ಚರ್ಚ್ ಸ್ಟ್ರೀಟ್ ಸ್ಫೋಟ : ಆರೋಪಿಗಳ ಮಾಹಿತಿ ಪತ್ತೆ
ಬೆಂಗಳೂರು, ಫೆ. 16: ನಗರದ ಚರ್ಚ್ ಸ್ಟ್ರೀಟ್ನಲ್ಲಿ ನಡೆದಿದ್ದ ಸ್ಫೋಟ ಪ್ರಕರಣ ಆರೋಪಿಗಳ ಕುರಿತು ಖಚಿತ ಮಾಹಿತಿ ಲಭ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತರು, ಚರ್ಚ್ ಸ್ಟ್ರೀಟ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
ಪ್ರಮುಖವಾಗಿ ಎರಡು ಸಂಘಟನೆಗಳ ಮೇಲೆ ಬಲವಾದ ಶಂಕೆಯಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಸದಸ್ಯರು ಕರ್ನಾಟಕ ಹಾಗೂ ಹೊರ ರಾಜ್ಯದಲ್ಲಿ ತನಿಖೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. [ಚರ್ಚ್ ಸ್ಟ್ರೀಟ್ ನಲ್ಲಿ ಬಾಂಬ್ ಸ್ಫೋಟ]

ಪ್ರಕರಣವೇನು? : ನಗರದ ಚರ್ಚ್ ಸ್ಟ್ರೀಟ್ನಲ್ಲಿರುವ ಕೋಕೋನಟ್ ಗ್ರೋವ್ ಎಂಬ ಹೋಟೆಲಿನ ಬಳಿ 2014ರ ಡಿಸೆಂಬರ್ 28ರಂದು ಸಂಜೆ 8.30ಕ್ಕೆ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಭವಾನಿ (33) ಎಂಬ ಮಹಿಳೆ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದರು. [ಶಂಕಿತರ ರೇಖಾಚಿತ್ರ ಸಿದ್ಧ]
ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಆದರೆ, ಇದುವರೆಗೂ ಯಾವುದೇ ಆರೋಪಿಯನ್ನು ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ವಿಫಲರಾಗಿದ್ದರು. [ಸ್ಫೋಟಕ್ಕೆ ತಿಂಗಳಾದರೂ ಆರೋಪಿ ಸಿಕ್ಕಿಲ್ಲ]
ಈ ಮಧ್ಯೆ ಇಂಡಿಯನ್ ಮುಜಾಹಿದೀನ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಭಟ್ಕಳ ಮೂಲದ ಕೆಲವರನ್ನು ಬಂಧಿಸಲಾಗಿತ್ತು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications