು ಯಥಾ ಪ್ರಕಾರ ಮೆಜೆಸ್ಟಿಕ್ ಹಾಗೂ ಪುರಭವನದ ಕಡೆ ಸಾಗಬೇಕಾಗಿದೆ.

ಟೌನ್ಹಾಲ್ನಿಂದ ಬರುವ ವಾಹನಗಳಿಗೆ ಯಾವ ಮಾರ್ಗ
ಟೌನ್ಹಾಲ್ನಿಂದ ಮೈಸೂರು ರಸ್ತೆ ಕಡೆ ಸಂಚರಿಸುವ ವಾಹನಗಳು ರಾಯನ್ ವೃತ್ತದ ಬಳಿ ಎಡಕ್ಕೆ ತಿರುವು ಪಡೆದು ರಾಯನ್ ವೃತ್ತದ ಬಳಿ ಎಡಕ್ಕೆ ತಿರುವು ಪಡೆದು ಸೇತುವೆಯಿಂದ ಚಾಮರಾಜಪೇಟೆ ಕಡೆ ಮೇಲ್ಸೇತುವೆಯಿಂದ ಇಳಿದು ಒಂದನೇ ಮುಖ್ಯರಸ್ತೆ ಮೂಲಕ ಮೈಸೂರು ರಸ್ತೆ ಕಡೆ ತೆರಳಬೇಕಾಗಿದೆ.

ಸಂಜೆ 4ರಿಂದ ರಾತ್ರಿ11ರವರೆಗೆ ವಾಹನದ ಮಾರ್ಗ
ಸಂಜೆ 4ರಿಂದ ರಾತ್ರಿ 11ರವರೆಗೆ ಪುರಭವನದ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಸಾಗುವ ಮೇಲ್ಸೇತುವೆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಇನ್ನು ಮೈಸೂರು ಕಡೆಯಿಂದ ಬರುವ ವಾಹನಗಳು ಮೇಲ್ಸೇತುವೆಯ ಕೆಳಭಾಗದಲ್ಲಿ ಸಂಚರಿಸಿ ಕೆಆರ್ ಮಾರುಕಟ್ಟೆ ಬಳಸಿ ಪುರಭವನ ಕಡೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಸುಮನಹಳ್ಳಿ ಫ್ಲೈಓವರ್ ದುರಸ್ತಿ ಕಾಮಗಾರಿ
ಸುಮನಹಳ್ಳಿ ಮೇಲ್ಸೇತುವೆ ದುರಸ್ತಿ ಕಾಮಗಾರಿಯು ಸೋಮವಾರದಿಂದಲೇ ಆರಂಭವಾಗಲಿದೆ. ಆದರೆ, ಈ ಮಾರ್ಗದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಪ್ರತಿನಿತ್ಯದಂತೆ ವಾಹನ ಸಂಚಾರ ನಡೆಯಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications