ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಎಂಎ ಹಗರಣ: ಎಸ್‌ಐಟಿಯಿಂದ ಜಿಲ್ಲಾಧಿಕಾರಿ ವಿಜಯ್ ಶಂಕರ್ ವಿಚಾರಣೆ

|
Google Oneindia Kannada News

ಬೆಂಗಳೂರು, ಜುಲೈ 8: ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ವಿಚಾರಣೆಗೆ ಒಳಪಡಿಸಿದೆ.

ಬೆಂಗಳೂರು ನಗರ ಡಿಸಿ ಬಿಎಂ ವಿಜಯ್ ಶಂಕರ್ ಅವರನ್ನು ಸೋಮವಾರ ವಶಕ್ಕೆ ತೆಗೆದುಕೊಂಡ ಎಸ್‌ಐಟಿ, ಬಳಿಕ ವಿಚಾರಣೆಗೆ ಒಳಪಡಿಸಿದರು. ವಿಚಾರಣೆ ವೇಳೆ ಮಹತ್ವದ ಸುಳಿವು ದೊರೆತರೆ ವಿಜಯ್ ಶಂಕರ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

'ಶಾಸಕ ರೋಷನ್ ಬೇಗ್ ರಿಂದ 400 ಕೋಟಿ ರು ವಸೂಲಿ ಮಾಡಿ' 'ಶಾಸಕ ರೋಷನ್ ಬೇಗ್ ರಿಂದ 400 ಕೋಟಿ ರು ವಸೂಲಿ ಮಾಡಿ'

ಐಎಂಎ ವಂಚನೆ ಹಗರಣ ಮತ್ತು ಅದರ ಕುರಿತು ಈ ಹಿಂದೆ ನಡೆಸಲಾಗಿದ್ದ ತನಿಖೆಯಲ್ಲಿ ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

SIT interrogation Bengaluru City DC Vijay Shankar in IMA scam case

ಐಎಂಎ ಪರವಾಗಿ ವರದಿ ನೀಡಲು 4.5 ಕೋಟಿ ಲಂಚ ಪಡೆದ ಆರೋಪದಲ್ಲಿ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ. ನಾಗರಾಜ್ ಅವರನ್ನು ಶುಕ್ರವಾರ ಎಸ್‌ಐಟಿ ಪೊಲೀಸರು ಬಂಧಿಸಿದ್ದರು.

ಐಎಂಎ ಒಡೆತನದ 4 ಫಾರ್ಮಸಿಗಳ ಮೇಲೆ ಎಸ್‌ಐಟಿ ದಾಳಿ ಐಎಂಎ ಒಡೆತನದ 4 ಫಾರ್ಮಸಿಗಳ ಮೇಲೆ ಎಸ್‌ಐಟಿ ದಾಳಿ

ಆಂಬಿಡೆಂಟ್ ವಂಚನೆ ಪ್ರಕರಣ ಬಯಲಾದ ನಂತರ ಈ ರೀತಿಯ ಕಂಪೆನಿಗಳ ಕುರಿತು ವಿಚಾರಣೆ ನಡೆಸಲು ರಾಜ್ಯ ಸರ್ಕಾರವು 2018ರಲ್ಲಿ ಎಲ್ ಸಿ ನಾಗರಾಜ್ ನೇತೃತ್ವದಲ್ಲಿ ದೂರು ಪ್ರಾಧಿಕಾರ ರಚಿಸಿತ್ತು. ಆದರೆ, ಐಎಂಎ ವಿರುದ್ಧದ ದೂರುಗಳ ಕುರಿತು ಸರಿಯಾಗಿ ವಿಚಾರಣೆ ನಡೆಸದೆ ಕಂಪೆನಿಗೆ ಅನುಕೂಲವಾಗುವಂತೆ ವರದಿ ನೀಡಿದ್ದರು ಎನ್ನಲಾಗಿದೆ.

English summary
A special investigation team on Monday interrogated Bengaluru City DC Vijay Shankar in related to IMA scam case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X